Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...