Homeಮುಖಪುಟಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

- Advertisement -
- Advertisement -

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 3,317 ಗ್ರಾಮ ಪಂಚಾಯತ್‌ಗಳ ಪೈಕಿ 2,552 ರಲ್ಲಿ ಗೆಲುವು ಸಾಧಿಸಿದೆ ಎಂದು NDTV ವರದಿ ಮಾಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು 341 ಪಂಚಾಯತ್ ಸಮಿತಿಗಳಿಗೆ ನಡೆದ ಚುನುವಾಣೆಗಳಲ್ಲಿ 232 ಮತ್ತು 20 ಜಿಲ್ಲಾ ಪರಿಷತ್‌ಗಳಲ್ಲಿ 12ನ್ನು ಗೆದ್ದಿದೆ.

ಬಿಜೆಪಿಯು ಕೇವಲ 212 ಗ್ರಾಮ ಪಂಚಾಯತಿಗಳು, ಏಳು ಪಂಚಾಯತಿ ಸಮಿತಿಗಳು ಗೆದ್ದಿದೆ. ಇನ್ನು ಯಾವುದೇ ಜಿಲ್ಲಾ ಪರಿಷತ್ತುಗಳನ್ನು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಎಡರಂಗವು 15 ಗ್ರಾಮ ಪಂಚಾಯತ್ ಮತ್ತು ಒಂದು ಜಿಲ್ಲಾ ಪರಿಷತ್ ಅನ್ನು ಗೆದ್ದಿದೆ. ಕಾಂಗ್ರೆಸ್ 26 ಗ್ರಾಮ ಪಂಚಾಯತಿಗಳನ್ನು ಪಡೆದುಕೊಂಡಿದೆ ಆದರೆ ಪಂಚಾಯತಿ ಸಮಿತಿಗಳು ಮತ್ತು ಜಿಲ್ಲಾ ಪರಿಷತ್‌ಗಳಲ್ಲಿ ಯಾವುದರಲ್ಲಿಯೂ ಗೆಲುವು ಕಂಡಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪಶ್ಚಿಮ ಬಂಗಾಳದ ಮೂರು ಹಂತದ ಪಂಚಾಯತ್ ವ್ಯವಸ್ಥೆಯ 73,887 ಸ್ಥಾನಗಳಿಗೆ ಜುಲೈ 8ರಂದು ಚುನಾವಣೆ ನಡೆಯಿತು. ಮತ ಎಣಿಕೆ ಮಂಗಳವಾರ ಆರಂಭಿಸಲಾಗಿತ್ತು.. ಚುನಾವಣೆಯ ಸಂದರ್ಭದಲ್ಲಿ ಹಿಂಸಾಚಾರದ ಘಟನೆಗಳು ನಡೆದವು. ಈ ಹಿಂಸಾಚಾರದಲ್ಲಿ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ. ಈ ಹಿಂಸಾಚಾರದಲ್ಲಿ ಮತಪೆಟ್ಟಿಗೆಗಳನ್ನು ಧ್ವಂಸ ಮಾಡಲಾಗಿದೆ ಎನ್ನುವ ವರದಿಗಳು ಬಂದಿವೆ. ಹಿಂಸಾಚಾರದಿಂದಾಗಿ ಸೋಮವಾರ 696 ಬೂತ್‌ಗಳಲ್ಲಿ ಮರುಮತದಾನ ನಡೆಸಲಾಯಿತು. ಮಂಗಳವಾರವೂ ರಾಜ್ಯದ ವಿವಿಧೆಡೆ ಹಿಂಸಾಚಾರ ವರದಿಯಾಗಿದೆ.

ಟಿಎಂಸಿ ಪಕ್ಷದ ಅಭ್ಯರ್ಥಿಗಳು ಅತಿಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿರುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದರು. ”ತಮ್ಮ ಪಕ್ಷವು ಜನರ ಹೃದಯದಲ್ಲಿ ನೆಲೆಸಿದೆ” ಎಂದು ಹೇಳಿದ್ದಾರೆ.

”ರಾಜ್ಯದಲ್ಲಿ ವಿರೋಧ ಪಕ್ಷಗಳು ತೃಣಮೂಲ ಕಾಂಗ್ರೆಸ್ ವಿರುದ್ಧ ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡಿದವು ಆದರೆ, ಅವರು ಮತದಾರರನ್ನು ಓಲೈಸಲು ಸಾಧ್ಯವಾಗಲಿಲ್ಲ” ಎಂದು ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

”ಪ್ರತಿಪಕ್ಷಗಳ ‘ನೋ ವೋಟ್ ಟು ಮಮತಾ’ ಅಭಿಯಾನವನ್ನು ನಡೆಸಿದರು ಆದರೆ ಮತದಾರರು ಮಾತ್ರ ಅದನ್ನು ‘ಮಮತಾಗೆ ಮತ ನೀಡಿ’ ಎಂದು ಪರಿವರ್ತಿಸಿದ್ದಾರೆ. ಆವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಟಿಎಂಸಿ ಅಚಲ ಬೆಂಬಲದೊಂದಿಗೆ ಲೋಕಸಭಾ ಚುನಾವಣೆಯಲ್ಲಿ ನಾವು ಖಂಡಿತವಾಗಿಯೂ ಘರ್ಜಿಸುವ ಜನಾದೇಶವನ್ನು ಹೊಂದುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

 

ಇದನ್ನೂ ಓದಿ: ಪ.ಬಂಗಾಳ: ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...