Homeಮುಖಪುಟವಿಪಕ್ಷಗಳ ಒಗ್ಗಟ್ಟಿಗೆ ಬೆದರಿದ ಮೋದಿ ಎನ್‌ಡಿಎ ಸಭೆ ಕರೆದಿದ್ದಾರೆ: ಜೈರಾಂ ರಮೇಶ್

ವಿಪಕ್ಷಗಳ ಒಗ್ಗಟ್ಟಿಗೆ ಬೆದರಿದ ಮೋದಿ ಎನ್‌ಡಿಎ ಸಭೆ ಕರೆದಿದ್ದಾರೆ: ಜೈರಾಂ ರಮೇಶ್

- Advertisement -
- Advertisement -

26 ಪ್ರತಿಪಕ್ಷಗಳು ಒಗ್ಗಟ್ಟಾಗಿರುವುದಕ್ಕೆ ಬೆದರಿರುವ ಪ್ರಧಾನಿ ಮೋದಿ ಕೂಡಲೇ ಎನ್‌ಡಿಎ ಬಗ್ಗೆ ಚಿಂತಿತರಾಗಿ ಸಭೆ ಕರೆದಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಹೊತ್ತಿರುವ ಜೈರಾಂ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

ಇಂದಿನಿಂದ ಬೆಂಗಳೂರಿನಲ್ಲಿ ಆರಂಭವಾಗುತ್ತಿರುವ ವಿಪಕ್ಷಗಳ 2ನೇ ಸಭೆ ಕುರಿತು ಮಾತನಾಡಿರುವ ಅವರು, “ಪಾಟ್ನಾದಲ್ಲಿ 24 ಪಕ್ಷಗಳು ಸೇರಿ ಫಲಪ್ರದವಾದ ಸಭೆ ನಡೆಸಿದೆವು. ಈಗ ಬೆಂಗಳೂರಿನಲ್ಲಿ 26 ಪಕ್ಷಗಳು ಸೇರುತ್ತಿದ್ದೇವೆ. ಇದು ಮೋದಿಗೆ ನಡುಕ ಹುಟ್ಟಿಸಿದೆ” ಎಂದಿದ್ದಾರೆ.

ಇಷ್ಟು ದಿನ ಸುಮ್ಮನಿದ್ದ ಮೋದಿ ಪ್ರತಿಪಕ್ಷಗಳ ಒಗ್ಗಟ್ಟಿಗೆ ಬೆಚ್ಚಿ ಎನ್‌ಡಿಎ ಕುರಿತು ಚಿಂತಾಕ್ರಾಂತರಾಗಿದ್ದಾರೆ. ಹಾಗಾಗಿ ಜುಲೈ 18ರಂದೇ ಅದರ ಸಭೆ ಕರೆದಿದ್ದಾರೆ, ಇದು ನಮ್ಮ ವಿಪಕ್ಷಗಳ ಒಗ್ಗಟ್ಟಿನ ಫಲಿತಾಂಶ ಎಂದು ಜೈರಾಂ ರಮೇಶ್ ಹೇಳಿದ್ದಾರೆ.

ಶರದ್ ಪವಾರ್ ಸಭೆಗೆ ಗೈರು ಹಾಜರಾಗುತ್ತಿರುವುದರ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೆಲ ಮುಖಂಡರು ಕೆಲಸದ ನಿಮಿತ್ತ ಇಂದಿನ ಸಭೆಗೆ ಹಾಜರಾಗುತ್ತಿಲ್ಲ. ಆದರೆ ಅವರೆಲ್ಲ ನಾಳಿನ ಸಭೆಗೆ ಖಂಡಿತ ಹಾಜರಾಗುತ್ತಾರೆ ಎಂದು ತಿಳಿಸಿದ್ದಾರೆ.

ವಿಪಕ್ಷಗಳ ಸಭೆ ಗೇಮ್ ಚೇಂಜರ್ ಆಗಲಿದೆ – ಕೆ.ಸಿ ವೇಣುಗೋಪಾಲ್

ವಿಪಕ್ಷಗಳ ಮಹಾ ಒಗ್ಗಟ್ಟಿನ ಈ ಸಭೆಯು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದೆ ಎಂದು ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಬಿಜೆಪಿ ಬಯಸುತ್ತಿದ್ದು, ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಇಡಿ, ಸಿಬಿಐನಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದು ಅದಕ್ಕೆ ದೊಡ್ಡ ಉದಾಹರಣೆಯಾಗಿದೆ. ಅದಕ್ಕೆ ಪ್ರತಿಯಾಗಿ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸಹ ಮೋದಿ ಜನರ ನೋವು ಕೇಳಲಿಲ್ಲ. ದೇಶದಾದ್ಯಂತ ಬೆಲೆ ಏರಿಕೆ ಆಗುತ್ತಿದೆ. ನಿರುದ್ಯೋಗ ಕಾಡುತ್ತಿದೆ. ಆದರೂ ಆಳುವವರಿಗೆ ಅವು ತಟ್ಟುತ್ತಿಲ್ಲ ಎಂದು ಅವರು ಕಿಡಿಕಾರಿದರು.

ನಮ್ಮ ಸಭೆಯಲ್ಲಿ ದೇಶಾದಾದ್ಯಂತ ಸುಮಾರು 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕಿ ಬಿಜೆಪಿ ಸೋಲಿಸುವ ಗುರಿ ಹೊಂದಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...