Homeಮುಖಪುಟವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಲೇಖಕ ರಂಜಾನ್ ದರ್ಗಾ ಅವರು ‘ಸಿದ್ದರಾಮಯ್ಯನವರ ಗಮನಕ್ಕೆ’ ಎಂದು ಬರೆದ ಬರಹವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿದೆ. ”ನೆಹರೂ ಅವರು ಸ್ವಿಜರ್‌ಲ್ಯಾಂಡ್‌ನಿಂದ ಭಾರತಕ್ಕೆ ಬರುವಾಗ ರೊಮ್ ಏರ್‌ಪೋರ್ಟ್‌ನಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರಿ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ. ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯನವರ ಯಾರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ನಿಮ್ಮನ್ನು ಯಾರೆಷ್ಟೇ ಬೈದರೂ ನಿಮ್ಮ ಸೆಕ್ಯುಲರ್ ಕಮಿಟ್‌ಮೆಂಟ್ ಬಗ್ಗೆ ನಿಮ್ಮ ವಿರೋಧಿಗಳಿಗೂ ಒಳಗೊಳಗೇ ಮೆಚ್ಚುಗೆಯಿತ್ತು. ಇಂದು ಭಟ್ಟನ ಸೈದ್ಧಾಂತಿಕ ಮಿತ್ರರೂ ಸಿದ್ದರಾಮಯ್ಯನವರೂ ಇಷ್ಟೇನಾ ಎಂದು ಆಡಿಕೊಳ್ಳುವಂತಾಗಿದೆ ಸರ್. ನಿಮ್ಮ ಘನತೆಗಿಂತ ಕೆಳಮಟ್ಟಕ್ಕಿಳಿಯದಿರಿ ಪ್ಲೀಸ್ ಎಂದು ಲೇಖಕ ಇಸ್ಮತ್ ಪಜೀರ್ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯನವರೇ, ಗೆದ್ದ ಮೇಲೆ ಊರಾಳುಗಳ ಹಂಗ್ಯಾಕೆ ಅನ್ನುವ ಅಟಿಟ್ಯೂಡ್ ಬಿಟ್ಟುಬಿಡಿ. ಇಂಥ ಅಪವಿತ್ರ ಒಳವ್ಯವಹಾರಗಳು ನಿಮ್ಮನ್ನು ಗೆಲ್ಲಿಸಿಲ್ಲ. ತೀರಾ ತೀರಾ ನಗಣ್ಯವೆನಿಸುವ ಪುಟ್ಟ ಪುಟ್ಟ ಫೇಸ್‌ಬುಕ್‌ ಅಳಿಲುಗಳ ಪ್ರಯತ್ನಗಳು ಕೂಡಾ ನಿಮ್ಮ ಗೆಲುವಿನ ಹಿಂದಿದೆ ಅನ್ನುವುದನ್ನು ಮರೆಯಬಾರದು. ನಿಮ್ಮ ಗೆಲುವಿನ ಕನಸು ಹೊತ್ತಿದ್ದ ಇದೇ ‘ಫೇಸ್‌ಬುಕ್‌ ಜಾಣ’ರೆಲ್ಲ ಈಗ ಕಾಲದ ಕಸದಬುಟ್ಟಿಯ ನಿಷ್ಪ್ರಯೋಜಕ ಸೊತ್ತುಗಳನ್ನಿಸಿಕೊಳ್ಳುವುದು ನಿಮಗೆ ಮುಂದೆ ದುಬಾರಿಯಾದೀತು. ನಿಮ್ಮ ಸುತ್ತಮುತ್ತಲಿನ ಕೊಂಬು ಕೋಡುಗಳ ಬುದ್ಧಿವಂತರ, ಬು.ಜೀ.ವೇಷದ ಪುಢಾರಿಗಳ ನೆತ್ತಿಗಣ್ಣುಗಳು ನಿಮ್ಮ ಪಾದದಡಿಯ ಹಸುರು ಹೂವುಗಳನ್ನು ಗಮನಿಸದಂತೆ ದಾರಿತಪ್ಪಿಸುತ್ತವೆ. ನಮಗೆ ನಿಮ್ಮ ಸರಕಾರದ ಯಾವ ಪ್ರಯೋಜನಗಳೂ ಬೇಡ. ವಿಚಾರಬದ್ಧತೆಯ ಸಾತ್ವಿಕ ಸಿಟ್ಟಿನ ಜೆಂಟಲ್ ಮ್ಯಾನ್ ನಡಿಗೆ ಬೇಕಷ್ಟೆ. ಅಷ್ಟೇ ಅಷ್ಟೇ! ಎಂದು ಕಾರ್ಟೂನಿಷ್ಟ್ ದಿನೇಶ್ ಕುಕ್ಕಜಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಯರ್ ಸಿದ್ದು…
ನೀವು ಬಿಡುಗಡೆ ಮಾಡುತ್ತಿರುವುದು ಇಂತಹ
