Homeಕರ್ನಾಟಕಘೋಷಿತ ಗ್ಯಾರಂಟಿಗಳು ಮತ್ತು ಉದ್ದೇಶಿತ ಹೊಸ ಆರ್ಥಿಕ ಮಾದರಿಯ ನಡುವೆ..

ಘೋಷಿತ ಗ್ಯಾರಂಟಿಗಳು ಮತ್ತು ಉದ್ದೇಶಿತ ಹೊಸ ಆರ್ಥಿಕ ಮಾದರಿಯ ನಡುವೆ..

- Advertisement -
- Advertisement -

ಹೊಸ ಸರಕಾರದ ಮೊದಲ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ ಬಗ್ಗೆ ದೇಶದಾದ್ಯಂತ ಅದಮ್ಯ ಕುತೂಹಲವಿತ್ತು. ರಾಜ್ಯವೊಂದರ ಬಜೆಟ್ ಕುರಿತಾಗಿ ಈ ರೀತಿ ವ್ಯಾಪಕ ಕುತೂಹಲ ಕಂಡದ್ದು ದೇಶದ ಚರಿತ್ರೆಯಲ್ಲೇ ಇದುವೇ ಮೊದಲಿರಬೇಕು. ಅಷ್ಟೇ ಅಲ್ಲ. ಅಭೂತಪೂರ್ವ ಎನ್ನುವಂತೆ ಬಜೆಟ್ ಮಂಡಿಸಲಿರುವ ದಿನ ರಾಜ್ಯ ಸರಕಾರ ದಿನಪತ್ರಿಕೆಗಳಲ್ಲಿ ಬಜೆಟ್ ಬಗ್ಗೆ ಮುಖಪುಟ ಜಾಹೀರಾತೊಂದನ್ನು ಪ್ರಕಟಿಸಿತು. ಅದರಲ್ಲಿ ಈ ಬಜೆಟ್‌ನ ಮೂಲಕ ರಾಜ್ಯದಲ್ಲಿ ಹೊಸದೊಂದು ಅಭಿವೃದ್ಧಿಯ ಮಾದರಿಯನ್ನು ಹುಟ್ಟುಹಾಕುವುದಾಗಿ ಹೇಳಿಕೊಂಡಿತು.

ಬಜೆಟ್ ಕುರಿತಾಗಿ ಎದ್ದ ಕುತೂಹಲಕ್ಕೆ ಮುಖ್ಯ ಕಾರಣ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಪ್ರಕಟಿಸಿದ ಐದು ಗ್ಯಾರಂಟಿ ಯೋಜನೆಗಳು. ಕಾಂಗ್ರೆಸ್ ಭಾರೀ ಗೆಲುವು ಸಾಧಿಸಿದ್ದರಲ್ಲಿ ಈ ಭರವಸೆಗಳು ಎಷ್ಟು ಕೆಲಸ ಮಾಡಿದವು ಎನ್ನುವುದನ್ನು ಕರಾರುವಾಕ್ಕಾಗಿ ಲೆಕ್ಕ ಹಾಕಲು ಸಾಧ್ಯವಿಲ್ಲ. ಆದರೆ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕಾಂಗ್ರೆಸ್ ಸರಕಾರವನ್ನು ಕಾಡಿದ ಪ್ರಶ್ನೆ ಎಂದರೆ ಈ ಯೋಜನೆಗಳ ಅನುಷ್ಠಾನಕ್ಕೆ ಹಣ ಹೊಂದಿಸುವುದು ಹೇಗೆ ಎನ್ನುವುದು. ಬಜೆಟ್‌ನಲ್ಲಿ ಇದಕ್ಕೊಂದು ಉತ್ತರ ಸಿಗಲೇಬೇಕಿತ್ತು. ನಾಡಿನ ಕುತೂಹಲ ಇದ್ದದ್ದು ಈ ಉತ್ತರದ ಬಗ್ಗೆಯೇ ಹೊರತು ಇನ್ನೇನಲ್ಲ.

ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರಕಾರಕ್ಕೆ 52,000 ಕೋಟಿ ರೂಪಾಯಿಗಳು ಬೇಕು ಎಂದು ಅಧಿಕೃತವಾಗಿ ಬಜೆಟ್ ಹೇಳಿತು. ಈ ಆರ್ಥಿಕ ವರ್ಷದಲ್ಲಿ ಇನ್ನು ಉಳಿದಿರುವುದು ಎಂಟು ತಿಂಗಳುಗಳು. ಈ ಎಂಟೂವರೆ ತಿಂಗಳುಗಳ ಅವಧಿಯಲ್ಲಿ ಹೊಸ ಯೋಜನೆಗಳ ಅನುಷ್ಠಾನಕ್ಕೆ ಬೇಕಾದ ಮೊತ್ತ ಸುಮಾರು ಮೂವತ್ತರಿಂದ ಮೂವತ್ತೈದು ಕೋಟಿ ರೂಪಾಯಿಗಳು. ಕೆಲ ಹೊಸ ತೆರಿಗೆಗಳನ್ನು ಹೇರುವ ಮೂಲಕ, ಕೆಲ ಇಲಾಖೆಗಳಿಗೆ ಒಂದಷ್ಟು ಅನುದಾನ ಕಡಿತಗೊಳಿಸುವ ಮೂಲಕ, ಇನ್ನಷ್ಟೇ ವಿವರಿಸಬೇಕಿರುವ ಇನ್ನೊಂದಷ್ಟು ಮಿತವ್ಯಯ ಕ್ರಮಗಳ ಮೂಲಕ ಈ ವರ್ಷದ ಮಟ್ಟಿಗೆ ಹೊಸ ಯೋಜನೆಗಳ ಅನುಷ್ಠಾನಕ್ಕೆ ಬೇಕಾದಷ್ಟು ಹಣ ಹೊಂದಿಸಲಾಗುವುದು ಎಂದು ಬಜೆಟ್ ಹೇಳಿದೆ. ಹಾಗಂತ ವಿರೋಧ ಪಕ್ಷಗಳು ಮತ್ತು ಮೇಲ್ಜಾತಿ-ಮಧ್ಯಮ ವರ್ಗದ ಮಂದಿ ಆಕಾಶ ತಲೆಮೇಲೆ ಬಿದ್ದುಹೋಗಲಿದೆ ಎಂದು ಆಡುತ್ತಿದ್ದಂತೆ ಏನೂ ಆಗಿಲ್ಲ; ರಾಜ್ಯವೂ ದಿವಾಳಿಯಾಗುವ ಹಂತಕ್ಕೆ ಬಂದು ನಿಂತ ಹಾಗೆ ಕಾಣಿಸುತ್ತಿಲ್ಲ; ಜನರ ಮೇಲೆ ಬಹುದೊಡ್ಡ ತೆರಿಗೆಯ ಹೊರೆ ಬೀಳಲಿಲ್ಲ; ’ಅಭಿವೃದ್ಧಿ’ಗೆ ನೀಡಬೇಕಾಗಿದ್ದ ಹಣವನ್ನೆಲ್ಲ ಕಡಿತಗೊಳಿಸಿ ಬಡವರನ್ನೇ ಕೇಂದ್ರೀಕರಿಸಿಕೊಂಡಿರುವ ಈ ಯೋಜನೆಗಳಿಗೆ ವರ್ಗಾಯಿಸಿದ ಹಾಗೆಯೂ ಕಾಣಿಸುವುದಿಲ್ಲ.

