Homeಮುಖಪುಟವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಲೇಖಕ ರಂಜಾನ್ ದರ್ಗಾ ಅವರು ‘ಸಿದ್ದರಾಮಯ್ಯನವರ ಗಮನಕ್ಕೆ’ ಎಂದು ಬರೆದ ಬರಹವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿದೆ. ”ನೆಹರೂ ಅವರು ಸ್ವಿಜರ್‌ಲ್ಯಾಂಡ್‌ನಿಂದ ಭಾರತಕ್ಕೆ ಬರುವಾಗ ರೊಮ್ ಏರ್‌ಪೋರ್ಟ್‌ನಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರಿ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ. ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯನವರ ಯಾರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ನಿಮ್ಮನ್ನು ಯಾರೆಷ್ಟೇ ಬೈದರೂ ನಿಮ್ಮ ಸೆಕ್ಯುಲರ್ ಕಮಿಟ್‌ಮೆಂಟ್ ಬಗ್ಗೆ ನಿಮ್ಮ ವಿರೋಧಿಗಳಿಗೂ ಒಳಗೊಳಗೇ ಮೆಚ್ಚುಗೆಯಿತ್ತು. ಇಂದು ಭಟ್ಟನ ಸೈದ್ಧಾಂತಿಕ ಮಿತ್ರರೂ ಸಿದ್ದರಾಮಯ್ಯನವರೂ ಇಷ್ಟೇನಾ ಎಂದು ಆಡಿಕೊಳ್ಳುವಂತಾಗಿದೆ ಸರ್. ನಿಮ್ಮ ಘನತೆಗಿಂತ ಕೆಳಮಟ್ಟಕ್ಕಿಳಿಯದಿರಿ ಪ್ಲೀಸ್ ಎಂದು ಲೇಖಕ ಇಸ್ಮತ್ ಪಜೀರ್ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯನವರೇ, ಗೆದ್ದ ಮೇಲೆ ಊರಾಳುಗಳ ಹಂಗ್ಯಾಕೆ ಅನ್ನುವ ಅಟಿಟ್ಯೂಡ್ ಬಿಟ್ಟುಬಿಡಿ. ಇಂಥ ಅಪವಿತ್ರ ಒಳವ್ಯವಹಾರಗಳು ನಿಮ್ಮನ್ನು ಗೆಲ್ಲಿಸಿಲ್ಲ. ತೀರಾ ತೀರಾ ನಗಣ್ಯವೆನಿಸುವ ಪುಟ್ಟ ಪುಟ್ಟ ಫೇಸ್‌ಬುಕ್‌ ಅಳಿಲುಗಳ ಪ್ರಯತ್ನಗಳು ಕೂಡಾ ನಿಮ್ಮ ಗೆಲುವಿನ ಹಿಂದಿದೆ ಅನ್ನುವುದನ್ನು ಮರೆಯಬಾರದು. ನಿಮ್ಮ ಗೆಲುವಿನ ಕನಸು ಹೊತ್ತಿದ್ದ ಇದೇ ‘ಫೇಸ್‌ಬುಕ್‌ ಜಾಣ’ರೆಲ್ಲ ಈಗ ಕಾಲದ ಕಸದಬುಟ್ಟಿಯ ನಿಷ್ಪ್ರಯೋಜಕ ಸೊತ್ತುಗಳನ್ನಿಸಿಕೊಳ್ಳುವುದು ನಿಮಗೆ ಮುಂದೆ ದುಬಾರಿಯಾದೀತು. ನಿಮ್ಮ ಸುತ್ತಮುತ್ತಲಿನ ಕೊಂಬು ಕೋಡುಗಳ ಬುದ್ಧಿವಂತರ, ಬು.ಜೀ.ವೇಷದ ಪುಢಾರಿಗಳ ನೆತ್ತಿಗಣ್ಣುಗಳು ನಿಮ್ಮ ಪಾದದಡಿಯ ಹಸುರು ಹೂವುಗಳನ್ನು ಗಮನಿಸದಂತೆ ದಾರಿತಪ್ಪಿಸುತ್ತವೆ. ನಮಗೆ ನಿಮ್ಮ ಸರಕಾರದ ಯಾವ ಪ್ರಯೋಜನಗಳೂ ಬೇಡ. ವಿಚಾರಬದ್ಧತೆಯ ಸಾತ್ವಿಕ ಸಿಟ್ಟಿನ ಜೆಂಟಲ್ ಮ್ಯಾನ್ ನಡಿಗೆ ಬೇಕಷ್ಟೆ. ಅಷ್ಟೇ ಅಷ್ಟೇ! ಎಂದು ಕಾರ್ಟೂನಿಷ್ಟ್ ದಿನೇಶ್ ಕುಕ್ಕಜಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಯರ್ ಸಿದ್ದು…
ನೀವು ಬಿಡುಗಡೆ ಮಾಡುತ್ತಿರುವುದು ಇಂತಹ
