Homeಕರ್ನಾಟಕಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇದೀಗ ಲೋಕಸಭೆ ಚುನಾವಣೆಗೆ ಒಗ್ಗಟ್ಟಾಗಲಿವೆ ಎನ್ನುವ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ಈ ನಡುವೆ ಜೆಡಿಎಸ್ ಪಕ್ಷವು ಎನ್​ಡಿಎ ಮೈತ್ರಿಕೂಟವನ್ನು ಸೇರಲು ಸಜ್ಜಾಗುತ್ತಿದೆ ಎಂದು ವರದಿಯಾಗಿದೆ.

ಜೆಡಿಎಸ್ ಪಕ್ಷವು ಎನ್​ಡಿಎ ಮೈತ್ರಿಕೂಟ ಸೇರುವುದು ಬಹುತೇಕ ಖಚಿತ ೆನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡುತ್ತಿದೆ. ಸೋಮವಾರ ಅಥವಾ ಮಂಗಳವಾರ ಹೆಚ್​ಡಿ ಕುಮಾರಸ್ವಾಮಿ ಅವರು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.

ದೆಹಲಿಯಲ್ಲಿ ಇದೇ 18ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಜೆಡಿಎಸ್‌ ಭಾಗಿಯಾಗುವುದೇ ಇಲ್ಲವೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಬಿರುಸುಗೊಂಡಿದೆ.

ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ, ಲೋಕಸಭೆ ಚುನಾವಣೆ ಹೊತ್ತಿಗಾದರೂ ಚೇತರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಜೆಡಿಎಸ್ ಮೊರೆ ಹೋಗಿದೆ. ಕಾಂಗ್ರೆಸ್ ಜತೆ ಸಂಬಂಧ ಹಳಸಿರುವುದರಿಂದಾಗಿ, ಮತ್ತೆ ತಲೆ ಎತ್ತಬೇಕಾದರೆ ಬಿಜೆಪಿ ಆಸರೆಯೇ ಸೂಕ್ತ ಎಂಬ ತರ್ಕಕ್ಕೆ ದಳಪತಿಗಳೂ ಬಂದಿದ್ದಾರೆ. ಈ ಮಧ್ಯೆ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಕಠಿಣ ಸ್ಪರ್ಧೆ ಎದುರಿಸಬೇಕಾಗುತ್ತದೆ. ಹೀಗಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಿದರೆ ಆ ಪಕ್ಷದ ಪ್ರಾಬಲ್ಯ ಇರುವ ಕಡೆಯಲ್ಲಿ ಕಾಂಗ್ರೆಸ್ ಅನ್ನು ಒಟ್ಟಾಗಿ ಎದುರಿಸಬಹುದು ಎಂಬುದು ಬೆಜೆಪಿ ಲೆಕ್ಕಾಚಾರವಾಗಿದೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿ, ಈಗ ಚದುರಿಹೋಗಿರುವ ವಿವಿಧ ಪಕ್ಷಗಳ ನಾಯಕರಿಗೆ ಪತ್ರ ಬರೆದಿರುವ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಮತ್ತೆ ಕೂಟವನ್ನು ಒಗ್ಗೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಕುಮಾರಸ್ವಾಮಿಯವರ ಆಪ್ತ ಮೂಲಗಳು ಹೇಳುವಂತೆ, ”ಇಲ್ಲಿಯವರೆಗೆ ಬಿಜೆಪಿಯಿಂದ ಆಹ್ವಾನ ಬಂದಿಲ್ಲ, ಬಂದ ಬಳಿಕವಷ್ಟೇ, ಸಭೆಯಲ್ಲಿ ಪಾಲ್ಗೊಳ್ಳಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದು ಹೇಳಲಾಗಿದೆ.

”ನಾವೇ ಏಕಾಂಗಿಯಾಗಿ ಸ್ಪರ್ಧಿಸಿದರೆ 2-4 ಸ್ಥಾನದಲ್ಲಾದರೂ ಗೆಲ್ಲಬಹುದು. ಬಿಜೆಪಿ ಜತೆಗೆ ಹೋದರೆ, 2019ರಲ್ಲಿ ಕಾಂಗ್ರೆಸ್‌ ಜತೆಗೆ ಹೋದಂತೆ ಆಗಿ, ಇರುವ ಸ್ಥಾನವನ್ನೂ ಕಳೆದುಕೊಳ್ಳಬೇಕಾಗಬಹುದೆಂಬ ಆತಂಕ ಇದೆ. ಈ ಗೊಂದಲ ಇರುವುದರಿಂದ ಯಾವುದೇ ತೀರ್ಮಾನವೂ ಆಗಿಲ್ಲ” ಎಂದು ಮೂಲಗಳು ವಿವರಿಸಿವೆ.