ಮದ್ಯದ ಮೇಲೆ ತೆರಿಗೆ ಏರಿಸಲಾಗಿದೆ. ಇದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ಬೆಲೆ ಏರಿದಾಗ ಬೇಡಿಕೆ ಇಳಿಯುತ್ತದೆ ಎನ್ನುವ ಅರ್ಥಶಾಸ್ತ್ರದ ನಿಯಮಕ್ಕೆ ವಿರುದ್ಧವಾಗಿರುವ ವಸ್ತುಗಳಲ್ಲಿ ಮದ್ಯವೂ ಒಂದು. ಮದ್ಯ ಕುಡಿಯುವವರು ಕುಡಿದೇ ಕುಡಿಯುತ್ತಾರೆ. ಬೆಂಗಳೂರಿನ ಆಕರ್ಷಕ ಪಬ್‌ಗಳಲ್ಲಿ ಸಂಜೆಯಾದರೆ ಕಿಕ್ಕಿರಿದು ಸೇರಿ ಬಿಯರ್ ಇತ್ಯಾದಿ ಸೇವಿಸುವ ಶ್ರೀಮಂತ ವರ್ಗಕ್ಕೆ ಈಗಾಗಲೇ ನೀಡುವ ಬಿಲ್‌ನಲ್ಲಿ ಒಂದೆರಡು ನೂರು ರೂಪಾಯಿ ಹೆಚ್ಚು ನೀಡುವುದು ಎಂದಾದರೆ ಅವರಿಗದು ದೊಡ್ಡದಲ್ಲ. ಹಾಗಂತ ಮದ್ಯ ಸೇವಿಸುವವರಲ್ಲಿ ಬಡ ಕಾರ್ಮಿಕ ವರ್ಗಕ್ಕೆ ಸೇರಿದವರೂ ಇದ್ದಾರೆ. ಅವರು ಮದ್ಯ ಸೇವಿಸಿ ಉಳಿದ ಹಣದಲ್ಲಿ ಮನೆಗೇನಾದರೂ ಒಯ್ಯುವವರು. ಇನ್ನು ಅವರು ಮನೆಗೊಯ್ಯುವ ಸರಕು ಮತ್ತಷ್ಟೂ ಕಡಿಮೆಯಾದೀತು ಎನ್ನುವ ವಾದವಿದೆ. ಐದು ಗ್ಯಾರಂಟಿಗಳು ಅಂತಹ ವರ್ಗದ ಜನರಿಗಾಗಿಯೇ ರೂಪುಗೊಂಡಿರುವುದರಿಂದ (ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಎಲ್ಲರೂ ಬಳಸಿಕೊಳ್ಳುತ್ತಿದ್ದಾರೆ) ಈ ಬಗ್ಗೆ ದೊಡ್ಡ ಮಟ್ಟಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅದೇ ರೀತಿ ಇನ್ನು ಮುಂದೆ ಭೂಮಿ ಖರೀದಿಸಿ ಅದನ್ನು ನೋಂದಣಿ ಮಾಡಿಕೊಳ್ಳುವಾಗ ಸರ್ಕಾರಕ್ಕೆ ನೀಡಬೇಕಾದ ಮೊತ್ತದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಎಷ್ಟು ಏನು ಅಂತ ಬಜೆಟ್‌ನಲ್ಲಿ ಹೇಳಿಲ್ಲ. ಇದು ಆದಾಗ ಭೂಮಿ ಕೊಳ್ಳುವವರಿಗೆ ಸ್ವಲ್ಪ ಹೆಚ್ಚುವರಿ ಖರ್ಚು ತಗುಲಬಹುದು. ಅದು ಬಡವರನ್ನು ಮತ್ತು ಕೆಳ ಮಧ್ಯಮ ವರ್ಗದವರನ್ನು ದೊಡ್ಡದಾಗಿ ಬಾಧಿಸಲಾರದು. ಹಾಗೆಯೇ ಮೋಟಾರು ವಾಹನ ತೆರಿಗೆಯಲ್ಲೂ ಸ್ವಲ್ಪ ಏರಿಕೆ ಆಗುವ ಸೂಚನೆಗಳಿವೆ. ಇವೆಲ್ಲವೂ ಗ್ಯಾರಂಟೀ ಯೋಜನೆಗಳು ಇಲ್ಲದ ಕಾಲದಲ್ಲೂ ಸಾಮಾನ್ಯವಾಗಿ ಸರಕಾರಗಳು ಏರಿಸುತ್ತಲೇ ಬಂದಿರುವ ಶುಲ್ಕಗಳು. ಎಲ್ಲಾ ಹೆಚ್ಚುವರಿ ಆದಾಯವನ್ನು ಲೆಕ್ಕ ಹಾಕಿದರೂ ಈ ವರ್ಷ ಗ್ಯಾರಂಟೀ ಅನುಷ್ಠಾನಕ್ಕೆ ಬೇಕಾದ ಒಟ್ಟು ಹಣಹೊಂದಿಕೆ ಆಗುವುದಿಲ್ಲ. ಮಿತವ್ಯಯ ಇತ್ಯಾದಿಗಳ ಮೂಲಕ ಬಾಕಿ ಹಣ ಹೊಂದಿಸಲಾಗುವುದು ಎಂದಿದೆ. ಅಷ್ಟರಮಟ್ಟಿಗೆ ಅಲ್ಲೊಂದು ಅಸ್ಪಷ್ಟತೆ ಇದೆ! ಏನೇ ಇರಲಿ ತೆರಿಗೆಯ ಹೊರೆ ಬಿದ್ದೀತು ಎನ್ನುವ ಆತಂಕ ಸೃಷ್ಟಿಸಿ ಕಾಯುತಿದ್ದವರಿಗೆ ನಿರಾಶೆ ಆಗಿದೆ. ಹೊರೆ ಆಗದಂತೆ ಮುಂದೆಯೂ ಕೂಡಾ ಈ ಯೋಜನೆಗಳಿಗೆ ಬೇಕಾದ ಹಣ ಹೊಂದಿಸಲಾಗುವುದು ಎಂದು ಬಜೆಟ್‌ನಲ್ಲಿ ಸರಕಾರ ಹೇಳಿದೆ.

