Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...