Homeಅಂಕಣಗಳುಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

- Advertisement -
- Advertisement -

ಸದನದಲ್ಲಿ ಕುಮಾರಣ್ಣನ ಕೂಗಾಟ ನೋಡಿದ ಕರ್ನಾಟಕದ ಜನ ಲೊಚಗರಿದು ಈ ಮಟ್ಟಕ್ಕೆ ಇಳಿಯಿತೇ ಕರ್ನಾಟಕದ ಸಂಸ್ಕೃತಿಯ ಪ್ರತೀಕವಾದ ವಿಧಾನಸೌಧದ ವಾಗ್ವಾದ ಎಂದು ಉದ್ಘಾರ ತೆಗೆದಿದ್ದಾರಲ್ಲಾ. ಕುಮಾರಣ್ಣ ಕೆರಳಿರವುದಕ್ಕೆ ಹಲವಾರು ಕಾರಣಗಳಿವೆ. ಮುಖ್ಯವಾಗಿ ಅವರ ಪರಮವೈರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದದು. ಎರಡನೆಯದು ತಮ್ಮ ಅಭಿಮಾನಿಗಳಂತಿದ್ದ ನಾಲ್ಕು ಜನ ಹಿಂಬಾಲಕರು ಈಗ ಸಿದ್ದು ಜೊತೆ ಇರುವುದಲ್ಲದೆ, ಅದರಲ್ಲೊಬ್ಬರು ಕೃಷಿಮಂತ್ರಿಯಾಗಿರುವುದು. ಸಾಮಾನ್ಯ ವ್ಯಕ್ತಿಯಾದ ಕುಮಾರಣ್ಣನಿಗೆ ಇಂತಹ ಅನಾಹುತಗಳನ್ನು ಸಹಿಸಲು ಸಾಧ್ಯವೇ? ಹಾಗಾಗಿ ಆ ಕೃಷಿಮಂತ್ರಿಯ ಕ್ಷೇತ್ರಕ್ಕೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನ ಸಮಸ್ಯೆಯನ್ನು ಕೈಗೆತ್ತಿಕೊಂಡು ಏನಾದರೂ ಮಾಡಿ ಚಲುವರಾಯಸ್ವಾಮಿ ರಾಜೀನಾಮೆ ಕೊಡಿಸಲು ಯತ್ನಿಸಿದರು. ಆದರೇನು ಇಡೀ ಸದನವೇ ಕುಮಾರಣ್ಣನ ಎದುರು ತಿರುಗಿಬಿದ್ದಾಗ ವಿಧಾನಸಭೆಯ ಗಲಭೆ ಕಲಾಸಿಪಾಳ್ಯದ ಗಲಭೆ ರೂಪ ಪಡೆದುಕೊಂಡಾಗ, ಇನ್ನೂ ಕೆರಳಿದ ಕುಮಾರಣ್ಣ ವಿಧಾನಸೌಧ ನಿಮ್ಮಪ್ಪನದ್ದಲ್ಲ ಎಂದು ಅಬ್ಬರಿಸಿದರಂತಲ್ಲಾ, ಥೂತ್ತೇರಿ.