ಇದನ್ನೂ ಓದಿ: FCI ನಿಂದ ಅಕ್ಕಿ ಕೊಳ್ಳುವವರಿಲ್ಲ: ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ…

ತೆರಿಗೆ ಹೆಚ್ಚಿಸಿ ಜನರ ಮೇಲೆ ಬರೆ ಎಳೆಯುವ ಕೆಲಸವನ್ನು ಸರಕಾರ ಮಾಡಲಿಲ್ಲ ಎನ್ನುವುದು ನಿಜ ಇರಬಹುದು. ಹಾಗೆಯೇ ಹೊರೆ ಹೊತ್ತುಕೊಳ್ಳಲು ಶಕ್ತರಾಗಿದ್ದವರ ಮೇಲೆ ತೆರಿಗೆ ಹಾಕುವ ಅವಕಾಶವನ್ನು ಸರಕಾರ ಬಳಸಿಕೊಂಡಿಲ್ಲ ಎನ್ನುವ ವಾದವೂ ಇದೆ. ಅದೇನೇ ಇರಲಿ, ಅಭಿವೃದ್ಧಿಗಾಗಿ ತೊಡಗಿಸಬೇಕಾದ ಹಣವನ್ನು ರಾಜಕೀಯ ಲಾಭದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ನೀಡಲಾಯಿತು ಎನ್ನುವ ವಾದದಲ್ಲಿ ಕಿಂಚಿತ್ ಸತ್ಯ ಇದೆ. ಅದಕ್ಕೆ ಕಾರಣ ಹೀಗಿದೆ. ಸಾಮಾನ್ಯವಾಗಿ ಬಜೆಟ್‌ನಲ್ಲಿ ಎರಡು ರೀತಿಯ ವೆಚ್ಚಗಳನ್ನು ತೋರಿಸಲಾಗುತ್ತದೆ. ಒಂದು ರಾಜಸ್ವ ವೆಚ್ಚ. ಇನ್ನೊಂದು ಬಂಡವಾಳ ವೆಚ್ಚ. ರಾಜಸ್ವ ವೆಚ್ಚ ಎಂದರೆ ಸಂಬಳ ಸಾರಿಗೆ ನಿರ್ವಹಣಾ ವೆಚ್ಚ ಇತ್ಯಾದಿ. ಇದು ಅಭಿವೃದ್ಧಿ ವೆಚ್ಚವಲ್ಲ. ಎರಡನೆಯದ್ದು ಬಂಡವಾಳ ವೆಚ್ಚ. ಅರ್ಥಾತ್ ಹೂಡಿಕೆ. ಹೊಸ ಆಸ್ತಿಗಳ (ಅಸೆಟ್ಸ್) ಸೃಷ್ಟಿಗಾಗಿ ಮಾಡುವ ವೆಚ್ಚ. ಒಟ್ಟು ಬಜೆಟ್‌ನ ಗಾತ್ರದಲ್ಲಿ ಈ ವೆಚ್ಚದ ಪ್ರಮಾಣ ಹಿಂದಿಗಿಂತ ಸಣ್ಣ ಪ್ರಮಾಣದಲ್ಲಿ ಕಡಿತ ಆಗಿದೆ.

