Homeಮುಖಪುಟಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ...

ಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ ಎಚ್ಚರ

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

- Advertisement -
- Advertisement -

ಮೂರು ಇನ್‌ಸ್ಟಂಟ್ ಲೋನ್ ಆ್ಯಪ್‌ಗಳ ಮೂಲಕ ಸಾಲ ಪಡೆದು, ಮರುಪಾವತಿಸಲು ಸಾಧ್ಯವಾಗದ ಕಾರಣ ರಿಕವರಿ ಏಜೆಂಟ್‌ಗಳ ಕಿರುಕುಳದಿಂದ ಬೇಸೆತ್ತ 22 ವರ್ಷದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ.

ಜಾಲಹಳ್ಳಿಯ ಎಚ್‌ಎಂಟಿ ಸ್ಟಾಫ್ ಕ್ವಾರ್ಟರ್ಸ್ ನಿವಾಸಿ ತೇಜಸ್ ನಾಯರ್ ಎಂಬುವವರೆ ಆ ದುರ್ಧೈವಿಯಾಗಿದ್ದು, ಅವರು ಯಲಹಂಕ ಸಮೀಪದ ಖಾಸಗಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಸುಮಾರು 46,000 ರೂ. ಸಾಲ ಬಾಕಿ ಉಳಿಸಿಕೊಂಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ನನ್ನ ಹೆಸರಿನಲ್ಲಿ ಇರುವ ಸಾಲಗಳನ್ನು ಪಾವತಿಸಲು ನನಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದು ನನ್ನ ಅಂತಿಮ ನಿರ್ಧಾರವಾಗಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿದ್ದು ತೇಜಸ್ ಸಾವಿಗೆ ಶರಣಾಗಿದ್ದಾರೆ.

ಈ ಕುರಿತು ಅವರ ತಂದೆ ಗೋಪಿನಾಥ್‌ರವರು ನೀಡಿದ ದೂರಿನ ಅನ್ವಯ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ತೇಜಸ್ ಮೊಬೈಲ್ ಫೋನ್ ಅನ್ನು ಸೈಬರ್ ಕ್ರೈಮ್ ವಿಭಾಗಕ್ಕೆ ಕಳಿಸಿದ್ದಾರೆ.

ಮೃತರ ತಂದೆ ಮಾತನಾಡಿ, “ತೇಜಸ್ ಸ್ನೇಹಿತನೊಬ್ಬನಿಗೆ ತುರ್ತು ಎಂದು ಆ್ಯಪ್‌ ಮೂಲಕ ಸಾಲ ತೆಗೆದುಕೊಟ್ಟಿದ್ದಾನೆ. ಆದರೆ ಆತನ ಸ್ನೇಹಿತ ಎಇಎಂ ಮರುಪಾವತಿ ಮಾಡಿಲ್ಲ. ಇದರಿಂದ ಆತಂಕಕ್ಕೆ ಒಳಗಾದ ತೇಜಸ್ ಆ ಸಾಲ ತೀರಿಸಲು ಬೇರೆ ಆ್ಯಪ್‌ಗಳ ಮೂಲಕ ಮತ್ತೆ ಸಾಲ ಮಾಡಿದ್ದಾನೆ. ಅವುಗಳನ್ನು ತೀರಿಸಲು ಸಂಬಂಧಿಕರೊಬ್ಬರಿಂದ ಹಣಕ್ಕೆ ಬೇಡಿಕೆಯಿಟ್ಟಾಗಲಷ್ಟೇ ನಮಗೆ ವಿಷಯ ಗೊತ್ತಾಯಿತು” ಎಂದಿದ್ದಾರೆ.

ಸಾಲ ವಾಪಸ್ ಮಾಡದ ಕಾರಣ ಆತನ ಫೋಟೊಗಳನ್ನು ತಿರುಚಿ ವಾಟ್ಸಾಪ್ ಮೂಲಕ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕಳಿಸಲಾಗಿದೆ. ಇದರಿಂದ ಬೇಸೆತ್ತ ಆತ ಆತ್ಮಹತ್ಯೆ ಮೊರೆ ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ತುರ್ತು ಸಾಲಕ್ಕೆ ಮರುಳಾಗಿ ವಂಚಕರ ಬಲೆಗೆ ಬೀಳಬೇಡಿ

ತೇಜಸ್ ಒಬ್ಬರೆ ಈ ರೀತಿಯ ದೌರ್ಜನ್ಯಕ್ಕೆ ಒಳಗಾಗಿಲ್ಲ. ಬದಲಿಗೆ ಸಾವಿರಾರು ಜನರು ಈ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ತುರ್ತಿಗೆ ಎಂದು ಮೊಬೈಲ್ ಆ್ಯಪ್‌ಗಳ ಮೂಲಕ ಕಿರು ಸಾಲ ಪಡೆದು, ದುಬಾರಿ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದಾರೆ. ಹಲವಾರು ಜನ ತಮ್ಮ ಜೀವನ, ನೆಮ್ಮದಿ ಹಾಳು ಮಾಡಿಕೊಂಡಿದ್ದಾರೆ.

