Homeಮುಖಪುಟದೆಹಲಿಯಲ್ಲಿ ಮಿತಿ ಮೀರಿದ ಪ್ರವಾಹ ಪರಿಸ್ಥಿತಿ, ಅಪಾಯದ ಮಟ್ಟ ತಲುಪಿದ ಯಮುನಾ ನದಿ - ಕಾರಣಗಳೇನು?

ದೆಹಲಿಯಲ್ಲಿ ಮಿತಿ ಮೀರಿದ ಪ್ರವಾಹ ಪರಿಸ್ಥಿತಿ, ಅಪಾಯದ ಮಟ್ಟ ತಲುಪಿದ ಯಮುನಾ ನದಿ – ಕಾರಣಗಳೇನು?

- Advertisement -
- Advertisement -

ಕಳೆದೆರಡು ದಿನಗಳಿಂದ ಮಳೆಯಾಗದಿದ್ದರೂ ಸಹ ದೆಹಲಿಯ ಯಮುನಾ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ಏಕೆಂದರೆ ಪಕ್ಕದ ಹರಿಯಾಣದಲ್ಲಿ ಹೆಚ್ಚಿನ ಮಳೆಯಾಗಿದ್ದು, ಹಥ್ನಿ ಕುಂಡ್ ಬ್ಯಾರೇಜ್‌ನಿಂದ ನೀರು ಬಿಡುತ್ತಿರುವುದರಿಂದ ದೆಹಲಿಯ ರಸ್ತೆಗಳು ನೀರಿನಿಂದ ಆವೃತವಾಗು ಪರಿಸ್ಥಿತಿ ಎದುರಾಗಿದೆ. ದೆಹಲಿಯಿಂದ 180 ಕಿ.ಮೀ ದೂರದಲ್ಲಿರುವ ಈ ಬ್ಯಾರೇಜ್‌ನಿಂದ ಪ್ರತಿ ವರ್ಷದ ಮಾನ್ಸೂನ್ ವೇಳೆ ಈ ಹಥ್ನಿ ಕುಂಡ್ ಬ್ಯಾರೇಜ್‌ನಿಂದ ಬಿಡುತ್ತಿದ್ದರೂ ಸಹ ಈ ಬಾರಿ ಅತಿ ಹೆಚ್ಚಿನ ಮಳೆಯಾಗಿರುವುದರಿಂದ ದೆಹಲಿ ನೀರಿನಿಂದ ಆವೃತವಾಗುವ ಪರಸ್ಥಿತಿ ಎದುರಾಗಿದೆ. ಪರಿಣಾಮ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೇಂದ್ರ ಜಲ ಆಯೋಗದ ಅಧಿಕಾರಿಗಳ ಪ್ರಕಾರ, ಈ ವರ್ಷ ಹಥ್ನಿ ಕುಂಡ್ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ಅತಿ ಕಡಿಮೆ ಸಮಯದಲ್ಲಿ ದೆಹಲಿ ತಲುಪಿದೆ ಎನ್ನಲಾಗಿದೆ. ಏಕೆಂದರೆ ನದಿ ಪಾತ್ರದ ಪ್ರವಾಹದ ಪ್ರದೇಶದ ಅತಿಕ್ರಮಣವಾಗಿರುವುದು, ನದಿಯ ಹೂಳೆತ್ತದೆ ಇರುವುದರಿಂದ ನೀರು ಅತಿ ಬೇಗನೆ ತಲುಪಿ ಪ್ರವಾಹ ಉಂಟಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದೆಹಲಿಯು ಶನಿವಾರ ಮತ್ತು ಭಾನುವಾರದಂದು ವಿಪರೀತ ಮಳೆಗೆ ಸಾಕ್ಷಿಯಾಯಿತು. 40 ವರ್ಷಗಳಲ್ಲಿ ಜುಲೈ ತಿಂಗಳಿನಲ್ಲಿ ಅತಿ ಹೆಚ್ಚಿನ ಮಳೆಯನ್ನು ದೆಹಲಿ ದಾಖಲಿಸಿದೆ. ದೆಹಲಿಯಲ್ಲಿ ಶನಿವಾರ 100 ಮಿ.ಮೀ ಮಳೆಯಾದರೆ, ಭಾನುವಾರ ಬೆಳಗ್ಗೆ 8.30ಕ್ಕೆ 153 ಮಿ.ಮೀ ಮಳೆ ದಾಖಲಾಗಿದೆ. ಇಷ್ಟು ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಪ್ರವಾಹಕ್ಕೆ ಕಾರಣವಾಗಿದೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹತ್ನಿಕುಂಡ್ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ದೆಹಲಿಗೆ ತಲುಪಲು ಕಡಿಮೆ ಸಮಯ ತೆಗೆದುಕೊಂಡಿರುವುದನ್ನು ನಾವು ಗಮನಿಸಿದ್ದೇವೆ. ಅತಿಕ್ರಮಣ ಮತ್ತು ಹೂಳು ತುಂಬಿರುವುದು ಮುಖ್ಯ ಕಾರಣ. ಮೊದಲು ನೀರು ಹರಿಯಲು ಹೆಚ್ಚು ಸ್ಥಳಾವಕಾಶವನ್ನು ಹೊಂದಿತ್ತು. ಸುಮಾರು 180 ಕಿಲೋಮೀಟರ್ ದೂರದಲ್ಲಿರುವ ಹರಿಯಾಣದ ಯಮುನಾನಗರದ ಬ್ಯಾರೇಜ್‌ನಿಂದ ನೀರು ದೆಹಲಿಯನ್ನು ತಲುಪಲು ಸುಮಾರು ಎರಡರಿಂದ ಮೂರು ದಿನಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಈಗ ಬೇಗನೇ ಹರಿದುಬಂದಿದ್ದು ಪ್ರವಾಹಕ್ಕೆ ಕಾರಣವಾಗಿದೆ ಎಂದು ಜಲ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರವರು ಗೃಹ ಸಚಿವ ಅಮಿತ್‌ ಶಾರವರಿಗೆ ಪತ್ರ ಬರೆದಿದ್ದು, ಜಿ20 ಸಮ್ಮೇಳನ ನಡೆಯುವುದರಿಂದ ಹಥ್ನಿ ಕುಂಡ್ ಬ್ಯಾರೇಜ್‌ನಿಂದ ನಿಧಾನಗತಿಯಿಂದ ನೀರು ಹರಿಸಬೇಕೆಂದು ಮನವಿ ಮಾಡಿದ್ದಾರೆ.

“ಅಗತ್ಯವಿಲ್ಲದಿದ್ದರೆ ಜನರು ಹೊರಗೆ ಹೋಗಬೇಡಿ ಮತ್ತು ಮನೆಯಿಂದ ಕೆಲಸ ಮಾಡುವಂತೆ ನಾನು ವಿನಂತಿಸುತ್ತೇನೆ. ನಾವು ಪೀಡಿತ ಪ್ರದೇಶಗಳಲ್ಲಿ ಶಾಲೆಗಳನ್ನು ಮುಚ್ಚಿದ್ದೇವೆ. ನಾವು ಪರಿಹಾರ ಶಿಬಿರಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತಿದ್ದೇವೆ. ಮಧ್ಯಾಹ್ನದ ವೇಳೆಗೆ ಪ್ರವಾಹ ಪರಿಸ್ಥಿತಿ ತಗ್ಗುವ ಸಂಭವವಿದೆ ಎಂದು ಜಲ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...