ಆದರೆ, ಗ್ಯಾರಂಟಿ ಯೋಜನೆಗಳಿಗೇನು ವೆಚ್ಚ ಆಗಲಿದೆ ಆ ವೆಚ್ಚ ಕೂಡಾ ಒಂದು ರೀತಿಯ ಹೂಡಿಕೆಯ ಆಗಿದೆ ಎನ್ನುವ ವಾದದ ಆಧಾರದಲ್ಲಿ ಸರಕಾರ ಬಂಡವಾಳ ವೆಚ್ಚವನ್ನು ತಗ್ಗಿಸಿ ಜನಕಲ್ಯಾಣ ವೆಚ್ಚವನ್ನು ಹೆಚ್ಚಿಸಿರುವುದು. ಪ್ರತಿ ವರ್ಷ ವಿವಿಧ ರೂಪದಲ್ಲಿ ಬಡ ಜನರ ಕೈಸೇರಲಿರುವ ಹಣವನ್ನು ಅವರು ಖರ್ಚು ಮಾಡಲಿರುವ ಕಾರಣ ಅರ್ಥ ವ್ಯವಸ್ಥೆಯಲ್ಲಿ ಬೇಡಿಕೆ ಹೆಚ್ಚುತ್ತದೆ, ಬೇಡಿಕೆ ಹೆಚ್ಚಿದಾಗ ಉತ್ಪಾದನೆ ಹೆಚ್ಚುತ್ತದೆ, ಉತ್ಪಾದನೆ ಹೆಚ್ಚಿದಾಗ ಉದ್ಯೋಗ ಸೃಷ್ಟಿಯಾಗುತ್ತದೆ, ಈ ಮೂಲಕ ಸರಕಾರಕ್ಕೆ ಬರುವ ತೆರಿಗೆ ಆದಾಯವೂ ಹೆಚ್ಚುತ್ತದೆ ಎನ್ನುವುದು ಲೆಕ್ಕಾಚಾರ. ಇದನ್ನು ಕರ್ನಾಟಕ ಆವಿಷ್ಕರಿಸಿಕೊಂಡ ಹೊಸ ಆರ್ಥಿಕ ಮಾದರಿ ಅಂತ ಬಣ್ಣಿಸಿದೆ. ಈ ಕುರಿತು ಬಜೆಟ್‌ನಲ್ಲಿ ಹೀಗೆ ಹೇಳಲಾಗಿದೆ:

“ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂಪಾಯಿಗಳನ್ನು ಸುಮಾರು 1.3 ಕೋಟಿ ಕುಟುಂಬಗಳಿಗೆ ತಲುಪಿಸುತ್ತಿರುವುದರಿಂದ ಪ್ರತಿ ಕುಟುಂಬಕ್ಕೆ ಮಾಸಿಕ 4000ದಿಂದ 5000 ರೂಗಳಷ್ಟು ಅಂದರೆ ವಾರ್ಷಿಕವಾಗಿ ಸರಾಸರಿ 48,000ದಿಂದ 60000 ರೂ ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ ಎನ್ನುವ (Universal Basic Income) ಪರಿಕಲ್ಪನೆಯನ್ನು ದೇಶದಲ್ಲೇ ಮೊದಲ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.” (ಪುಟ 10, ಪ್ಯಾರ 19)

ಆದರೆ ಕೆಲವೊಂದು ವಿಚಾರಗಳನ್ನು ನೆನಪಲ್ಲಿರಿಸಿಕೊಳ್ಳಬೇಕಾಗಿದೆ.