*****

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಣ್ಣನನ್ನು ನಾವು ಸಾಮಾನ್ಯರೆಂದು ಕರೆದುದಕ್ಕೆ ಸ್ಪಷ್ಟನೆ ಕೊಡಬೇಡವೇ! ಮುಖ್ಯವಾಗಿ ಕುಮಾರಣ್ಣ ದೇವೇಗೌಡರ ನಾಲ್ವರು ಮಕ್ಕಳಲ್ಲೊಬ್ಬರು. ವಿದ್ವತ್ತಿನಲ್ಲಿ ಸಾಮಾನ್ಯ ವ್ಯಕ್ತಿ. ಆಡುವ ಮಾತಿನ ಮತ್ತು ಭಾಷಣ ಬಳಕೆ ವಿಷಯದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ. ಏಕೆಂದರೆ ಅವರ ಮಾತು ಭಾಷಣ ಇತ್ಯಾದಿಗಳಲ್ಲಿ ಕೇವಲ ನಲವತ್ತೈದು ಪದಗಳೇ ಸುತ್ತುತ್ತವೆ. ಈ ಸಾಮಾನ್ಯತನ ಸಮಸ್ಯೆ ಅಲ್ಲವಾದರೂ, ಅವರ ಸುತ್ತ ಸಾಮಾನ್ಯವಾಗಿರುತ್ತಿದ್ದ ಗೆಳೆಯರು ಇವತ್ತು ಯಾರೂ ಅವರ ಬಳಿ ಇಲ್ಲ. ಎಲ್ಲಾ ಹೊರಟುಹೋಗುತ್ತಿದ್ದಾರೆ. ಇಂತಹ ಹತಾಶೆಯ ಸಮಯದಲ್ಲಿ, ತಮ್ಮ ವೈರಿಗಳೆಂದುಕೊಂಡವರು ಈಗ ಅಧಿಕಾರದ ಕುರ್ಚಿ ಮೇಲೆ ಕುಳಿತುಕೊಂಡಿರುವುದು ಸಹಿಸಲಸಾಧ್ಯ ಸಂಗತಿಯಾಗಿಹೋಗಿದೆ. ಇಂತಹ ಸಮಯದಲ್ಲಿ ಕುಮಾರಣ್ಣ ಕೆರಳಿ ಕೆಂಡವಾಗುವುದರ ಬದಲು ಸನ್ನಿವೇಶ ನಿಭಾಯಿಸುವ ಚಾಣಾಕ್ಷತೆ ತೋರಬೇಕಾಗಿದೆಯಲ್ಲಾ, ಥೂತ್ತೇರಿ.

*****

ಕೆಂಗಲ್ ಹನುಮಂತಯ್ಯನವರ ಕಾಲದಲ್ಲಿ ಕಟ್ಟಿಸಿದ ವಿಧಾನಸೌಧಕ್ಕೆ ಮೆರಗು ಬರಬೇಕಾದರೆ ಅಲ್ಲಿ ಸಾರ್ವಜನಿಕವಾಗಿ ಶಾಸಕರು ಆಡುವ ಎಲ್ಲ ಮಾತನ್ನೂ ಕೇಳುವಂತಿರಬೇಕು ಮತ್ತು ಅದು ತಿಳಿವಳಿಕೆಯಿಂದ ಕೂಡಿರಬೇಕು. ಅಲ್ಲಿ ನಡೆದ ಚರ್ಚೆಯ ಇತಿಹಾಸ ನೋಡಿದರೆ ಮಾನ್ಯ ದೇವೇಗೌಡರು ಅರಸು ಎದುರು ಸಮರ್ಥವಾಗಿ ವಿರೋಧಪಕ್ಷದ ಕೆಲಸ ನಿರ್ವಹಿಸಿದ ದಾಖಲೆ ಸಿಗುತ್ತದೆ. ಅವರೆಂದೂ ಹಗುರ ಭಾಷೆ ಬಳಸಿದವರಲ್ಲ. ಕುಮಾರಣ್ಣ ಹಳೆಯ ದಾಖಲೆಗಳನ್ನ ವಿಧಾನಸೌಧದ ಲೈಬ್ರರಿಯಲ್ಲಿ ಹುಡುಕಿ ಓದಿದರೆ, ಈ ವಿಧಾನಸೌಧ ನಮ್ಮಪ್ಪುಂದೂ ಅಲ್ಲ, ನಿಮ್ಮಪ್ಪುಂದೂ ಅಲ್ಲ ಎಂಬ ಮಾತು ಹೊರಬರಲಾರದಂತಲ್ಲಾ, ಥೂತ್ತೇರಿ.