ಕ್ಯಾಶ್ ಗುರು, ಮನಿ ಗುರು, ದಾನಿ ಆಪ್, ಮನಿಟ್ಯಾಪ್, ಎಎಲ್‌ಪಿ ಕ್ಯಾಶ್ ಆಪ್ ನಂತರ 300ಕ್ಕೂ ಹೆಚ್ಚು ಆನ್‌ಲೈನ್ ಮೂಲಕ ಸಾಲ ನೀಡುವ ಆಪ್‌ಗಳಿವೆ. 5,000 ರೂಗಳಿಂದ ಆರಂಭವಾಗಿ 15,000,00 ರೂ ಗಳವರೆಗೂ ಯಾವುದೇ ದಾಖಲೆಗಳನ್ನು ಕೇಳದೇ ಕ್ಷಣಾರ್ಧದಲ್ಲಿ ಸಾಲ ಕೊಡುವುದಾಗಿ ಹೇಳಿ ದುಪ್ಪಟ್ಟು ವಸೂಲಿ ಮಾಡುವುದು ಇವುಗಳ ಉದ್ದೇಶ. ಆದರೆ ತಕ್ಷಣಕ್ಕೆ ಹಣ ಬೇಕಾದವರು ಮುಂದಕ್ಕೆ ನೋಡಿಕೊಳ್ಳೋಣ, ಹೇಗಾದರೂ ಮಾಡಿ ತೀರಿಸಿದರೆ ಆಯ್ತು ಎಂದುಕೊಂಡು ಸಾಲ ಪಡೆದವರು ಈ ಆ್ಯಪ್‌ಗಳ ರಿಕವರಿ ಏಜೆಂಟ್‌ಗಳಿಂದ ನಿತ್ಯನರಕ ಅನುಭಿಸುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.

ರಿಕವರಿ ಏಜೆಂಟ್‌ಗಳು ಕಳಿಸುವ ಸಂದೇಶಗಳು

ತಕ್ಷಣಕ್ಕೆ ಹಣ ಬೇಕಾದವರು ಆ್ಯಪ್‌ ಇನ್ಸ್ಟಾಲ್ ಮಾಡುವಾಗಲೇ ಕಂಪನಿಯ ಎಲ್ಲಾ ಷರತ್ತುಗಳಿಗೆ ಒಳಪಟ್ಟಿರುತ್ತಾರೆ. ಅಂದರೆ ಆ್ಯಪ್‌ ಕಂಪನಿಯವರು ಆ ಮೊಬೈಲ್‌ನಲ್ಲಿ ಎಲ್ಲಾ ಸಂಪರ್ಕ ಸಂಖ್ಯೆ ಮತ್ತು ಫೋಟೊ ವಿಡಿಯೋಗಳನ್ನು ಅಕ್ಸಸ್ ಮಾಡುವ ಒಪ್ಪಿಗೆ ಪಡೆದುಕೊಂಡಿರುತ್ತದೆ. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ನಂಬರ್ ಜೊತೆಗೆ ಅಕೌಂಟ್ ನಂಬರ್ ಕೊಟ್ಟರೆ 5 ನಿಮಿಷದಲ್ಲಿ ಸಾಲ ಮಂಜೂರು ಮಾಡುತ್ತಾರೆ. ಆದರೆ ಆನಂತರವೇ ನಿಮಗೆ ತಿಳಿಯುವುದು ಅದರ ಜಿಗಣೆ ರೀತಿಯ ಬಡ್ಡಿದರ.

ಹಲವಾರು ಆ್ಯಪ್‌ಗಳ ವಾರದ ಲೆಕ್ಕದಲ್ಲಿ ಬಡ್ಡಿ ಮತ್ತು ಇಎಂಐ ಕಟ್ಟಿಸಿಕೊಳ್ಳುತ್ತವೆ. ಶೇ.12% ನಿಂದ ಶೇ.34% ವರೆಗೂ ಬಡ್ಡಿದರ ಇರುತ್ತದೆ ಎಂದರೆ ಎಷ್ಟರ ಮಟ್ಟಿಗೆ ಸುಲಿಗೆ ಮಾಡಬಹುದು ನೀವೇ ಯೋಚಿಸಿ.

