Homeಕರ್ನಾಟಕಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಗೆ ಎನ್‌ಡಿಎ ಒಕ್ಕೂಟವನ್ನು ಸೇರಲು ರಾಜ್ಯದ ಪ್ರದೇಶಿಕ ಪಕ್ಷ ಜೆಡಿಎಸ್ ಸಿದ್ದತೆ ನಡೆಸಿದೆ ಎನ್ನುವ ಚರ್ಚೆಗೆ ಮುನ್ನಲೆಗೆ ಬಂದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯುತ್ತಿರುವ ವಿರೋಧ ಪಕ್ಷಗಳ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು, ”ವಿರೋಧ ಪಕ್ಷಗಳು ಜೆಡಿಎಸ್ ಅನ್ನು ಅವರ ಭಾಗವೆಂದು ಪರಿಗಣಿಸಿಯೇ ಇಲ್ಲ. ಹಾಗಾಗಿ, ಜೆಡಿಎಸ್ ಯಾವುದೇ ಮಹಾಘಟಬಂಧನದ ಭಾಗವಾಗುವ ಪ್ರಶ್ನೆಯೇ ಇಲ್ಲ” ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದರು.

ಕುಮಾರಸ್ವಾಮಿ ಅವರ ಈ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ”ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದ್ದರೆ ಆ ಕುರಿತಂತೆ ಅಜೆಂಡಾದಲ್ಲಿ ಚರ್ಚೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

”ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ” ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್‌ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

”ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ಎನ್‌ಡಿಎ ಮೈತ್ರಿ ಕುರಿತು ಹೆಚ್‌ಡಿಕೆ ಹೇಳಿದ್ದೇನೆ?

”ರಾಷ್ಟ್ರ ರಾಜಕಾರಣದ ಕುರಿತು ನನಗೆ ಯಾವುದೇ ಒಲವಿಲ್ಲ. ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ವಿಚಾರ ಮತ್ತು ಕೇಂದ್ರದಲ್ಲಿ ನನ್ನನ್ನು ಸಚಿವನನ್ನಾಗಿ ಮಾಡು ವಿಚಾರವೂ ಗೊತ್ತಿಲ್ಲ. ವಿರೋಧ ಪಕ್ಷದ ಸ್ಥಾನವೂ ನನಗೆ ಬೇಕಿಲ್ಲ” ಎಂದು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನೊಬ್ಬ ಸಾಮಾನ್ಯ ವಿಧಾನಸಭಾ ಸದಸ್ಯನಾಗಿ ರಾಜ್ಯದ ಜನರ ಪರ ಕೆಲಸ ಮಾಡುತ್ತೇನೆ” ಎಂದರು.

”ಕೆಲವು ಮಾಧ್ಯಮಗಳು ಈ ಬಗ್ಗೆ ಚರ್ಚೆ ನಡೆಸುತ್ತಿರುವುದನ್ನು ನಾನು ಗಮನಿಸಿದ್ದೇನೆ. ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂಬ ಸುದ್ದಿ ಯಾಕೆ ಚರ್ಚೆಯಾಗುತ್ತಿದೆ ಎಂಬುದು ಗೊತ್ತಿಲ್ಲ. ನನಗೆ ಮಹಾಘಟಬಂಧನ ಮತ್ತು ಎನ್‌ಡಿಎ ಎರಡರಿಂದಲೂ ಆಹ್ವಾನವಿಲ್ಲ. ಆಹ್ವಾನ ಬಂದಾಗ ಏನು ಮಾಡಬೇಕು ಎಂಬುದನ್ನು ಪಕ್ಷದ ಇತರ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ಹೇಳುವ ಮೂಲಕ ತಾವು ಎನ್‌ಡಿಎ ಸೇರುವ ಹಾಗೂ ಮಹಾಘಟಬಂಧನದ ಭಾಗವಾಗುವ ಬಗ್ಗೆ ಗೊಂದಲದ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನನ್ನು ಬೇಗ ನೇಮಕ ಮಾಡಿ: ಬಿಜೆಪಿ ಹೆಚ್‌ಡಿಕೆ ಮನವಿ

ಈ ವೇಳೆ ವಿರೋಧ ಪಕ್ಷದ ನಾಯಕನ ಸ್ಥಾನಮಾನ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ”ನಾಡಿನ ಜನತೆ ನನ್ನನ್ನು ಸ್ಥಾನಮಾನದಿಂದ ಗುರುತಿಸಿಲ್ಲ. ಎಲ್ಲೇ ಹೋದರೂ ನನ್ನ ವೈಯಕ್ತಿಕ ವರ್ಚಸ್ಸಿನಿಂದ ಗುರುತಿಸುತ್ತಾರೆ. ಸ್ಥಾನಮಾನಗಳಿಂದ ವರ್ಚಸ್ಸು ಗಳಿಸಬೇಕಿಲ್ಲ. ನಾನೂ ಈಗಲೂ ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. 65 ಸ್ಥಾನ ಗೆದ್ದಿರುವ ಆ ಪಕ್ಷದಲ್ಲಿ ಹಲವು ಹಿರಿಯ ನಾಯಕರಿದ್ದಾರೆ. ಒಬ್ಬ ಸಮರ್ಥ ನಾಯಕನನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿ. ಈ ವಿಚಾರದಲ್ಲಿ ಕಾಲಹರಣ ಮಾಡಬೇಡಿ ಎಂದು ಆ ಪಕ್ಷದ ದೆಹಲಿ ನಾಯಕರಿಗೂ ಮನವಿ ಮಾಡುತ್ತೇನೆ” ಎಂದರು.

”ಮೈತ್ರಿ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಸೇರಿದಂತೆ, ನಮ್ಮ ಪಕ್ಷದಿಂದ ಯಾವುದೇ ಬೇಡಿಕೆ ಇಲ್ಲ. ಆ ಕುರಿತು ಮಾತುಕತೆಯೂ ಆಗಿಲ್ಲ. ನಾವು 19 ಸ್ಥಾನ ಗೆದ್ದಿದ್ದೇವೆ, ಬಿಜೆಪಿ 65 ಸ್ಥಾನ ಗೆದ್ದಿದೆ. ಅಲ್ಲಿಯೂ ಮಾಜಿ ಮುಖ್ಯಮಂತ್ರಿ ಸೇರಿ ಅನೇಕ ಮಾಜಿ ಸಚಿವರಿದ್ದಾರೆ. ಹಾಗಾಗಿ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...