ಸಾಮಾನ್ಯವಾಗಿ ಈ ರೀತಿ ಒಟ್ಟು ಆದಾಯದ ದೊಡ್ಡ ಪಾಲೊಂದನ್ನು ಜನಕಲ್ಯಾಣದ ಬಾಬತ್ತಾಗಿ ಖರ್ಚು ಮಾಡುವುದು ಈಗಾಗಲೇ ಮುಂದುವರಿದಿರುವ ದೇಶಗಳು. ಅಲ್ಲಿ ಸರಕಾರಕ್ಕೆ ಹೂಡಿಕೆಯ ವಿಚಾರದಲ್ಲಿ ಹೊಸದೇನನ್ನೂ ಮಾಡಲು ಉಳಿದಿಲ್ಲ. ಅಂದರೆ ರಸ್ತೆ, ಸಾರಿಗೆ, ಚರಂಡಿ, ವಿದ್ಯುತ್ತು, ನೀರು ಸರಬರಾಜು, ಆಸ್ಪತ್ರೆಗಳು, ಶಾಲೆ, ವಿಶ್ವವಿದ್ಯಾನಿಲಯ ಹೀಗೆ ಒಂದು ಸಮಾಜದಲ್ಲಿ ಎಲ್ಲರಿಗೂ ಬೇಕಾಗಿರುವ ಏನೇನು ಅವಶ್ಯಕತೆಗಳಿವೆಯೋ ಅವೆಲ್ಲವನ್ನು ಈಗಾಗಲೇ ಬಹುತೇಕ ಪೂರೈಸಿ ಆಗಿರುವ ಹಿನ್ನೆಲೆಯಲ್ಲಿ, ಆ ದೇಶಗಳ ಸರಕಾರಗಳು ಆರ್ಥಿಕವಾಗಿ ಹಿಂದುಳಿದವರನ್ನು ಜತೆಗೆ ಕರೆದುಕೊಂಡು ಹೋಗುವ ದೃಷ್ಟಿಯಲ್ಲಿ ಜನಕಲ್ಯಾಣದ ಬಾಬತ್ತಿನಲ್ಲಿ ದೊಡ್ಡ ಪ್ರಮಾಣದ ವೆಚ್ಚ ಮಾಡುತ್ತಿದೆ. ಭಾರತದಲ್ಲಿ ಪರಿಸ್ಥಿತಿ ಹಾಗಿಲ್ಲ. ಇಲ್ಲಿ ಇನ್ನು ಕೂಡಾ ಸರಕಾರದ ಕಡೆಯಿಂದ ಆಗಲೇಬೇಕಿರುವ ಹಲವಾರು ಕೆಲಸಗಳು ಬಾಕಿ ಉಳಿದಿವೆ. ಈ ಕೆಲಸಗಳಿಗೆ ಇನ್ನೂ ಅಪಾರ ಪ್ರಮಾಣದ ಹಣ ಹೂಡಿಕೆಯ ಅಗತ್ಯವಿದೆ. ಹಾಗಾಗಿ ಈ ಹಂತದಲ್ಲೇ ಗ್ಯಾರಂಟಿಗಳಂತಹ ಯೋಜನೆಗಳಿಗೆ ಹಣ ನೀಡುವ ವಿಚಾರದಲ್ಲಿ ಒಂದು ಪ್ರಶ್ನಾರ್ಥಕ ಚಿಹ್ನೆ ಸದಾ ಇರಲಿದೆ. ಹಾಗೆಂದು, ಈ ದೇಶದಲ್ಲಿ ಹೆಚ್ಚುತ್ತಿರುವ ಅಸಮಾನತೆಯನ್ನು ನೋಡಿದಾಗ ಸರಕಾರ ಎಲ್ಲಾ ರೀತಿಯ ಸೌಲಭ್ಯವನ್ನು ಒದಗಿಸಿದ ನಂತರವೇ ಬಡವರ ಕುರಿತಾಗಿ ಯೋಚಿಸಬೇಕು ಎನ್ನುವ ವಾದವನ್ನೂ ಒಪ್ಪಿಕೊಳ್ಳಲಾಗುವುದಿಲ್ಲ. ಹಾಗಾಗಿ ಮದ್ಯದ ದಾರಿಯೊಂದು ಈ ದೇಶಕ್ಕೆ ಅವಶ್ಯಕವಾಗಿದೆ. ಆ ಮದ್ಯದ ದಾರಿಯನ್ನು ಕರ್ನಾಟಕ ಈಗ ಆಯ್ದುಕೊಂಡಿದೆ. ರಾಜಕೀಯ ಲೆಕ್ಕಾಚಾರದಿಂದ ಆಯ್ದುಕೊಂಡ ಮಾದರಿಯನ್ನು ನಿಜವಾದ ಅರ್ಥದಲ್ಲಿ ಹೊಸ ಕಲ್ಯಾಣ ಕೇಂದ್ರಿತ ಅಭಿವೃದ್ಧಿ ಮಾದರಿಯನ್ನಾಗಿ ಮಾಡುವ ಸವಾಲು ಈಗ ಹೊಸ ಸರಕಾರದ ಮುಂದಿದೆ.

