Homeಮುಖಪುಟಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

ಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

- Advertisement -
- Advertisement -

ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ”ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ” ಇದು ಎಂದು ಮೊಯಿತ್ರಾ ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ED ಯ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ನನ್ನ ವಕೀಲರು – ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ಅವರ ತಂಡಕ್ಕೆ ಧನ್ಯವಾದಗಳು. ಇದು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯಗಳು” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಇಡಿ ನಿರ್ದೇಶಕರ ವಿಸ್ತರಣೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನನ್ನ ಮನವಿಗೆ ಜಯ ಸಿಕ್ಕಿದೆ. ಕಾನೂನುಬಾಹಿರ ವಿಸ್ತರಣೆ ಎಂದಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು” ಎಂದಿದ್ದಾರೆ.

”ಬಿಜೆಪಿಗರೇ, ನಾವು ನಿಮ್ಮೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ, ನಾವು ನಿಮ್ಮೊಂದಿಗೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ನಾವು ಹೊಲಗಳಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುತ್ತೇವೆ, ನಾವು ಎಂದಿಗೂ ಶರಣಾಗುವುದಿಲ್ಲ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಮತ್ತು ಬಿಜೆಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಬಳಸುವ ‘ಕೈಗೊಂಬೆ’ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಂಗಳವಾರ ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಗಂಟೆಗಳ ನಂತರ ವಾಗ್ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನವೆಂಬರ್ 2021 ಮತ್ತು ನವೆಂಬರ್ 2022ರಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದು ಕಾನೂನುಬಾಹಿರ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಆದಾಗ್ಯೂ, ಹೊಸ ಮುಖ್ಯಸ್ಥರನ್ನು ಹುಡುಕುವ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ ನಂತರ ಜುಲೈ 31ರವರೆಗೆ ಕುಮಾರ್ ಅವರ ಸ್ಥಾನದಲ್ಲಿ ಮುಂದುವರಿಯಲು ನ್ಯಾಯಾಲಯ ಅನುಮತಿ ನೀಡಿದೆ.

ವಿಸ್ತರಣೆಗಳು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಪೀಠವು ಗಮನಿಸಿದೆ. ಇದರಲ್ಲಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನವೆಂಬರ್ 2021ರಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತು.

ನವೆಂಬರ್ 17, 2021 ಮತ್ತು ನವೆಂಬರ್ 17, 2022 ರಂದು ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಗಳನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಬಂದವು ಅವರಲ್ಲಿ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕೂಡ ಇದ್ದಾರೆ.

”ಸುಪ್ರೀಂ ಕೋರ್ಟ್ ತೀರ್ಪಿನ ದೃಷ್ಟಿಯಿಂದ, 2021ರ ವಿಸ್ತರಣೆಯ ನಂತರ ಮಿಶ್ರಾ ಕೈಗೊಂಡ ಎಲ್ಲಾ ಕ್ರಮಗಳನ್ನು “ಕಾನೂನುಬಾಹಿರ ಮತ್ತು ಕಳಂಕಿತ” ಎಂದು ಪರಿಗಣಿಸಬಹುದು” ಎಂದು ಮಂಗಳವಾರ ಸುರ್ಜೆವಾಲಾ ಅವರು ಹೇಳಿದರು.

”ನವೆಂಬರ್ 17, 2021 ಮತ್ತು 17 ನೇ ನವೆಂಬರ್, 2022 ರಂದು ಇಡಿ ನಿರ್ದೇಶಕರಿಗೆ ಎರಡು ಕಾನೂನುಬಾಹಿರ ವಿಸ್ತರಣೆ ನೀಡಿರುವುದಕ್ಕೆ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಜವಾಬ್ದಾರರಲ್ಲ. ಅವರ ವಿಸ್ತರಣೆ ಜವಾಬ್ದಾರಿಯನ್ನು ಸ್ವತಃ ಪ್ರಧಾನಿಯೇ ಹೊರಬೇಕು. ಹಾಗಾಗಿ ಪ್ರಧಾನಿ ಮೋದಿ ಅವರು ಕ್ಷಮೆ ಯಾಚಿಸಬೇಕು” ಎಂದು ಸುರ್ಜೆವಾಲಾ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯದ ಗೆಲುವು ಎಂದು ಸುರ್ಜೇವಾಲಾ ಬಣ್ಣಿಸಿದ್ದು, ”ರಾಜಕೀಯ ವಿರೋಧಿಗಳನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿ ಭಯೋತ್ಪಾದನೆಯನ್ನು ಹರಡಲು ಮೋದಿ ಸರ್ಕಾರವು ರಾಜಕೀಯ ಸೇಡಿಗಾಗಿ ಇಡಿ ಯ ದುರುಪಯೋಗ ಮಾಡಿಕೊಂಡಿದೆ” ಎಂದು ಅವರು ಹೇಳಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತೋಷವಾಗಿರುವವರು ವಿವಿಧ ಕಾರಣಗಳಿಗಾಗಿ ಭ್ರಮೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ”ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ತಂದ ತಿದ್ದುಪಡಿಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...