Homeಮುಖಪುಟವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಲೇಖಕ ರಂಜಾನ್ ದರ್ಗಾ ಅವರು ‘ಸಿದ್ದರಾಮಯ್ಯನವರ ಗಮನಕ್ಕೆ’ ಎಂದು ಬರೆದ ಬರಹವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿದೆ. ”ನೆಹರೂ ಅವರು ಸ್ವಿಜರ್‌ಲ್ಯಾಂಡ್‌ನಿಂದ ಭಾರತಕ್ಕೆ ಬರುವಾಗ ರೊಮ್ ಏರ್‌ಪೋರ್ಟ್‌ನಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರಿ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ. ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯನವರ ಯಾರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ನಿಮ್ಮನ್ನು ಯಾರೆಷ್ಟೇ ಬೈದರೂ ನಿಮ್ಮ ಸೆಕ್ಯುಲರ್ ಕಮಿಟ್‌ಮೆಂಟ್ ಬಗ್ಗೆ ನಿಮ್ಮ ವಿರೋಧಿಗಳಿಗೂ ಒಳಗೊಳಗೇ ಮೆಚ್ಚುಗೆಯಿತ್ತು. ಇಂದು ಭಟ್ಟನ ಸೈದ್ಧಾಂತಿಕ ಮಿತ್ರರೂ ಸಿದ್ದರಾಮಯ್ಯನವರೂ ಇಷ್ಟೇನಾ ಎಂದು ಆಡಿಕೊಳ್ಳುವಂತಾಗಿದೆ ಸರ್. ನಿಮ್ಮ ಘನತೆಗಿಂತ ಕೆಳಮಟ್ಟಕ್ಕಿಳಿಯದಿರಿ ಪ್ಲೀಸ್ ಎಂದು ಲೇಖಕ ಇಸ್ಮತ್ ಪಜೀರ್ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯನವರೇ, ಗೆದ್ದ ಮೇಲೆ ಊರಾಳುಗಳ ಹಂಗ್ಯಾಕೆ ಅನ್ನುವ ಅಟಿಟ್ಯೂಡ್ ಬಿಟ್ಟುಬಿಡಿ. ಇಂಥ ಅಪವಿತ್ರ ಒಳವ್ಯವಹಾರಗಳು ನಿಮ್ಮನ್ನು ಗೆಲ್ಲಿಸಿಲ್ಲ. ತೀರಾ ತೀರಾ ನಗಣ್ಯವೆನಿಸುವ ಪುಟ್ಟ ಪುಟ್ಟ ಫೇಸ್‌ಬುಕ್‌ ಅಳಿಲುಗಳ ಪ್ರಯತ್ನಗಳು ಕೂಡಾ ನಿಮ್ಮ ಗೆಲುವಿನ ಹಿಂದಿದೆ ಅನ್ನುವುದನ್ನು ಮರೆಯಬಾರದು. ನಿಮ್ಮ ಗೆಲುವಿನ ಕನಸು ಹೊತ್ತಿದ್ದ ಇದೇ ‘ಫೇಸ್‌ಬುಕ್‌ ಜಾಣ’ರೆಲ್ಲ ಈಗ ಕಾಲದ ಕಸದಬುಟ್ಟಿಯ ನಿಷ್ಪ್ರಯೋಜಕ ಸೊತ್ತುಗಳನ್ನಿಸಿಕೊಳ್ಳುವುದು ನಿಮಗೆ ಮುಂದೆ ದುಬಾರಿಯಾದೀತು. ನಿಮ್ಮ ಸುತ್ತಮುತ್ತಲಿನ ಕೊಂಬು ಕೋಡುಗಳ ಬುದ್ಧಿವಂತರ, ಬು.ಜೀ.ವೇಷದ ಪುಢಾರಿಗಳ ನೆತ್ತಿಗಣ್ಣುಗಳು ನಿಮ್ಮ ಪಾದದಡಿಯ ಹಸುರು ಹೂವುಗಳನ್ನು ಗಮನಿಸದಂತೆ ದಾರಿತಪ್ಪಿಸುತ್ತವೆ. ನಮಗೆ ನಿಮ್ಮ ಸರಕಾರದ ಯಾವ ಪ್ರಯೋಜನಗಳೂ ಬೇಡ. ವಿಚಾರಬದ್ಧತೆಯ ಸಾತ್ವಿಕ ಸಿಟ್ಟಿನ ಜೆಂಟಲ್ ಮ್ಯಾನ್ ನಡಿಗೆ ಬೇಕಷ್ಟೆ. ಅಷ್ಟೇ ಅಷ್ಟೇ! ಎಂದು ಕಾರ್ಟೂನಿಷ್ಟ್ ದಿನೇಶ್ ಕುಕ್ಕಜಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಯರ್ ಸಿದ್ದು…
ನೀವು ಬಿಡುಗಡೆ ಮಾಡುತ್ತಿರುವುದು ಇಂತಹ
