Homeಮುಖಪುಟಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಿ ಹೋರಾಡುವುದಕ್ಕಾಗಿ ತಮ್ಮ ಪ್ರಯತ್ನವನ್ನು ಮುಂದುವರಿಸಿರುವ ಪ್ರತಿಪಕ್ಷ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಲಿದ್ದಾರೆ.

ಮೂರು ವಾರಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ವಿಪಕ್ಷ ನಾಯಕರು ಈ ಸಮಾವೇಶವನ್ನು ನಡೆಸುತ್ತಿದ್ದಾರೆ. ಸೋಮವಾರದ ಪ್ರತಿಪಕ್ಷ ನಾಯಕರ ಸಮಾವೇಶದಲ್ಲಿ ಕನಿಷ್ಠ 26 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಬೆಂಗಳೂರಿನ ಪ್ರತಿಪಕ್ಷಗಳ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ನಡುವೆ ಸಹಮತ ಮೂಡಿಸುವುದಕ್ಕೆ ನೆರವಾಗಲಿದೆ ಎಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಈ ಮಧ್ಯೆ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ (AAP) ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.

ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.

ಸಮಾವೇಶವು ಮೊದಲಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುವುದೆಂದು ನಿಗದಿಯಾಗಿತ್ತಾದರೂ ಅಲ್ಲಿನ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅದನ್ನು ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ತನ್ನ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್ ಎನ್‌ ಡಿಎ ಸರಕಾರದ ಜೊತೆ ಕೈಜೋಡಿಸಿರುವುದರಿದ ಎನ್‌ಸಿಪಿಯಲ್ಲಿ ವಿಭಜನೆಯುಂಟಾಗಿರುವ ಸಂದರ್ಭದಲ್ಲೇ ಪ್ರತಿಪಕ್ಷ ನಾಯಕರ ಸಮಾವೇಶ ನಡೆಯುತ್ತಿರುವುದು ಹೆಚ್ಚಿನ ಮಹತ್ವ ಪಡೆದಿದೆ.

ಪ್ರತಿಪಕ್ಷಗಳ ಏಕತೆಗೆ ಸಂಬಂಧಿಸಿದಂತೆ ಪಾಟ್ನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನು ಷ್ಠಾನವನ್ನು ಚುರುಕುಗೊಳಿಸುವುದು ಹಾಗೂ ಮಾತುಕತೆಗಳನ್ನು ಮುಂದುವರಿಸುವುದು ಮುಖ್ಯವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕರನ್ನು ಸಮಾವೇಶಕ್ಕೆ ಆಮಂತ್ರಿಸಿ ಬರೆದ ಪತ್ರದಲ್ಲಿ ತಿಳಿಸಿದ್ದರು.

”ನಮ್ಮ ದೇಶವು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ” ಎಂದು ಅವರು ಪತ್ರದಲ್ಲಿ ಹೇಳಿದ್ದರು.

ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಎಡರಂಗದ ನಾಯಕರ ಜೊತೆ ವಾಕ್ಸಮರ ನಡೆಸಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡಾ ಬೆಂಗಳೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಇತ್ತೀಚೆಗೆ ಅವರ ಎಡಮಂಡಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಜಾಗರೂಕತೆಯಿಂದ ನಡೆದಾಡುವಂತೆ ವೈದ್ಯರು ಸಲಹೆ ನೀಡಿರುವುದರಿಂದ ಅವರು ಭೋಜನಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿದುಬಂದಿದೆ.

ಮುಂದಿನ ತಿಂಗಳು ಮೋದಿ ಸರಕಾರದ ವಿರುದ್ಧ ಜಂಟಿ ರಾಲಿಯೊಂದನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆಯೂ ವಿಪಕ್ಷ ನಾಯಕರು ಚರ್ಚಿಸುವ ಸಾಧ್ಯತೆಯಿದೆ.

ಬೆಂಗಳೂರು ಸಮಾವೇಶದಲ್ಲಿ ಕೃಷ್ಣ ಪಟೇಲ್ ನೇತೃತ್ವದ ಅಪ್ಪಾ ದಳ (ಕೆ) ಹಾಗೂ ತಮಿಳುನಾಡಿನ ಮನಿದನೇಯ ಮಕ್ಕಳ ಕಚ್ಚಿ (ಎಂಎಂಕೆ) ಪಕ್ಷಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರೊಂದಿಗೆ ವಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಳ್ಳುವ ಪಕ್ಷಗಳ ಸಂಖ್ಯೆ 26ಕೇರಿದೆ.

ಪಾಟ್ನಾ ಸಮಾವೇಶದಲ್ಲಿ ಮುಸ್ಲಿಮ್‌ಗ್, ಕೇರಳ ಕಾಂಗ್ರೆಸ್‌ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಎಂಡಿಎಂಕೆ, ಕೆಡಿಎಂಕೆ,ಎಸಿಕೆ, ಫಾರ್ವಡ್್ರ ಬ್ಲಾಕ್ ಹಾಗೂ ಆರ್‌ ಎಸ್‌ಪಿ ಪಕ್ಷಗಳು ಕೂಡಾ ಸಮಾವೇಶದಲ್ಲಿ ಭಾಗವಹಿಸಲಿವೆ. ಜೆಡಿಯು ಆಯೋಜಿಸಿದ ಪಾಟ್ನಾ ಸಮಾವೇಶದಲ್ಲಿ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಆರ್‌ಎಲ್‌ಡಿ, ಆರ್‌ಜೆಡಿ, ಎನ್‌ ಸಿಪಿ, ಆಪ್, ಸಿಪಿಎಂ, ಸಿಪಿಐ, ಸಿಪಿಎಂಎಲ್(ಎಲ್), ಸಮಾಜವಾದಿ ಪಕ್ಷ, ನ್ಯಾಶನಲ್ ಕಾನರೆನ್ಸ್, ಪಿಡಿಪಿ, ಶಿವಸೇನಾ, (ಯುಬಿಟಿ) ಹಾಗೂ ಜೆಎಂಎಂ ಪಕ್ಷಗಳು ಭಾಗವಹಿಸಿದ್ದವು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...