Homeಕರ್ನಾಟಕಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅಧಿವೇಶನದಲ್ಲೂ  ಆ ಬಗ್ಗೆ ಚರ್ಚೆಯಾಗುತ್ತಿದೆ. ನಾನು ಯಾರ ಜತೆಗಾದರೂ ಅಡ್ಡೆಸ್ಟ್‌ಮೆಂಟ್ ಮಾಡಿಕೊಂಡಿದ್ದೇನೆ ಎಂಬುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳುವು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರು, ”ನೀವು ಪದೇ ಪದೇ ವಿರೋಧ ಪಕ್ಷ ನಾಯಕ ಆಗಲ್ಲ ಎಂದು ಹೇಳುತ್ತೀರಿ, ಹಾಗಿದ್ದರೆ ನೀವು ಯಾರ ಜೊತೆಗೂ ಅಡ್ವಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಕೆಣಕಿದರು.

ಯತ್ನಾಳ ಅವರ ಈ ಮಾತಿಗೆ ಗರಂ ಆದ ಸಿಎಂ ಸಿದ್ದರಾಮಯ್ಯ ಅವರು, ”ನಾನು ಯಾರ ಜೊತೆಗೂ ನನ್ನ ಜೀವನದಲ್ಲಿ ಅಡ್ಡೆಸ್ಟ್‌ಮೆಂಟ್ ರಾಜಕೀಯ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ” ಎಂದು ಗುಡುಗಿದರು.

”ನೀವು ಪದೇ ಪದೇ ಮಾತನಾಡುವುದರಿಂದ ಸಂಸದೀಯ ಪಟು ಆಗಲ್ಲ. ನೀವು ಎಷ್ಟೇ ಕಿರುಚಾಡಿದರೂ ನನಗೆ ಇರುವ ಮಾಹಿತಿ ಪ್ರಕಾರ ನಿಮಗೆ ವಿಪಕ್ಷ ನಾಯಕ ಮಾಡುವುದಿಲ್ಲ. ಅರಗ ಜ್ಞಾನೇಂದ್ರ ಆಕಾಂಕ್ಷಿ ಅಲ್ಲ, ಅಶ್ವತ್ಥ ನಾರಾಯಣ, ಬೊಮ್ಮಾಯಿ, ಆಶೋಕ್ ಆಕಾಂಕ್ಷಿಗಳಾಗಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಅರಗ, ಅಶೋಕ ಮತ್ತು ಅಶ್ವತ್ಥನಾರಾಯಣ ಅವರುತಾವು ಆಕಾಂಕ್ಷಿ ಅಲ್ಲ ಎಂದರು.

ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಿದ ಯತ್ನಾಳ, ”ಹಿಂದೆ ನೀವು ಕುಮಾರಸ್ವಾಮಿ ಅವರಿಗೆ ಅಪ್ಪನಾಣೆಗೂ ಸಿಎಂ ಆಗಲ್ಲ ಎಂದು ಹೇಳಿದ್ದೀರಿ. ಆದರೆ, ಅವರು ಸಿಎಂ ಆದರು. ಈಗ ನೀವು ನನಗೆ ವಿಪಕ್ಷ ನಾಯಕ ಆಗಲ್ಲ ಎನ್ನುತ್ತಿದ್ದೀರಿ. ಹಾಗಾಗಿ ನಾನೇ ವಿಪಕ್ಷ ನಾಯಕ ಆಗುತ್ತೇನೆ” ಎಂದರು.

”ನೀವೆಷ್ಟೇ ಬೆಂಕಿ ಹಚ್ಚಿದರೂ ಹೊತ್ತಿಕೊಳ್ಳಲ್ಲ. ಪದೇ ಪದೇ ವಿಪಕ್ಷ ನಾಯಕ ಆಗಲ್ಲ ಎನ್ನುತ್ತಿದ್ದೀರಿ. ಹೀಗಾಗಿ ನೀವು ಯಾರ ಜೊತೆಗೋ ಅಡ್ಡೆಸ್ಟ್‌ಮೆಂಟ್ ಮಾಡಿಕೊಂಡಿರಬೇಕು” ಎಂದು ಯತ್ನಾಳ ಮತ್ತೆ ಛೇಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಲಕ್ಷಣ ಸವದಿ, ”ವಿರೋಧಪಕ್ಷದ ಸ್ಥಾನವನ್ನು ಬಿಜೆಪಿಯವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎರವಲು ಸೇವೆಯ ಮೇಲೆ ಬಿಟ್ಟುಕೊಡಲಿದ್ದಾರೆ” ಎಂದು ಲೇವಡಿ ಮಾಡಿದರು.

”ಕುಮಾರಸ್ವಾಮಿ ಅವರೇ, ಆರಂಭದಲ್ಲಿ ನೀವು ವಿರೋಧಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡಿ, ವಿರೋಧ ಪಕ್ಷದ ನಾಯಕನ ಸ್ಥಾನ ಕುಮಾರಸ್ವಾಮಿ ಅವರ ಮನೆ ಬಾಗಿಲಿಗೆ ಬರುತ್ತದೆ. ಹೀಗಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಬಿಜೆಪಿಯ ಯಾವುದೇ ನಾಯಕ ಕೂರುತ್ತಿಲ್ಲ. ಆ ಸ್ಥಾನಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ” ಎಂದೂ ಕುಟುಕಿದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜು.26, 27ರವರೆಗೆ ಅವಕಾಶ: ಸಚಿವ ಕೆಜೆ ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...