Homeಮುಖಪುಟವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಲೇಖಕ ರಂಜಾನ್ ದರ್ಗಾ ಅವರು ‘ಸಿದ್ದರಾಮಯ್ಯನವರ ಗಮನಕ್ಕೆ’ ಎಂದು ಬರೆದ ಬರಹವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿದೆ. ”ನೆಹರೂ ಅವರು ಸ್ವಿಜರ್‌ಲ್ಯಾಂಡ್‌ನಿಂದ ಭಾರತಕ್ಕೆ ಬರುವಾಗ ರೊಮ್ ಏರ್‌ಪೋರ್ಟ್‌ನಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರಿ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ. ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯನವರ ಯಾರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ನಿಮ್ಮನ್ನು ಯಾರೆಷ್ಟೇ ಬೈದರೂ ನಿಮ್ಮ ಸೆಕ್ಯುಲರ್ ಕಮಿಟ್‌ಮೆಂಟ್ ಬಗ್ಗೆ ನಿಮ್ಮ ವಿರೋಧಿಗಳಿಗೂ ಒಳಗೊಳಗೇ ಮೆಚ್ಚುಗೆಯಿತ್ತು. ಇಂದು ಭಟ್ಟನ ಸೈದ್ಧಾಂತಿಕ ಮಿತ್ರರೂ ಸಿದ್ದರಾಮಯ್ಯನವರೂ ಇಷ್ಟೇನಾ ಎಂದು ಆಡಿಕೊಳ್ಳುವಂತಾಗಿದೆ ಸರ್. ನಿಮ್ಮ ಘನತೆಗಿಂತ ಕೆಳಮಟ್ಟಕ್ಕಿಳಿಯದಿರಿ ಪ್ಲೀಸ್ ಎಂದು ಲೇಖಕ ಇಸ್ಮತ್ ಪಜೀರ್ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯನವರೇ, ಗೆದ್ದ ಮೇಲೆ ಊರಾಳುಗಳ ಹಂಗ್ಯಾಕೆ ಅನ್ನುವ ಅಟಿಟ್ಯೂಡ್ ಬಿಟ್ಟುಬಿಡಿ. ಇಂಥ ಅಪವಿತ್ರ ಒಳವ್ಯವಹಾರಗಳು ನಿಮ್ಮನ್ನು ಗೆಲ್ಲಿಸಿಲ್ಲ. ತೀರಾ ತೀರಾ ನಗಣ್ಯವೆನಿಸುವ ಪುಟ್ಟ ಪುಟ್ಟ ಫೇಸ್‌ಬುಕ್‌ ಅಳಿಲುಗಳ ಪ್ರಯತ್ನಗಳು ಕೂಡಾ ನಿಮ್ಮ ಗೆಲುವಿನ ಹಿಂದಿದೆ ಅನ್ನುವುದನ್ನು ಮರೆಯಬಾರದು. ನಿಮ್ಮ ಗೆಲುವಿನ ಕನಸು ಹೊತ್ತಿದ್ದ ಇದೇ ‘ಫೇಸ್‌ಬುಕ್‌ ಜಾಣ’ರೆಲ್ಲ ಈಗ ಕಾಲದ ಕಸದಬುಟ್ಟಿಯ ನಿಷ್ಪ್ರಯೋಜಕ ಸೊತ್ತುಗಳನ್ನಿಸಿಕೊಳ್ಳುವುದು ನಿಮಗೆ ಮುಂದೆ ದುಬಾರಿಯಾದೀತು. ನಿಮ್ಮ ಸುತ್ತಮುತ್ತಲಿನ ಕೊಂಬು ಕೋಡುಗಳ ಬುದ್ಧಿವಂತರ, ಬು.ಜೀ.ವೇಷದ ಪುಢಾರಿಗಳ ನೆತ್ತಿಗಣ್ಣುಗಳು ನಿಮ್ಮ ಪಾದದಡಿಯ ಹಸುರು ಹೂವುಗಳನ್ನು ಗಮನಿಸದಂತೆ ದಾರಿತಪ್ಪಿಸುತ್ತವೆ. ನಮಗೆ ನಿಮ್ಮ ಸರಕಾರದ ಯಾವ ಪ್ರಯೋಜನಗಳೂ ಬೇಡ. ವಿಚಾರಬದ್ಧತೆಯ ಸಾತ್ವಿಕ ಸಿಟ್ಟಿನ ಜೆಂಟಲ್ ಮ್ಯಾನ್ ನಡಿಗೆ ಬೇಕಷ್ಟೆ. ಅಷ್ಟೇ ಅಷ್ಟೇ! ಎಂದು ಕಾರ್ಟೂನಿಷ್ಟ್ ದಿನೇಶ್ ಕುಕ್ಕಜಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಯರ್ ಸಿದ್ದು…
ನೀವು ಬಿಡುಗಡೆ ಮಾಡುತ್ತಿರುವುದು ಇಂತಹ
