Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...