*****

ವಿಧಾನಸೌಧದ ಒಳಗೆ ಒಂಥರದ ಗಲಭೆ ನಡೆದಿದ್ದರೆ ಹೊರಗಿನ ಗಲಭೆ ತುಂಬ ಅವ್ಯಕ್ತವಾಗಿದೆಯಂತಲ್ಲಾ. ಮುಖ್ಯವಾಗಿ ಹೊಸ ಸರಕಾರ ನೇಮಿಸಲಿರುವ ಅಕಾಡೆಮಿಗಳು, ನಿಗಮ ಮಂಡಲಿಗಳ ಕುರ್ಚಿಯ ಮೇಲೆ ಕೂರುವ ಸಂಚು ನಡೆಸಿರುವ ಜನ, ಅದರಲ್ಲೂ ಸಾಹಿತ್ಯ, ನಾಟಕ, ಪತ್ರಿಕಾ ಅಕಾಡೆಮಿಗಳನ್ನು ಕುರಿತು ಯೋಚಿಸಿರುವ ಜನರಲ್ಲಿ ಇದು ಕಾಣುತ್ತಿದೆಯಂತಲ್ಲ. ಮಂತ್ರಿ ಶಾಸಕರಿಗೆ ಮುತ್ತಿಕೊಂಡಿರುವುದಲ್ಲದೆ ಪ್ರಭಾವಿಗಳು ಮುಖ್ಯಮಂತ್ರಿ ಕಣ್ಣಿಗೆ ಬೀಳಲು ಹರಸಾಹಸ ಪಡುತ್ತಿರುವುದನ್ನು ನೋಡಿದರೆ ಸಾಮಾನ್ಯರಿಗೆ ಕನಿಕರವಾಗುತ್ತಿದೆಯಂತಲ್ಲಾ. ಏಕೆಂದರೆ ಈ ಮೇಧಾವಿಗಳು ಬಿಜೆಪಿ ಸರಕಾರದಲ್ಲಿ ಇದ್ದಾರೊ ಇಲ್ಲವೊ ಎಂಬಂತೆ ಅವಿತುಕೊಂಡಿದ್ದರು. ಬಿಜೆಪಿಗಳು ನೇರವಾಗಿ ಮುಸ್ಲಿಂ ಸಂಸ್ಕೃತಿ ಮೇಲೆ ದಾಳಿ ಮಾಡಿದಾಗ ಪಠ್ಯಪುಸ್ತಕವನ್ನು ತಿದ್ದಿದಾಗ ಮನೆಯೊಳಗಿದ್ದವರು, ಯಾವತ್ತು ಕಾಂಗ್ರೆಸ್ ಅಧಿಕಾರ ಹಿಡಿಯಿತೊ ಆ ಕೂಡಲೇ ವಿಧಾನಸೌಧದ ಕಾರಿಡಾರಿನಲ್ಲಿ ಸುತ್ತುತ್ತಿರುವುದಲ್ಲದೆ ಬಿಜೆಪಿ ಕಾಲದ ಅನಾಹುತಗಳನ್ನು ದನಿ ಎತ್ತರಿಸಿ ಚರ್ಚಿಸುತ್ತಿದ್ದಾರಲ್ಲಾ, ಥೂತ್ತೇರಿ.

*****

ಸರಕಾರ ಈಗ ಮಾಡಬೇಕಾದದ್ದು ಇಷ್ಟೆ. ಈ ಅಕಾಡೆಮಿ ನಿಗಮಮಂಡಲಿಗಳ ನೇಮಕ ನಿಧಾನವಾಗಿ ಆಗಲಿ ಎಂದು ನಿರ್ಧರಿಸುವುದು; ಇವುಗಳಿಗೆ ನೇಮಕ ತಡವಾಗುವುದರಿಂದ ಯಾವ ಅನಾಹುತಗಳೇನೂ ಸಂಭವಿಸುವುದಿಲ್ಲ. ಆ ಸಮಯದಲ್ಲಿ ಕೋಮುವಾದಿ ಸರಕಾರ ಸೃಷ್ಟಿಸಿದ ಸಮಸ್ಯೆಗಳು ಮತ್ತು ದುರಂತಗಳ ವಿರದ್ಧ ಬರೆದವರು, ಪ್ರತಿಭಟಿಸಿದವರು, ಜಾಥ ತೆಗೆದವರು ಇತ್ಯಾದಿ ಜನಗಳ ಇತಿಹಾಸ ತೆಗೆದರೆ ಯೋಗ್ಯರು ಸಿಗಬಹುದು. ಈ ಹಿಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಸ್ಥಾನಮಾನ ಪಡೆದ ಕಾರಣಕ್ಕಾಗಿಯಾದರು ಕೋಮುವಾದ ಮತ್ತು ದ್ವೇಷದ ವಾತಾವರಣದ ವಿರುದ್ಧ ಹೋರಾಡದೆ, ಹೊಟ್ಟೆತುಂಬ ಕುಡಿದುಕೊಂಡು ಕಾಲಹಾಕಿದವರು ಈಗಲೂ ವಿಧಾನಸೌಧದ ಕಾರಿಡಾರಿನಲ್ಲಿ ಹೊಸವೇಶದೊಂದಿಗೆ ಪ್ರತ್ಯಕ್ಷವಾಗಿವೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...