ವರ್ಣಶ್ರೇಷ್ಠತೆಯ ವ್ಯಸನಿ..ಜನಾಂಗೀಯವಾದಿ ಬರೆದಿರುವ ಪುಸ್ತಕಗಳನ್ನ…
ಒಮ್ಮೆ ಯೋಚಿಸಿ..ನಮ್ಮನ್ನ ಅವಮಾನಿಸಬೇಡಿ ಎಂದು ತೇಜ ಯಾಲಕ್ಕಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸಿದ್ದರಾಮಯ್ಯನವರು ತಮ್ಮ ಸಿದ್ದಾಂತ ನಂಬಿಕೆಗಳನ್ನು ಬದಲಾಯಿಸಿಕೊಂಡುಬಿಡಬಹುದು ಎಂಬ ಹೆದರಿಕೆ ಯಾರಿಗೂ ಇಲ್ಲ. ವಿಷಜಂತುಗಳಿಗೆ ಮಾನ್ಯತೆ ದೊರೆತು ಮತ್ತಷ್ಟು ವಿಷ ಹಂಚುತ್ತವೆ ಸಮಾಜದಲ್ಲಿ ಎಂಬ ಕಾಳಜಿ. ಸಿದ್ದರಾಮಯ್ಯನವರನ್ನು ಯಾರೂ ವಿರೋಧಿಸುತ್ತಿಲ್ಲ. ಸಿದ್ದರಾಮಯ್ಯನವರಿಗೆ ಬುದ್ದಿ ಹೇಳೋದು ಅನ್ನೋಕಿಂತ, ಸಿದ್ದರಾಮಯ್ಯನವರು ಮತ್ತು ಆ ವ್ಯಕ್ತಿಯ ಒಡನಾಟ ಎಲ್ಲರಿಗೂ ತಿಳಿದಿರುವುದರಿಂದ ಈಗ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹೋಗಬಾರದು ಎಂಬ ಕಾಳಜಿ” ಎಂದು ಪರಮೇಶ್ವರ ಗುರುಸ್ವಾಮಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಮರಸೇನಾನಿ, ಸಮಾಜವಾದಿ ಸಿದ್ದರಾಮಯ್ಯನವರು ತಮ್ಮ ಕನ್ನಡಕ ಹಾಕಿಕೊಂಡು ಮತ್ತೊಮ್ಮೆ ಮಗದೊಮ್ಮೆ ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದವರು ಯಾರು ಅಂತ ನೋಡಲಿ….
ಇಂತಹವರ ಜೊತೆಗೆ ಬುಲ್ಲಿ ಬುಲ್ಲಿ ಆಡಲು ನಿಂತಿದ್ದಾರೆ ಅಂದರೆ ಏನು ಹೇಳೋದು ಪ್ರೆಂಡ್ಸ…. ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ವಜನಾಂಗದ ಶಾಂತಿಯ ತೋಟ’ದ ಮರಗಳ ಬೇರುಗಳಿಗೆ ನಿಧಾನವಿಷ ಇಕ್ಕುವ ಮೂಲಕ ರಾಜ್ಯದ ಸಾಮರಸ್ಯಕ್ಕೆ ಕೊಳ್ಳಿ ಹಚ್ಚುವುದನ್ನೇ ಹೊಸ ಶೈಲಿಯ ಪತ್ರಿಕೋದ್ಯಮ ಎಂದು ಬಿಂಬಿಸಿದವರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲಕ್ಕಿಂತ ಮುಖ್ಯ ‘ಗ್ಯಾರಂಟಿ’ಯ ಭರವಸೆಗೆ ಅವರೇ ಬೆಲೆ ಕೊಡುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಕಾರ್ಟೂನಿಸ್ಟ್ ಪಿ.ಮಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯನವರೆ ನೀವು ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋದರೆ ನೀವು ಕೂಡ ಇಸ್ಲಾಮೋಫೋಬಿಯಾ, ಜಾತಿವಾದಿ ಮತ್ತು ಸ್ತ್ರೀದ್ವೇಷದ ನಡವಳಿಕೆಯನ್ನು ಅನುಮೋದಿಸುತ್ತಿದ್ದೀರಿ ಎಂದರ್ಥ. ಹಾಗಾಗಿ ಕೂಡಲೇ ಹೋಗುವುದಿಲ್ಲ ಎಂದು ಘೋಷಿಸಿ ಎಂದು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...