Homeಮುಖಪುಟಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

ಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

- Advertisement -
- Advertisement -

ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ”ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ” ಇದು ಎಂದು ಮೊಯಿತ್ರಾ ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ED ಯ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ನನ್ನ ವಕೀಲರು – ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ಅವರ ತಂಡಕ್ಕೆ ಧನ್ಯವಾದಗಳು. ಇದು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯಗಳು” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಇಡಿ ನಿರ್ದೇಶಕರ ವಿಸ್ತರಣೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನನ್ನ ಮನವಿಗೆ ಜಯ ಸಿಕ್ಕಿದೆ. ಕಾನೂನುಬಾಹಿರ ವಿಸ್ತರಣೆ ಎಂದಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು” ಎಂದಿದ್ದಾರೆ.

”ಬಿಜೆಪಿಗರೇ, ನಾವು ನಿಮ್ಮೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ, ನಾವು ನಿಮ್ಮೊಂದಿಗೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ನಾವು ಹೊಲಗಳಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುತ್ತೇವೆ, ನಾವು ಎಂದಿಗೂ ಶರಣಾಗುವುದಿಲ್ಲ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಮತ್ತು ಬಿಜೆಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಬಳಸುವ ‘ಕೈಗೊಂಬೆ’ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಂಗಳವಾರ ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಗಂಟೆಗಳ ನಂತರ ವಾಗ್ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನವೆಂಬರ್ 2021 ಮತ್ತು ನವೆಂಬರ್ 2022ರಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದು ಕಾನೂನುಬಾಹಿರ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಆದಾಗ್ಯೂ, ಹೊಸ ಮುಖ್ಯಸ್ಥರನ್ನು ಹುಡುಕುವ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ ನಂತರ ಜುಲೈ 31ರವರೆಗೆ ಕುಮಾರ್ ಅವರ ಸ್ಥಾನದಲ್ಲಿ ಮುಂದುವರಿಯಲು ನ್ಯಾಯಾಲಯ ಅನುಮತಿ ನೀಡಿದೆ.

ವಿಸ್ತರಣೆಗಳು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಪೀಠವು ಗಮನಿಸಿದೆ. ಇದರಲ್ಲಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನವೆಂಬರ್ 2021ರಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತು.

ನವೆಂಬರ್ 17, 2021 ಮತ್ತು ನವೆಂಬರ್ 17, 2022 ರಂದು ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಗಳನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಬಂದವು ಅವರಲ್ಲಿ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕೂಡ ಇದ್ದಾರೆ.

”ಸುಪ್ರೀಂ ಕೋರ್ಟ್ ತೀರ್ಪಿನ ದೃಷ್ಟಿಯಿಂದ, 2021ರ ವಿಸ್ತರಣೆಯ ನಂತರ ಮಿಶ್ರಾ ಕೈಗೊಂಡ ಎಲ್ಲಾ ಕ್ರಮಗಳನ್ನು “ಕಾನೂನುಬಾಹಿರ ಮತ್ತು ಕಳಂಕಿತ” ಎಂದು ಪರಿಗಣಿಸಬಹುದು” ಎಂದು ಮಂಗಳವಾರ ಸುರ್ಜೆವಾಲಾ ಅವರು ಹೇಳಿದರು.

”ನವೆಂಬರ್ 17, 2021 ಮತ್ತು 17 ನೇ ನವೆಂಬರ್, 2022 ರಂದು ಇಡಿ ನಿರ್ದೇಶಕರಿಗೆ ಎರಡು ಕಾನೂನುಬಾಹಿರ ವಿಸ್ತರಣೆ ನೀಡಿರುವುದಕ್ಕೆ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಜವಾಬ್ದಾರರಲ್ಲ. ಅವರ ವಿಸ್ತರಣೆ ಜವಾಬ್ದಾರಿಯನ್ನು ಸ್ವತಃ ಪ್ರಧಾನಿಯೇ ಹೊರಬೇಕು. ಹಾಗಾಗಿ ಪ್ರಧಾನಿ ಮೋದಿ ಅವರು ಕ್ಷಮೆ ಯಾಚಿಸಬೇಕು” ಎಂದು ಸುರ್ಜೆವಾಲಾ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯದ ಗೆಲುವು ಎಂದು ಸುರ್ಜೇವಾಲಾ ಬಣ್ಣಿಸಿದ್ದು, ”ರಾಜಕೀಯ ವಿರೋಧಿಗಳನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿ ಭಯೋತ್ಪಾದನೆಯನ್ನು ಹರಡಲು ಮೋದಿ ಸರ್ಕಾರವು ರಾಜಕೀಯ ಸೇಡಿಗಾಗಿ ಇಡಿ ಯ ದುರುಪಯೋಗ ಮಾಡಿಕೊಂಡಿದೆ” ಎಂದು ಅವರು ಹೇಳಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತೋಷವಾಗಿರುವವರು ವಿವಿಧ ಕಾರಣಗಳಿಗಾಗಿ ಭ್ರಮೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ”ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ತಂದ ತಿದ್ದುಪಡಿಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...