Homeಮುಖಪುಟಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಜುಲೈ 17 ರಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಒಡನಾಡಿ ಸಂಸ್ಥೆ ತೀರ್ಮಾನಿಸಿದೆ.

- Advertisement -
- Advertisement -

2012ರ ಅಕ್ಟೋಬರ್‌ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯ ಜೋರಾದ ಕೂಡಲೇ ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ಅವರಿಗೆ ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ ಎಂದು ಹೋರಾಟಗಾರ ಮಹೇಶ್ ತಿಮರೋಡಿ ಆರೋಪಿಸಿದ್ದಾರೆ.

ಜಲದರ್ಶಿನಿ ಅತಿಥಿಗೃಹದಲ್ಲಿ ಒಡನಾಡಿ ಸೇವಾ ಸಂಸ್ಥೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬರುತ್ತಿದ್ದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೆಂದ್ರ ಹೆಗ್ಡೆ ಅವರು ಶಕ್ತಿಯೋಜನೆಯನ್ನು ಹೊಗಳುವ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ತಲೆಹಾಕದಂತೆ ಕಟ್ಟಿಹಾಕುವ ಉದ್ದೇಶದಿಂದ ಅವರಿಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಇವರ ಮಾತಿಗೆ ಮರುಳಾಗದೇ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶ ಮಾಡುವ ಮೂಲಕ ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಧರ್ಮಸ್ಥದಲ್ಲಿ ಸೌಜನ್ಯ ಪ್ರಕರಣದಂತಹ ನೂರಾರು ಕೊಲೆ, ಅತ್ಯಾಚಾರಗಳು ನಡೆದು ಬೆಳಕಿಗೆ ಬಾರದೆ ಕತ್ತಲಲ್ಲೇ ಕರಗಿ ಹೋಗಿವೆ. ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ರಾಜ್ಯದ ಜನರು ತಲೆ ತಗ್ಗಿಸುವಂತ ವಿಚಾರ.  ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣದಂತೆ, ಪದ್ಮ, ನೇತ್ರಾವತಿಯಂತಹ ನೂರಾರು ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದಾಗ ಈ ನಕಲಿ ಹಿಂದುತ್ವಾದಿಗಳಾದ ಬಜರಂಗದಳ, ವಿಶ್ವಹಿಂದೂ ಪರಿಷತ್, ಆರೆಸ್‍ಎಸ್ ಸಂಘಟನೆಗಳು ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಲೇ ಇಲ್ಲ. ಇವರೆಲ್ಲ ಬಾಡಿಗೆ ಹೋರಾಟಗಾರರು ಎಂದು ಮಹೇಶ್ ಶೆಟ್ಟಿ ಆರೋಪಿಸಿದ್ದಾರೆ.

ಒತ್ತಾಯಿಸಿ ಜುಲೈ 17 ರಂದು ಮೈಸೂರಿನಲ್ಲಿ ಪ್ರತಿಭಟನೆ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಜುಲೈ 17 ರಂದು ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಿಂದ ಗಾಂಧಿವೃತ್ತದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ತಿಳಿಸಿದ್ದಾರೆ.

“ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವಂತೆ ಜನರಲ್ಲಿ ಹೇಗೆ ಜಾಗೃತ ಮೂಡಿಸಬೇಕು ಎಂಬ ವಿಚಾರವಾಗಿ ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಅದರ ಭಾಗವಾಗಿ ಈ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

ಹಲವಾರು ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನೆಡಸಲಾಗುತ್ತಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳು, ಅತ್ಯಾಚಾರಗಳು ಮತ್ತೆ ಮರುಕಳಿಸದಂತೆ ತಡೆಯಲು ಈ ಹೋರಾಟ ಅತ್ಯವಶ್ಯಕ ಎಂದು ಅವರು ಹೇಳಿದ್ದಾರೆ.

ಎಂ.ಎಲ್ ಪರಶುರಾಂ ಮಾತನಾಡಿ, ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬ ವ್ಯಕ್ತಿಯನ್ನು ಅಪರಾಧಿ ಎಂದು ಸುಳ್ಳು ಪ್ರಕರಣ ದಾಖಲಿಸಿ ಆರುವರೆ ವರ್ಷಗಳ ಕಾಲ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಆದರೆ ಸಿಬಿಐ ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿದೆ. ಅಧಿಕಾರಿಗಳು ಕೊಟ್ಟಿರುವ ಸಾಕ್ಷಿಗಳು ಹಾಗೂ ವೈದ್ಯರು ನೀಡಿರುವ ಡಿಎನ್‍ಎ ವರದಿಗಳು ಹೊಲಿಕೆಯಾಗುತ್ತಿಲ್ಲ ಎಂದು ಹೇಳಿದ್ದು, ನೈಜ ಆರೋಪಿಗಳ ತನಿಖೆ ಮಾಡುವಂತೆ ಆದೇಶವನ್ನೂ ನೀಡಿದೆ. ಅದರಂತೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಸೌಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...