Homeಮುಖಪುಟಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣದಲ್ಲಿ ಉದ್ದೇಶಪೂರ್ವಕ ವಿಳಂಬ: ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂ ನೋಟಿಸ್

ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣದಲ್ಲಿ ಉದ್ದೇಶಪೂರ್ವಕ ವಿಳಂಬ: ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂ ನೋಟಿಸ್

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಇತರ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳ ತೀರ್ಪನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಸಲ್ಲಿಸಿದ ಮನವಿಯ ಮೇರೆಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಮೇ 11 ರಂದು ಸಿಎಂ ಶಿಂಧೆ ಮತ್ತು ಇತರ 16 ಜನ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಸ್ಪೀಕರ್ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಅಂದಿನಿಂದ ಸ್ಪೀಕರ್ ಆ ವಿಚಾರವಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ನಾವು ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ನಂತರವಷ್ಟೇ ನೋಟಿಸ್ ಕಳುಹಿಸಿದ್ದಾರೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ದೇವದತ್ತ್ ಕಾಮತ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಇದುವರೆಗೂ ಒಂದೇ ಒಂದು ಅನರ್ಹತೆ ಅರ್ಜಿಯನ್ನು ಸಹ ಸ್ಪೀಕರ್ ವಿಚಾರಣೆಗೆ ಕೈಗೆತ್ತಿಕೊಂಡಿಲ್ಲ. ಈ ಕುರಿತು ಮೂರು ಬಾರಿ ಅವರ ಗಮನಕ್ಕೆ ತಂದರೂ ಸಹ ಅವರು ಉದ್ದೇಶ ಪೂರ್ವಕ ವಿಳಂಬ ಮಾಡುತ್ತಿದ್ದಾರೆ. ಆ ಮೂಲಕ ಅವರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ನಿಭಾಯಿಸಲು ಮತ್ತು ರಾಜಕೀಯ ತಟಸ್ಥ ನೀತಿ ಅನುಸರಿಸಲು ವಿಫಲವಾಗಿದ್ದಾರೆ. ಹಾಗಾಗಿ ಸಿಎಂ ಶಿಂಧೆ ಮತ್ತು ಹಲವು ಶಾಸಕರು ಕಾನೂನುಬಾಹಿರವಾಗಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಹತ್ತನೇ ಶೆಡ್ಯೂಲ್‌ನ ಪ್ಯಾರಾ 6 ರ ಅಡಿಯಲ್ಲಿ ಸ್ಪೀಕರ್ ತನ್ನ ಕಾರ್ಯಗಳನ್ನು ನಿರ್ವಹಿಸುವಾಗ ನ್ಯಾಯಾಂಗದ ನ್ಯಾಯಮಂಡಳಿಯಾಗಿ ಕಾರ್ಯನಿರ್ವಹಿಸಬೇಕು. ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ರೀತಿಯಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು. ಅನರ್ಹತೆಯ ಅರ್ಜಿಗಳನ್ನು ನಿರ್ಧರಿಸುವಲ್ಲಿ ಸ್ಪೀಕರ್‌ ಕಡೆಯಿಂದ ಆಗುವ ಯಾವುದೇ ಅವಿವೇಕದ ವಿಳಂಬವು ತಪ್ಪಿತಸ್ಥ ಸದಸ್ಯರು ಮಾಡಿದ ಪಕ್ಷಾಂತರದ ಸಾಂವಿಧಾನಿಕ ಪಾಪಕ್ಕೆ ಕೊಡುಗೆ ನೀಡುತ್ತದೆ ಮತ್ತು ಶಾಶ್ವತಗೊಳಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅನರ್ಹತೆ ಅರ್ಜಿಗಳನ್ನು ಕಾಲಮಿತಿಯಲ್ಲಿ ತ್ವರಿತವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ರವರ ಜೊತೆಗೆ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಮಹಾರಾಷ್ಟ್ರ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿ ಎರಡು ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ವಿರೋಧ ಪಕ್ಷಗಳನ್ನು ಒಡೆಯುವ ಬಿಜೆಪಿಯ ಅನೈತಿಕ ನೀತಿಯ ಹೊಸ ಅಧ್ಯಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...