ವರ್ಣಶ್ರೇಷ್ಠತೆಯ ವ್ಯಸನಿ..ಜನಾಂಗೀಯವಾದಿ ಬರೆದಿರುವ ಪುಸ್ತಕಗಳನ್ನ…
ಒಮ್ಮೆ ಯೋಚಿಸಿ..ನಮ್ಮನ್ನ ಅವಮಾನಿಸಬೇಡಿ ಎಂದು ತೇಜ ಯಾಲಕ್ಕಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸಿದ್ದರಾಮಯ್ಯನವರು ತಮ್ಮ ಸಿದ್ದಾಂತ ನಂಬಿಕೆಗಳನ್ನು ಬದಲಾಯಿಸಿಕೊಂಡುಬಿಡಬಹುದು ಎಂಬ ಹೆದರಿಕೆ ಯಾರಿಗೂ ಇಲ್ಲ. ವಿಷಜಂತುಗಳಿಗೆ ಮಾನ್ಯತೆ ದೊರೆತು ಮತ್ತಷ್ಟು ವಿಷ ಹಂಚುತ್ತವೆ ಸಮಾಜದಲ್ಲಿ ಎಂಬ ಕಾಳಜಿ. ಸಿದ್ದರಾಮಯ್ಯನವರನ್ನು ಯಾರೂ ವಿರೋಧಿಸುತ್ತಿಲ್ಲ. ಸಿದ್ದರಾಮಯ್ಯನವರಿಗೆ ಬುದ್ದಿ ಹೇಳೋದು ಅನ್ನೋಕಿಂತ, ಸಿದ್ದರಾಮಯ್ಯನವರು ಮತ್ತು ಆ ವ್ಯಕ್ತಿಯ ಒಡನಾಟ ಎಲ್ಲರಿಗೂ ತಿಳಿದಿರುವುದರಿಂದ ಈಗ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹೋಗಬಾರದು ಎಂಬ ಕಾಳಜಿ” ಎಂದು ಪರಮೇಶ್ವರ ಗುರುಸ್ವಾಮಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಮರಸೇನಾನಿ, ಸಮಾಜವಾದಿ ಸಿದ್ದರಾಮಯ್ಯನವರು ತಮ್ಮ ಕನ್ನಡಕ ಹಾಕಿಕೊಂಡು ಮತ್ತೊಮ್ಮೆ ಮಗದೊಮ್ಮೆ ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದವರು ಯಾರು ಅಂತ ನೋಡಲಿ….
ಇಂತಹವರ ಜೊತೆಗೆ ಬುಲ್ಲಿ ಬುಲ್ಲಿ ಆಡಲು ನಿಂತಿದ್ದಾರೆ ಅಂದರೆ ಏನು ಹೇಳೋದು ಪ್ರೆಂಡ್ಸ…. ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ವಜನಾಂಗದ ಶಾಂತಿಯ ತೋಟ’ದ ಮರಗಳ ಬೇರುಗಳಿಗೆ ನಿಧಾನವಿಷ ಇಕ್ಕುವ ಮೂಲಕ ರಾಜ್ಯದ ಸಾಮರಸ್ಯಕ್ಕೆ ಕೊಳ್ಳಿ ಹಚ್ಚುವುದನ್ನೇ ಹೊಸ ಶೈಲಿಯ ಪತ್ರಿಕೋದ್ಯಮ ಎಂದು ಬಿಂಬಿಸಿದವರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲಕ್ಕಿಂತ ಮುಖ್ಯ ‘ಗ್ಯಾರಂಟಿ’ಯ ಭರವಸೆಗೆ ಅವರೇ ಬೆಲೆ ಕೊಡುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಕಾರ್ಟೂನಿಸ್ಟ್ ಪಿ.ಮಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯನವರೆ ನೀವು ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋದರೆ ನೀವು ಕೂಡ ಇಸ್ಲಾಮೋಫೋಬಿಯಾ, ಜಾತಿವಾದಿ ಮತ್ತು ಸ್ತ್ರೀದ್ವೇಷದ ನಡವಳಿಕೆಯನ್ನು ಅನುಮೋದಿಸುತ್ತಿದ್ದೀರಿ ಎಂದರ್ಥ. ಹಾಗಾಗಿ ಕೂಡಲೇ ಹೋಗುವುದಿಲ್ಲ ಎಂದು ಘೋಷಿಸಿ ಎಂದು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...