Homeಮುಖಪುಟಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಿ ಹೋರಾಡುವುದಕ್ಕಾಗಿ ತಮ್ಮ ಪ್ರಯತ್ನವನ್ನು ಮುಂದುವರಿಸಿರುವ ಪ್ರತಿಪಕ್ಷ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಲಿದ್ದಾರೆ.

ಮೂರು ವಾರಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ವಿಪಕ್ಷ ನಾಯಕರು ಈ ಸಮಾವೇಶವನ್ನು ನಡೆಸುತ್ತಿದ್ದಾರೆ. ಸೋಮವಾರದ ಪ್ರತಿಪಕ್ಷ ನಾಯಕರ ಸಮಾವೇಶದಲ್ಲಿ ಕನಿಷ್ಠ 26 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಬೆಂಗಳೂರಿನ ಪ್ರತಿಪಕ್ಷಗಳ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ನಡುವೆ ಸಹಮತ ಮೂಡಿಸುವುದಕ್ಕೆ ನೆರವಾಗಲಿದೆ ಎಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಈ ಮಧ್ಯೆ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ (AAP) ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.

ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.

ಸಮಾವೇಶವು ಮೊದಲಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುವುದೆಂದು ನಿಗದಿಯಾಗಿತ್ತಾದರೂ ಅಲ್ಲಿನ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅದನ್ನು ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ತನ್ನ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್ ಎನ್‌ ಡಿಎ ಸರಕಾರದ ಜೊತೆ ಕೈಜೋಡಿಸಿರುವುದರಿದ ಎನ್‌ಸಿಪಿಯಲ್ಲಿ ವಿಭಜನೆಯುಂಟಾಗಿರುವ ಸಂದರ್ಭದಲ್ಲೇ ಪ್ರತಿಪಕ್ಷ ನಾಯಕರ ಸಮಾವೇಶ ನಡೆಯುತ್ತಿರುವುದು ಹೆಚ್ಚಿನ ಮಹತ್ವ ಪಡೆದಿದೆ.

ಪ್ರತಿಪಕ್ಷಗಳ ಏಕತೆಗೆ ಸಂಬಂಧಿಸಿದಂತೆ ಪಾಟ್ನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನು ಷ್ಠಾನವನ್ನು ಚುರುಕುಗೊಳಿಸುವುದು ಹಾಗೂ ಮಾತುಕತೆಗಳನ್ನು ಮುಂದುವರಿಸುವುದು ಮುಖ್ಯವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕರನ್ನು ಸಮಾವೇಶಕ್ಕೆ ಆಮಂತ್ರಿಸಿ ಬರೆದ ಪತ್ರದಲ್ಲಿ ತಿಳಿಸಿದ್ದರು.

”ನಮ್ಮ ದೇಶವು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ” ಎಂದು ಅವರು ಪತ್ರದಲ್ಲಿ ಹೇಳಿದ್ದರು.

ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಎಡರಂಗದ ನಾಯಕರ ಜೊತೆ ವಾಕ್ಸಮರ ನಡೆಸಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡಾ ಬೆಂಗಳೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಇತ್ತೀಚೆಗೆ ಅವರ ಎಡಮಂಡಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಜಾಗರೂಕತೆಯಿಂದ ನಡೆದಾಡುವಂತೆ ವೈದ್ಯರು ಸಲಹೆ ನೀಡಿರುವುದರಿಂದ ಅವರು ಭೋಜನಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿದುಬಂದಿದೆ.

ಮುಂದಿನ ತಿಂಗಳು ಮೋದಿ ಸರಕಾರದ ವಿರುದ್ಧ ಜಂಟಿ ರಾಲಿಯೊಂದನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆಯೂ ವಿಪಕ್ಷ ನಾಯಕರು ಚರ್ಚಿಸುವ ಸಾಧ್ಯತೆಯಿದೆ.

ಬೆಂಗಳೂರು ಸಮಾವೇಶದಲ್ಲಿ ಕೃಷ್ಣ ಪಟೇಲ್ ನೇತೃತ್ವದ ಅಪ್ಪಾ ದಳ (ಕೆ) ಹಾಗೂ ತಮಿಳುನಾಡಿನ ಮನಿದನೇಯ ಮಕ್ಕಳ ಕಚ್ಚಿ (ಎಂಎಂಕೆ) ಪಕ್ಷಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರೊಂದಿಗೆ ವಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಳ್ಳುವ ಪಕ್ಷಗಳ ಸಂಖ್ಯೆ 26ಕೇರಿದೆ.

ಪಾಟ್ನಾ ಸಮಾವೇಶದಲ್ಲಿ ಮುಸ್ಲಿಮ್‌ಗ್, ಕೇರಳ ಕಾಂಗ್ರೆಸ್‌ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಎಂಡಿಎಂಕೆ, ಕೆಡಿಎಂಕೆ,ಎಸಿಕೆ, ಫಾರ್ವಡ್್ರ ಬ್ಲಾಕ್ ಹಾಗೂ ಆರ್‌ ಎಸ್‌ಪಿ ಪಕ್ಷಗಳು ಕೂಡಾ ಸಮಾವೇಶದಲ್ಲಿ ಭಾಗವಹಿಸಲಿವೆ. ಜೆಡಿಯು ಆಯೋಜಿಸಿದ ಪಾಟ್ನಾ ಸಮಾವೇಶದಲ್ಲಿ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಆರ್‌ಎಲ್‌ಡಿ, ಆರ್‌ಜೆಡಿ, ಎನ್‌ ಸಿಪಿ, ಆಪ್, ಸಿಪಿಎಂ, ಸಿಪಿಐ, ಸಿಪಿಎಂಎಲ್(ಎಲ್), ಸಮಾಜವಾದಿ ಪಕ್ಷ, ನ್ಯಾಶನಲ್ ಕಾನರೆನ್ಸ್, ಪಿಡಿಪಿ, ಶಿವಸೇನಾ, (ಯುಬಿಟಿ) ಹಾಗೂ ಜೆಎಂಎಂ ಪಕ್ಷಗಳು ಭಾಗವಹಿಸಿದ್ದವು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...