Homeಕರ್ನಾಟಕಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? :...

ಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? : ಸಿದ್ದು

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ.

- Advertisement -
- Advertisement -

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ. ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ ಎಂದರು.

ಇಂದಿರಾ ಕ್ಯಾಂಟೀನ್‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ ಎಂದು ತಿಳಿಸಿದರು.

ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.20 ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು ಆದರೆ, ಇನ್ನೂ ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಲ್ಲ. ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು. ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.‌ ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ.‌ ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು? ಎಂದು ಪ್ರಶ್ನಿಸಿದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ. ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ. ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದರು.

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ. ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ.
ಪ್ರಧಾನಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ ಎಂದು ಆಗ್ರಹಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...