Homeಮುಖಪುಟಮಣಿಪುರದಲ್ಲಿ ಬಿಜೆಪಿಯು 'ಕ್ರಿಶ್ಚಿಯನ್ ವಿರೋಧಿ'ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

ಮಣಿಪುರದಲ್ಲಿ ಬಿಜೆಪಿಯು ‘ಕ್ರಿಶ್ಚಿಯನ್ ವಿರೋಧಿ’ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

- Advertisement -
- Advertisement -

ಮಿಜೋರಾಂನಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ನಡುವೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಆರ್ ವನ್ರಾಮ್‌ಚುವಾಂಗಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ.

ಮಣಿಪುರದಲ್ಲಿ ನಡೆದ ಹಿಂಸಾಚಾರದ ನಡುವೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಕೇಂದ್ರ ಸರ್ಕಾರವು ಅಸಡ್ಡೆ ತೋರುತ್ತಿದೆ ಎಂದು ಆರೋಪಿಸಿ ಮಿಜೋರಾಂನ ಬಿಜೆಪಿ ಉಪಾಧ್ಯಕ್ಷ ಆರ್ ವನ್ರಾಮ್‌ಚುವಾಂಗಾ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ವನ್ರಾಮ್‌ಚುವಾಂಗಾ ಅವರು ಮಿಜೋರಾಂ ಬಿಜೆಪಿ ಮುಖ್ಯಸ್ಥ ವನ್‌ಲಾಲ್‌ಮುವಾಕಾ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ನೆರೆಯ ರಾಜ್ಯ ಮಣಿಪುರದಲ್ಲಿ ”ಕ್ರಿಶ್ಚಿಯನ್ ವಿರೋಧಿ ಚಟುವಟಿಕೆಗಳಿಂದ” ತೀವ್ರವಾಗಿ ನೋವಾಗಿದೆ ಎಂದು ಹೇಳಿದ್ದಾರೆ. ”ಮೈತಿ ಉಗ್ರಗಾಮಿಗಳು 357 ಕ್ರಿಶ್ಚಿಯನ್ ಚರ್ಚ್‌ಗಳನ್ನು, ಪಾದ್ರಿ ಕ್ವಾರ್ಟರ್‌ಗಳನ್ನು ಮತ್ತು ವಿವಿಧ ಚರ್ಚ್‌ಗಳಿಗೆ ಸೇರಿದ ಕಚೇರಿ ಕಟ್ಟಡಗಳನ್ನು ಸುಟ್ಟುಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಮುದಾಯವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕ ಆರೋಪಿಸಿದ್ದಾರೆ.

”ಶಾ ಅವರು ಸ್ವತಃ [ಮಣಿಪುರ ರಾಜಧಾನಿ] ಇಂಫಾಲ್‌ಗೆ ಹೋಗಿದ್ದರು ಮತ್ತು ಮೂರು ಹಗಲು ಮತ್ತು ಎರಡು ರಾತ್ರಿ ಇದ್ದರು, ಆದರೆ ಅವರ ಆಗಮನದ ಸಮಯದಲ್ಲಿ ಮತ್ತು ಅವರು ಹೋದ ನಂತರವೂ ಹಿಂಸಾಚಾರ ಮುಂದುವರೆದಿದೆ” ಎಂದು ಅವರು ಹೇಳಿದರು.

”ಮಣಿಪುರದ ಬೆಳವಣಿಗೆಗಳು ಬಿಜೆಪಿ ಕ್ರಿಶ್ಚಿಯನ್ ವಿರೋಧಿ ಪಕ್ಷ ಎಂಬ ಆರೋಪಗಳಿಗೆ ಪುಷ್ಠಿ ನೀಡಿವೆ” ಎಂದು ವನ್ರಾಮ್‌ಚುವಾಂಗಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ಮುಂದಿನ ನಡೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಗುರುವಾರ ಇತರ ಕೆಲವು ಪಕ್ಷಗಳ ನಾಯಕರು ತಮ್ಮನ್ನು ಭೇಟಿ ಮಾಡಿದ್ದಾರೆ ಆದರೆ ಮುಂದಿನ ಕ್ರಮಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ” ಎಂದು ಹೇಳಿದರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ಮಣಿಪುರವು ಮೇ 3 ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಲಿದೆ. ಈ ಹಿಂಸಾಚಾರದಿಂದಾಗಿ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದು ಹೋಗಬೇಕಾಯಿತು.

ರಾಜ್ಯದಲ್ಲಿ ಬಹುಪಾಲು ಮೈತಿಗಳು ಹಿಂದೂಗಳಾಗಿದ್ದರೆ, ಹೆಚ್ಚಿನ ಕುಕಿಗಳು ಮತ್ತು ನಾಗಾಗಳು ಕ್ರಿಶ್ಚಿಯನ್ನರು. ಮಿಜೋರಾಂನಲ್ಲಿರುವ ಮಿಜೋ ಸಮುದಾಯವು ಮಣಿಪುರದ ಕುಕಿ-ಜೋಮಿ ಸಮುದಾಯದೊಂದಿಗೆ ಜನಾಂಗೀಯ ಸಂಬಂಧಗಳನ್ನು ಹಂಚಿಕೊಂಡಿದೆ.

ಮೈತಿ ಲೀಪುನ್ ಮುಖ್ಯಸ್ಥನ ವಿರುದ್ಧ ದ್ವೇಷವನ್ನು ಉತ್ತೇಜಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ
ಮಣಿಪುರ ಪೊಲೀಸರು ಮೈತೆ ಲೀಪುನ್‌ನ ಮುಖ್ಯಸ್ಥ ಪ್ರಮೋತ್ ಸಿಂಗ್ ವಿರುದ್ಧ ದ್ವೇಷ ಮತ್ತು ಕ್ರಿಮಿನಲ್ ಪಿತೂರಿಯನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಣಿಪುರದಲ್ಲಿ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತಿ ಲೀಪುನ್, ಅರಾಂಬೈ ಟೆಂಗೋ ಎಂಬ ಇನ್ನೊಂದು ಮೈತಿ ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...