HomeಮುಖಪುಟUAPA ಪ್ರಕರಣ: ಜು.24ಕ್ಕೆ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

UAPA ಪ್ರಕರಣ: ಜು.24ಕ್ಕೆ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

2020ರ ದೆಹಲಿ ಗಲಭೆಗೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯನ್ನು ಜುಲೈ 24 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಬುಧವಾರ ಹೇಳಿದೆ.

ದೆಹಲಿ ಹೈಕೋರ್ಟ್‌ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದರು. ಆ ಆದೇಶವನ್ನು ಪ್ರಶ್ನಿಸಿ ಉಮರ್ ಖಾಲಿದ್ ಅವರು ಸುಪ್ರೀಂ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಈ ಹಿಂದೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು. ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ವಕೀಲ ರಜತ್ ನಾಯರ್, ಪ್ರಕರಣದ ಚಾರ್ಜ್‌ಶೀಟ್ ಸಾವಿರಾರು ಪುಟಗಳಷ್ಟಿದೆ ಎಂದು ವಾದಿಸಿ, ಈ ವಿಷಯದಲ್ಲಿ ಕೌಂಟರ್ ಅಫಿಡವಿಟ್ ಸಲ್ಲಿಸಲು ಸ್ವಲ್ಪ ಸಮಯಾವಕಾಶವನ್ನು ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.

ಖಾಲಿದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ”ಜಾಮೀನು ವಿಚಾರದಲ್ಲಿ ಯಾವ ಕೌಂಟರ್‌ ಸಲ್ಲಿಸಬೇಕು? ಆ ವ್ಯಕ್ತಿ ಎರಡು ವರ್ಷ ಮತ್ತು 10 ತಿಂಗಳಿನಿಂದ ಜೈಲಿನಲ್ಲಿದ್ದಾನೆ ಹೇಳಿದ್ದಾರೆ.

ದೆಹಲಿ ಪೊಲೀಸರು ಪ್ರತಿಕ್ರಿಯೆ ಸಲ್ಲಿಸಲು ಸಮಯ ಕೋರಿದ ನಂತರ ನ್ಯಾಯಮೂರ್ತಿ ಎಎಸ್ ಬೋಪಣ್ಣ ಮತ್ತು ನ್ಯಾಯಮೂರ್ತಿ ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಜುಲೈ 24 ರಂದು ಖಾಲಿದ್ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲು ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್,”ಉಮರ್ ಖಾಲಿದ್ ಅವರು ಪ್ರಕರಣದ ಇತರ ಸಹ-ಆರೋಪಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅವರ ವಿರುದ್ಧದ ಆರೋಪಗಳು ಪ್ರಾಥಮಿಕವಾಗಿ ನಿಜವೆಂದು ಹೇಳಿದೆ. ಮೇಲ್ನೋಟಕ್ಕೆ ಪ್ರಕರಣದಲ್ಲಿ ಅವರ ಕ್ರಮಗಳು ಯುಎಪಿಎ ಅಡಿಯಲ್ಲಿ ”ಭಯೋತ್ಪಾದಕ ಕೃತ್ಯ” ಎಂದು ಅರ್ಹತೆ ಪಡೆದಿವೆ” ಎಂದು ಹೈಕೋರ್ಟ್ ಹೇಳಿದೆ.

ಏನಿದು ಪ್ರಕರಣ:

2020ರ ದೆಹಲಿ ಗಲಭೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಆರೋಪಗಳ ಮೇಲೆ ಉಮರ್ ಖಾಲಿದ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.

ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ. ಈ ಎಫ್‌ಐಆರ್‌ ಸಂಬಂಧಿಸಿದಂತೆ ಕೋರ್ಟ್ ಆರೋಪ ಮುಕ್ತವನ್ನಾಗಿ ಮಾಡಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ”ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ” ಎನ್ನುವುದಾಗಿದೆ.

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: ಕೇರಳ: ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿ ವಿರುದ್ಧ ಯುಎಪಿಎ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...