ವರ್ಣಶ್ರೇಷ್ಠತೆಯ ವ್ಯಸನಿ..ಜನಾಂಗೀಯವಾದಿ ಬರೆದಿರುವ ಪುಸ್ತಕಗಳನ್ನ…
ಒಮ್ಮೆ ಯೋಚಿಸಿ..ನಮ್ಮನ್ನ ಅವಮಾನಿಸಬೇಡಿ ಎಂದು ತೇಜ ಯಾಲಕ್ಕಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸಿದ್ದರಾಮಯ್ಯನವರು ತಮ್ಮ ಸಿದ್ದಾಂತ ನಂಬಿಕೆಗಳನ್ನು ಬದಲಾಯಿಸಿಕೊಂಡುಬಿಡಬಹುದು ಎಂಬ ಹೆದರಿಕೆ ಯಾರಿಗೂ ಇಲ್ಲ. ವಿಷಜಂತುಗಳಿಗೆ ಮಾನ್ಯತೆ ದೊರೆತು ಮತ್ತಷ್ಟು ವಿಷ ಹಂಚುತ್ತವೆ ಸಮಾಜದಲ್ಲಿ ಎಂಬ ಕಾಳಜಿ. ಸಿದ್ದರಾಮಯ್ಯನವರನ್ನು ಯಾರೂ ವಿರೋಧಿಸುತ್ತಿಲ್ಲ. ಸಿದ್ದರಾಮಯ್ಯನವರಿಗೆ ಬುದ್ದಿ ಹೇಳೋದು ಅನ್ನೋಕಿಂತ, ಸಿದ್ದರಾಮಯ್ಯನವರು ಮತ್ತು ಆ ವ್ಯಕ್ತಿಯ ಒಡನಾಟ ಎಲ್ಲರಿಗೂ ತಿಳಿದಿರುವುದರಿಂದ ಈಗ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹೋಗಬಾರದು ಎಂಬ ಕಾಳಜಿ” ಎಂದು ಪರಮೇಶ್ವರ ಗುರುಸ್ವಾಮಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಮರಸೇನಾನಿ, ಸಮಾಜವಾದಿ ಸಿದ್ದರಾಮಯ್ಯನವರು ತಮ್ಮ ಕನ್ನಡಕ ಹಾಕಿಕೊಂಡು ಮತ್ತೊಮ್ಮೆ ಮಗದೊಮ್ಮೆ ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದವರು ಯಾರು ಅಂತ ನೋಡಲಿ….
ಇಂತಹವರ ಜೊತೆಗೆ ಬುಲ್ಲಿ ಬುಲ್ಲಿ ಆಡಲು ನಿಂತಿದ್ದಾರೆ ಅಂದರೆ ಏನು ಹೇಳೋದು ಪ್ರೆಂಡ್ಸ…. ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ವಜನಾಂಗದ ಶಾಂತಿಯ ತೋಟ’ದ ಮರಗಳ ಬೇರುಗಳಿಗೆ ನಿಧಾನವಿಷ ಇಕ್ಕುವ ಮೂಲಕ ರಾಜ್ಯದ ಸಾಮರಸ್ಯಕ್ಕೆ ಕೊಳ್ಳಿ ಹಚ್ಚುವುದನ್ನೇ ಹೊಸ ಶೈಲಿಯ ಪತ್ರಿಕೋದ್ಯಮ ಎಂದು ಬಿಂಬಿಸಿದವರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲಕ್ಕಿಂತ ಮುಖ್ಯ ‘ಗ್ಯಾರಂಟಿ’ಯ ಭರವಸೆಗೆ ಅವರೇ ಬೆಲೆ ಕೊಡುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಕಾರ್ಟೂನಿಸ್ಟ್ ಪಿ.ಮಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯನವರೆ ನೀವು ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋದರೆ ನೀವು ಕೂಡ ಇಸ್ಲಾಮೋಫೋಬಿಯಾ, ಜಾತಿವಾದಿ ಮತ್ತು ಸ್ತ್ರೀದ್ವೇಷದ ನಡವಳಿಕೆಯನ್ನು ಅನುಮೋದಿಸುತ್ತಿದ್ದೀರಿ ಎಂದರ್ಥ. ಹಾಗಾಗಿ ಕೂಡಲೇ ಹೋಗುವುದಿಲ್ಲ ಎಂದು ಘೋಷಿಸಿ ಎಂದು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...