ಕಳೆದ ಒಂದು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯ ವಿಚಾರವಾಗಿ ದೆಹಲಿಯಲ್ಲಿ  ಬಿಜೆಪಿ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಹೀಗಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ.

ಇದನ್ನೂ ಓದಿ: ಕುಮಾರಸ್ವಾಮಿ ಹೇಳಿದ್ದೇ ಸರಿ..: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸುಳಿವು ನೀಡಿದ ಬಿಎಸ್‌ವೈ

ಕಮಲ-ದಳ ಒಂದಾಗುವ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆ

ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಂಡು ಅಧಿಕಾರ ಹಿಡಿದಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ 25 ಸ್ಥಾನಗಳನ್ನು ಮರಳಿ ಗಳಿಸುವುದು ಕಷ್ಟ. ಹಾಗಾಗಿ ಜೆಡಿಎಸ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಒಂದಾಗಿ ಚುನಾವಣೆಗೆ ಹೋದರೆ ಒಂದಷ್ಟು ಸ್ಥಾನಗಳನ್ನು ಗಳಿಸಬಹುದು ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ.

ಈ ಬಗ್ಗೆ ಬಿಜೆಪಿ ನಾಯಕರೊಬ್ಬರು ಮಾತನಾಡಿದ್ದು, ”’ಈ ವಿಷಯದಲ್ಲಿ ಕುಮಾರಸ್ವಾಮಿ ಜತೆಗೆ ಬಿಜೆಪಿ ವರಿಷ್ಠರು ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಒಂದು ಪಕ್ಷವನ್ನು ಬಿಜೆಪಿ ಜತೆ ವಿಲೀನಗೊಳಿಸುವುದು. ಆಗ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುತ್ತೇವೆ. ನಿಮ್ಮ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ವರಿಷ್ಠರು ಭರವಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

”ಈ ಪ್ರಸ್ತಾವಕ್ಕೆ ಕುಮಾರಸ್ವಾಮಿ ಒಪ್ಪಿಲ್ಲ. ಕರ್ನಾಟಕದಲ್ಲಿ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಜತೆ ಸೆಣಸಬೇಕಾಗಿರುವುದರಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಮೈತ್ರಿಕೂಟವನ್ನು ಸೇರಲು ಸಾಧ್ಯವೇ ಇಲ್ಲ. ಹೀಗಾಗಿ, ನಮ್ಮ ಅಸ್ತಿತ್ವ ಉಳಿಸಿಕೊಂಡು, ಎನ್‌ಡಿಎ ಮೈತ್ರಿಕೂಟ ಸೇರಲು ಸಿದ್ಧ. ವಿರೋಧ ಪಕ್ಷ ನಾಯಕ ಸ್ಥಾನದ ಬದಲು ಕೇಂದ್ರ ಸಚಿವ ಸ್ಥಾನ ಕೊಟ್ಟರೆ, ಕರ್ನಾಟಕದಲ್ಲೂ ನಿಮ್ಮ ಪಕ್ಷಕ್ಕೆ ಬಲ ತಂದುಕೊಡುತ್ತೇನೆ ಎಂದು ಕುಮಾರಸ್ವಾಮಿ ಪ್ರತಿಪಾದಿಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ಇದೇ ಕಾರಣಕ್ಕೆ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಆಯ್ಕೆ ನಡೆದಿಲ್ಲ. ಕುಮಾರಸ್ವಾಮಿ ವಿಲೀನಕ್ಕೆ ಒಪ್ಪಿದರೆ ಅವರೇ ಆ ಸ್ಥಾನಕ್ಕೆ ಬರುವ ಸಾಧ್ಯತೆ ಹೆಚ್ಚು. ಕರ್ನಾಟಕದ ನಾಯಕರ ಜತೆಗೆ ಚರ್ಚೆ ನಡೆದಿಲ್ಲ. ದೆಹಲಿ ವರಿಷ್ಠರ ಹಂತದಲ್ಲೇ ಈ ಸಮಾಲೋಚನೆ ನಡೆದಿದೆ. ತೀರ್ಮಾನವನ್ನು ಅವರೇ ತೆಗೆದುಕೊಳ್ಳಬೇಕಿದೆ. ಎನ್‌ಡಿಎ ಮೈತ್ರಿಕೂಟದ ಸಭೆ ಮುಗಿದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು. ಅನೇಕ ಪಕ್ಷಗಳು ಬೆಂಬಲಿಸುತ್ತಿದ್ದು, ಜೆಡಿಎಸ್​ನಿಂದಲೂ ನಾವು ಅಪೇಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...