Homeಮುಖಪುಟಬಿಹಾರದಲ್ಲಿ ಸಾವನಪ್ಪಿದ ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ: ಪೊಲೀಸರ ಹೇಳಿಕೆ

ಬಿಹಾರದಲ್ಲಿ ಸಾವನಪ್ಪಿದ ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ: ಪೊಲೀಸರ ಹೇಳಿಕೆ

- Advertisement -
- Advertisement -

ಬಿಹಾರ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿ ವಿರೋಧಿಸಿ ಗುರುವಾರ ಬಿಜೆಪಿ ಪಕ್ಷವು ಪಾಟ್ನಾದಲ್ಲಿ ನಡೆಸಿದ ವಿಧಾನಸಭಾ ಮುತ್ತಿಗೆಯ ಬೃಹತ್ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಮಾಡಿದ ಲಾಠೀ ಚಾರ್ಜ್‌ನಲ್ಲಿ ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಸಾವನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬಿಹಾರ ಪೊಲೀಸರು ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಬಿಜೆಪಿ ಪಕ್ಷದ ಜೆಹಾನಾಬಾದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಂಗ್ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದ ನಂತರ ಪೊಲೀಸರು ಹೇಳಿಕೆ ನೀಡಿದ್ದು, “ಪ್ರಾಥಮಿಕ ತನಿಖೆ ಮತ್ತು ವಿವಿಧ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ಜೆಹಾನಾಬಾದ್ ಮೂಲದ ವಿಜಯ್ ಕುಮಾರ್ ಸಿಂಗ್ ಲಾಠಿ ಚಾರ್ಜ್ ನಡೆದ ಡಾಕ್ ಬಂಗಲೆ ವೃತ್ತವನ್ನು ತಲುಪಿರಲಿಲ್ಲ” ಎಂದು ಪಾಟ್ನಾದ ಹಿರಿಯ ಅಧೀಕ್ಷರಾದ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

“ಒಂದು ಸಿಸಿಟಿವಿಯ ವಿಡಿಯೋ ತುಣುಕಿನಲ್ಲಿ ವಿಜಯ್ ಕುಮಾರ್ ಸಿಂಗ್ ಮತ್ತು ಅವರೊಂದಿಗೆ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1 ಗಂಟೆ 22 ನಿಮಿಷದ ಸಂದರ್ಭದಲ್ಲಿ ಗಾಂಧಿ ಮೈದಾನ-ಚಜ್ಜು ಬಾಗ್ ರಸ್ತೆಯ ಮೂಲಕ ಚಜ್ಜು ಬಾಗ್ ಪ್ರದೇಶದಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಆ ಮೂವರೂ ಪರಸ್ಪರ ಮಾತನಾಡುತ್ತಿದ್ದರು ಮತ್ತು ಅವರು ಆರೋಗ್ಯವಾಗಿದ್ದರು. ಆನಂತರ 1 ಗಂಟೆ 27ನೇ ನಿಮಿಷದ ಸಂದರ್ಭದಲ್ಲಿ ಆಟೋ ರಿಕ್ಷಾದಲ್ಲಿ  ಆಸ್ಪತ್ರೆಗೆ ಕರೆದೊಯ್ದದ್ದು ಕೂಡ ಅದೇ ವಿಡಿಯೋದಲ್ಲಿ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾದಿಂದ ಸುಮಾರು 50 ಮೀಟರ್ ದೂರದಲ್ಲಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಬಳಿ ಸಿಂಗ್ ರಸ್ತೆಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ರಾಜೀವ್ ಮಿಶ್ರಾ ಹೇಳಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಲಾಠಿ ಚಾರ್ಜ್ ನಡೆದಿಲ್ಲ, ಸಿಂಗ್ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಮೃತ ಸಿಂಗ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ತಾವು ಡಾಕ್ ಬಂಗಲೆ ವೃತ್ತಕ್ಕೆ ಹೋಗಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ವೃತ್ತವನ್ನು ಬ್ಯಾರಿಕೇಡ್ ಹಾಕಿ ಮುಚ್ಚಿದ್ದರಿಂದ ಅವರು ಆ ಕಡೆ ಹೋಗದಿರಲು ನಿರ್ಧರಿಸಿದರು. ನಂತರ ಸಿಂಗ್ ಅವರ ಸ್ನೇಹಿತರು ಅವರನ್ನು ರಿಕ್ಷಾದ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ರಿಕ್ಷಾವು ಹತ್ತಿರದ ಆಸ್ಪತ್ರೆಯನ್ನು ತಲುಪಲು ಐದರಿಂದ ಆರು ನಿಮಿಷಗಳನ್ನು ತೆಗೆದುಕೊಂಡಿರಬಹುದು ಎಂದು ನಾವು ನಂಬುತ್ತೇವೆ. ಅವರು ಮೂರ್ಛೆ ಹೋದ ಘಟನೆ ಮಧ್ಯಾಹ್ನ 1.23 ರಿಂದ 1.27 ರ ನಡುವೆ ನಡೆದಿರಬಹುದು. ಸಿಂಗ್ ಸುತ್ತಲೂ ಅಥವಾ ರಿಕ್ಷಾದ ಸುತ್ತಲೂ ಯಾವುದೇ ಪೊಲೀಸರು ಕಂಡುಬಂದಿಲ್ಲ ಎಂದು ದೃಶ್ಯಗಳು ಬಹಿರಂಗಪಡಿಸಿವೆ”ಎಂದು ಅವರು ಹೇಳಿದ್ದಾರೆ.

“ಅಲ್ಲದೇ ಚಜ್ಜು ಬಾಗ್ ಪ್ರದೇಶದಲ್ಲಿನ ಸಿಸಿಟಿವಿಯ ದೃಶ್ಯಗಳಲ್ಲಿ ಯಾವುದೇ ರೀತಿಯ ಕಾಲ್ತುಳಿತದ ದೃಶ್ಯ ಕಂಡುಬಂದಿಲ್ಲ. ಆ ಪ್ರದೇಶದಲ್ಲಿ ಸಂಪೂರ್ಣ ಸಾಮಾನ್ಯ ಸಂಚಾರ ದಟ್ಟಣೆ ಕಂಡುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು” ಎಸ್‌ಎಸ್‌ಪಿ ಹೇಳಿದ್ದಾರೆ.

ಬಿಜೆಪಿಯ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಒಟ್ಟು 59 ಜನರನ್ನು ಬಂಧಿಸಲಾಯಿತು ಆದರೆ ಅವರೆಲ್ಲರನ್ನೂ ನಂತರ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

“ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸುವಾಗ ಜಿಲ್ಲಾಡಳಿತವು ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಿದೆ. ಮ್ಯಾಜಿಸ್ಟ್ರೇಟ್ ಮತ್ತು ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ವೀಡಿಯೊಗ್ರಫಿ ಅಡಿಯಲ್ಲಿ ನಡೆಸಿತು” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...