Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...