ವರ್ಣಶ್ರೇಷ್ಠತೆಯ ವ್ಯಸನಿ..ಜನಾಂಗೀಯವಾದಿ ಬರೆದಿರುವ ಪುಸ್ತಕಗಳನ್ನ…
ಒಮ್ಮೆ ಯೋಚಿಸಿ..ನಮ್ಮನ್ನ ಅವಮಾನಿಸಬೇಡಿ ಎಂದು ತೇಜ ಯಾಲಕ್ಕಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸಿದ್ದರಾಮಯ್ಯನವರು ತಮ್ಮ ಸಿದ್ದಾಂತ ನಂಬಿಕೆಗಳನ್ನು ಬದಲಾಯಿಸಿಕೊಂಡುಬಿಡಬಹುದು ಎಂಬ ಹೆದರಿಕೆ ಯಾರಿಗೂ ಇಲ್ಲ. ವಿಷಜಂತುಗಳಿಗೆ ಮಾನ್ಯತೆ ದೊರೆತು ಮತ್ತಷ್ಟು ವಿಷ ಹಂಚುತ್ತವೆ ಸಮಾಜದಲ್ಲಿ ಎಂಬ ಕಾಳಜಿ. ಸಿದ್ದರಾಮಯ್ಯನವರನ್ನು ಯಾರೂ ವಿರೋಧಿಸುತ್ತಿಲ್ಲ. ಸಿದ್ದರಾಮಯ್ಯನವರಿಗೆ ಬುದ್ದಿ ಹೇಳೋದು ಅನ್ನೋಕಿಂತ, ಸಿದ್ದರಾಮಯ್ಯನವರು ಮತ್ತು ಆ ವ್ಯಕ್ತಿಯ ಒಡನಾಟ ಎಲ್ಲರಿಗೂ ತಿಳಿದಿರುವುದರಿಂದ ಈಗ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹೋಗಬಾರದು ಎಂಬ ಕಾಳಜಿ” ಎಂದು ಪರಮೇಶ್ವರ ಗುರುಸ್ವಾಮಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಮರಸೇನಾನಿ, ಸಮಾಜವಾದಿ ಸಿದ್ದರಾಮಯ್ಯನವರು ತಮ್ಮ ಕನ್ನಡಕ ಹಾಕಿಕೊಂಡು ಮತ್ತೊಮ್ಮೆ ಮಗದೊಮ್ಮೆ ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದವರು ಯಾರು ಅಂತ ನೋಡಲಿ….
ಇಂತಹವರ ಜೊತೆಗೆ ಬುಲ್ಲಿ ಬುಲ್ಲಿ ಆಡಲು ನಿಂತಿದ್ದಾರೆ ಅಂದರೆ ಏನು ಹೇಳೋದು ಪ್ರೆಂಡ್ಸ…. ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ವಜನಾಂಗದ ಶಾಂತಿಯ ತೋಟ’ದ ಮರಗಳ ಬೇರುಗಳಿಗೆ ನಿಧಾನವಿಷ ಇಕ್ಕುವ ಮೂಲಕ ರಾಜ್ಯದ ಸಾಮರಸ್ಯಕ್ಕೆ ಕೊಳ್ಳಿ ಹಚ್ಚುವುದನ್ನೇ ಹೊಸ ಶೈಲಿಯ ಪತ್ರಿಕೋದ್ಯಮ ಎಂದು ಬಿಂಬಿಸಿದವರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲಕ್ಕಿಂತ ಮುಖ್ಯ ‘ಗ್ಯಾರಂಟಿ’ಯ ಭರವಸೆಗೆ ಅವರೇ ಬೆಲೆ ಕೊಡುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಕಾರ್ಟೂನಿಸ್ಟ್ ಪಿ.ಮಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯನವರೆ ನೀವು ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋದರೆ ನೀವು ಕೂಡ ಇಸ್ಲಾಮೋಫೋಬಿಯಾ, ಜಾತಿವಾದಿ ಮತ್ತು ಸ್ತ್ರೀದ್ವೇಷದ ನಡವಳಿಕೆಯನ್ನು ಅನುಮೋದಿಸುತ್ತಿದ್ದೀರಿ ಎಂದರ್ಥ. ಹಾಗಾಗಿ ಕೂಡಲೇ ಹೋಗುವುದಿಲ್ಲ ಎಂದು ಘೋಷಿಸಿ ಎಂದು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...