Homeಮುಖಪುಟಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

ಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

- Advertisement -
- Advertisement -

ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ”ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ” ಇದು ಎಂದು ಮೊಯಿತ್ರಾ ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ED ಯ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ನನ್ನ ವಕೀಲರು – ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ಅವರ ತಂಡಕ್ಕೆ ಧನ್ಯವಾದಗಳು. ಇದು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯಗಳು” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಇಡಿ ನಿರ್ದೇಶಕರ ವಿಸ್ತರಣೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನನ್ನ ಮನವಿಗೆ ಜಯ ಸಿಕ್ಕಿದೆ. ಕಾನೂನುಬಾಹಿರ ವಿಸ್ತರಣೆ ಎಂದಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು” ಎಂದಿದ್ದಾರೆ.

”ಬಿಜೆಪಿಗರೇ, ನಾವು ನಿಮ್ಮೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ, ನಾವು ನಿಮ್ಮೊಂದಿಗೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ನಾವು ಹೊಲಗಳಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುತ್ತೇವೆ, ನಾವು ಎಂದಿಗೂ ಶರಣಾಗುವುದಿಲ್ಲ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಮತ್ತು ಬಿಜೆಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಬಳಸುವ ‘ಕೈಗೊಂಬೆ’ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಂಗಳವಾರ ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಗಂಟೆಗಳ ನಂತರ ವಾಗ್ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನವೆಂಬರ್ 2021 ಮತ್ತು ನವೆಂಬರ್ 2022ರಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದು ಕಾನೂನುಬಾಹಿರ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಆದಾಗ್ಯೂ, ಹೊಸ ಮುಖ್ಯಸ್ಥರನ್ನು ಹುಡುಕುವ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ ನಂತರ ಜುಲೈ 31ರವರೆಗೆ ಕುಮಾರ್ ಅವರ ಸ್ಥಾನದಲ್ಲಿ ಮುಂದುವರಿಯಲು ನ್ಯಾಯಾಲಯ ಅನುಮತಿ ನೀಡಿದೆ.

ವಿಸ್ತರಣೆಗಳು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಪೀಠವು ಗಮನಿಸಿದೆ. ಇದರಲ್ಲಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನವೆಂಬರ್ 2021ರಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತು.

ನವೆಂಬರ್ 17, 2021 ಮತ್ತು ನವೆಂಬರ್ 17, 2022 ರಂದು ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಗಳನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಬಂದವು ಅವರಲ್ಲಿ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕೂಡ ಇದ್ದಾರೆ.

”ಸುಪ್ರೀಂ ಕೋರ್ಟ್ ತೀರ್ಪಿನ ದೃಷ್ಟಿಯಿಂದ, 2021ರ ವಿಸ್ತರಣೆಯ ನಂತರ ಮಿಶ್ರಾ ಕೈಗೊಂಡ ಎಲ್ಲಾ ಕ್ರಮಗಳನ್ನು “ಕಾನೂನುಬಾಹಿರ ಮತ್ತು ಕಳಂಕಿತ” ಎಂದು ಪರಿಗಣಿಸಬಹುದು” ಎಂದು ಮಂಗಳವಾರ ಸುರ್ಜೆವಾಲಾ ಅವರು ಹೇಳಿದರು.

”ನವೆಂಬರ್ 17, 2021 ಮತ್ತು 17 ನೇ ನವೆಂಬರ್, 2022 ರಂದು ಇಡಿ ನಿರ್ದೇಶಕರಿಗೆ ಎರಡು ಕಾನೂನುಬಾಹಿರ ವಿಸ್ತರಣೆ ನೀಡಿರುವುದಕ್ಕೆ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಜವಾಬ್ದಾರರಲ್ಲ. ಅವರ ವಿಸ್ತರಣೆ ಜವಾಬ್ದಾರಿಯನ್ನು ಸ್ವತಃ ಪ್ರಧಾನಿಯೇ ಹೊರಬೇಕು. ಹಾಗಾಗಿ ಪ್ರಧಾನಿ ಮೋದಿ ಅವರು ಕ್ಷಮೆ ಯಾಚಿಸಬೇಕು” ಎಂದು ಸುರ್ಜೆವಾಲಾ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯದ ಗೆಲುವು ಎಂದು ಸುರ್ಜೇವಾಲಾ ಬಣ್ಣಿಸಿದ್ದು, ”ರಾಜಕೀಯ ವಿರೋಧಿಗಳನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿ ಭಯೋತ್ಪಾದನೆಯನ್ನು ಹರಡಲು ಮೋದಿ ಸರ್ಕಾರವು ರಾಜಕೀಯ ಸೇಡಿಗಾಗಿ ಇಡಿ ಯ ದುರುಪಯೋಗ ಮಾಡಿಕೊಂಡಿದೆ” ಎಂದು ಅವರು ಹೇಳಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತೋಷವಾಗಿರುವವರು ವಿವಿಧ ಕಾರಣಗಳಿಗಾಗಿ ಭ್ರಮೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ”ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ತಂದ ತಿದ್ದುಪಡಿಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...