ಕೇವಲ 5,000 ಸಾಲ ಪಡೆದವರು ವಾಪಸ್ 20,000-25,000 ರೂ ವರೆಗೂ ಮರುಪಾವತಿ ಮಾಡಬೇಕಾದ ಸಂದರ್ಭಗಳು ಬಂದಿವೆ. ಇನ್ನು ಲಕ್ಷಾಂತರ ರೂ ಹಣ ಪಡೆದವರು 34% ನಷ್ಟು ದುಬಾರಿ ಬಡ್ಡಿ, ಜಿಎಸ್‌ಟಿ, ಸಂಸ್ಕರಣ ವೆಚ್ಚವನ್ನು ಕಟ್ಟಲಾಗದೆ ಹೈರಾಣಾಗಿದ್ದಾರೆ. ಆಗ ರಿಕವರಿ ಏಜೆಂಟ್‌ಗಳು ಪದೇ ಪದೇ ಫೋನ್ ಮಾಡಿ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ. ಅದಕ್ಕೂ ತಲೆಕೆಡಿಸಿಕೊಳ್ಳದಿದ್ದರೆ ಅವರ ಕಾಂಟಾಕ್ಟ್ ಲಿಸ್ಟ್‌ ಪ್ರವೇಶಿಸಿ ಸಿಕ್ಕ ಸಿಕ್ಕವರ ನಂಬರ್‌ಗೆಲ್ಲಾ ಫೋನ್ ಮಾಡಿ ನಿಮ್ಮ ಸ್ನೇಹಿತರು ಲೋನ್ ಇಎಂಐ ಕಟ್ಟಿಲ್ಲ ಎಂದು ಬೈಯ್ದು ಮರ್ಯಾದೆ ಕಳೆಯುತ್ತಾರೆ. ಕೆಲವರು ಲೋನ್ ಕಟ್ಟಲಾಗದೇ ಸಿಮ್ ಬದಲಿಸಿದರೂ ಬಿಡದ ಅವರ ತಿರುಚಿದ ಚಿತ್ರಗಳನ್ನು ಅವರ ಸಂಪರ್ಕ ಸ್ನೇಹಿತರಿಗೆಲ್ಲ ಕಳಿಸಿ ಇವರ ಫ್ರಾಡ್ ಎಂಬ ಹಣೆಪಟ್ಟೆ ಕಟ್ಟುವ ಮಟ್ಟಕ್ಕೆ ಬೆಳೆದು ನಿಂತಿವೆ ಈ ಲೋನ್ ಆ್ಯಪ್‌ಗಳು.

ಈ ರೀತಿಯಾಗಿ ಒಬ್ಬ ವ್ಯಕ್ತಿಯ ಸಂಪೂರ್ಣ ನೆಮ್ಮದಿ ಹಾಳು ಮಾಡಲು ಈ ಆ್ಯಪ್‌ಗಳು ಹಿಂದೆ ಮುಂದೆ ನೋಡುವುದಿಲ್ಲ. ಹೇಗಾದರೂ ಮಾಡಿ ಸಾಲ ವಸೂಲಿ ಮಾಡುವುದು ಅವರ ಉದ್ದೇಶವಾಗಿರುತ್ತದೆ. ಹಾಗಾಗಿ ದಯವಿಟ್ಟು ಯಾರೂ ಕೂಡ ಯಾವುದೇ ಕಾರಣಕ್ಕೂ ಈ ಇನ್‌ಸ್ಟಂಟ್ ಲೋನ್ ಆಪ್‌ಗಳ ಮೊರೆ ಹೋಗಬೇಡಿ ಎಂದು ಪೊಲೀಸರು ಮನಿವಿ ಮಾಡಿದ್ದಾರೆ.

ಐಟಿ ಕಾಯ್ದೆಯ ಪ್ರಕಾರ ಲೋನ್ ಆ್ಯಪ್‌ಗಳು ಹೀಗೆ ಖಾಸಗಿ ಮಾಹಿತಿ ಕದ್ದು ಬ್ಲಾಕ್‌ಮೇಲ್ ಮಾಡುವುದು ಅಪರಾಧ. ಆದರೆ ಅದೀಗ ಎಗ್ಗಿಲ್ಲದೆ ನಡೆಯುತ್ತಿದೆ. ಲೋನ್ ತೆಗೆದುಕೊಳ್ಳುವವರು ಇರುವವರೆಗೂ ಈ ಕಿರುಕುಳ ಇದ್ದೆ ಇರುತ್ತದೆ. ಇದಕ್ಕಿರುವ ಪರಿಹಾರವೆಂದರೆ ಯಾರೂ ಕೂಡ ಸಾಲ ತೆಗೆದುಕೊಳ್ಳದಂತೆ ಜೀವನ ನಿರ್ವಹಣೆ ಮಾಡಬೇಕು. ಅದರಲ್ಲಿಯೂ ಈ ಲೋನ್‌ ಆ್ಯಪ್‌ಗಳ ಸಹವಾಸದಿಂದ ದೂರವಿದ್ದರೆ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...