ಕಲ್ಯಾಣ ಕೇಂದ್ರಿತ ಹೊಸ ಅಭಿವೃದ್ಧಿಯ ಮಾದರಿಗೆ ಈ ಐದು ಯೋಜನೆಗಳೇ ಅತ್ಯುತ್ತಮ ಅಥವಾ ಅಂತಿಮವೇನಲ್ಲ. ಘೋಷಿಸಿದ ಯೋಜನೆಗಳಿಗೆ ಯಾವುದೋ ರೀತಿಯ ಕಸರತ್ತು ಮಾಡಿ ಹಣ ಹೊಂದಿಸಿಕೊಂಡರೆ ಹೊಸ ಮಾದರಿ ರೂಪುಗೊಳ್ಳುವುದಿಲ್ಲ. ಈ ಯೋಜನೆಗಳನ್ನು ಪ್ರಯೋಗಾತ್ಮಕ ಎಂದು ತಿಳಿದುಕೊಂಡು, ಅಗತ್ಯವಿದ್ದರೆ ಅವುಗಳಲ್ಲಿ ಸೂಕ್ತ ಮಾರ್ಪಾಡು ಮಾಡಿಕೊಳ್ಳುವುದು, ಅಥವಾ ಕೆಲವನ್ನು ಕೈಬಿಟ್ಟು ಹೊಸದನ್ನು ಸೇರಿಸಿಕೊಳ್ಳುವುದು ಅಗತ್ಯವಾಗಬಹುದು. ಕಡಿತವಾದ ಬಂಡವಾಳ ವೆಚ್ಚವನ್ನು ಸರಿದೂಗಿಸುವ ಮಾರ್ಗ ಅಗತ್ಯವಿರಬಹುದು. ಉದ್ಯೋಗಗಳನ್ನು ಸೃಷ್ಟಿಸುವ ಹೊಸ ಮಾರ್ಗಗಳು, ಉದ್ಯೋಗಗಳನ್ನು ನಿರ್ವಹಿಸಲು ಬೇಕಾದ ಮಾನವ ಸಂಪನ್ಮೂಲದ ತಯಾರಿ ಇತ್ಯಾದಿಗಳಲ್ಲಾ ನಡೆಯದೆ ಹೊಸ ಮಾದರಿ ರೂಪುಗೊಳ್ಳದು. ಏನನ್ನೇ ಆಗಲಿ ಹಂಚುವ ಮುನ್ನ ಅದನ್ನು ಸೃಷ್ಟಿಸಲೇ ಬೇಕೆನ್ನುವುದು ಅರ್ಥಶಾಸ್ತ್ರದ ನಿಯಮವೂ ಹೌದು, ಪ್ರಕೃತಿಯ ನಿಯಮವೂ ಹೌದು. ಸಂಪತ್ತನ್ನು ಹೊಸ ರೀತಿಯಲ್ಲಿ ಸೃಷ್ಟಿಸಿ, ಸೃಷ್ಟಿಸಿದ ಸಂಪತ್ತನ್ನು ಹೊಸ ರೀತಿಯಲ್ಲಿ ಹಂಚಿ, ಆ ಹಂಚಿಕೆ ಇನ್ನಷ್ಟೂ ಸಂಪತ್ತಿನ ಸೃಷ್ಟಿಗೆ ಕಾರಣವಾಗುವ ಮತ್ತು ಈ ಮೂರೂ ಹಂತಗಳು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸುಸ್ಥಿರವಾಗಿ ನಡೆದಾಗ ಮಾತ್ರ ಹೊಸ ಆರ್ಥಿಕ ಮಾದರಿಯೊಂದು ಕರ್ನಾಟಕದಲ್ಲಿ ಹುಟ್ಟಿದೆ ಅಂತ ಹೇಳಬಹುದು. ಆ ಹಾದಿಯಲ್ಲಿ ಕ್ರಮಿಸಬೇಕಾದ ಹಾದಿ ಇನ್ನಷ್ಟೂ ದೊಡ್ಡದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...