Homeಮುಖಪುಟಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

ಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

- Advertisement -
- Advertisement -

ಮುಸ್ಲಿಂ ವ್ಯಕ್ತಿಯೆಂದು ತಪ್ಪಾಗಿ ಗ್ರಹಿಸಿದ ಹರಿದ್ವಾರ ಕನ್ವರಿಯಾಗಳ ಗುಂಪೊಂದು ಆರೆಸ್ಸೆಸ್- ಬಿಜೆಪಿ ಸದಸ್ಯನನ್ನು ಕಾರಿನಿಂದ ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ಹರಿದ್ವಾರ ಜಿಲ್ಲೆಯ ಮಂಗ‌ ನಗರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿ ಪ್ರತಾಪ್ ಸಿಂಗ್ (63), ತಾನು ಆರೆಸ್ಸೆಸ್-ಬಿಜೆಪಿ ಸದಸ್ಯ ಎಂದು ಅವರು ಹೇಳಿಕೊಂಡಿದ್ದಾರೆ.

ಪ್ರತಾಪ್ ಸಿಂಗ್ ಅವರ ಕಾರು ವಾಹನವು ಆಕಸ್ಮಿಕವಾಗಿ ಯಾತ್ರಿಗಳು ಪವಿತ್ರ ನೀರನ್ನು ಸಾಗಿಸುವ ಕನ್ವರ್‌ಗೆ ಡಿಕ್ಕಿ ಹೊಡೆದದ್ದೇ ಹಲ್ಲೆಗೆ ಕಾರಣವಾಗಿತ್ತು. ಗಡ್ಡವನ್ನು ಹೊಂದಿದ್ದ ಸಿಂಗ್ ಕಪ್ಪು ಟೋಪಿಯನ್ನು ಧರಿಸಿದ್ದರಿಂದ ಮತ್ತು ಅವರ ಜೊತೆಗೆ ಬುರ್ಕಾ ಧರಿಸಿದ್ದ ಮಹಿಳೆ ಇದ್ದಿದ್ದರಿಂದ ಅವರು ಮುಸ್ಲಿಮ್ ವ್ಯಕ್ತಿಯೆಂದು ಕನ್ವರಿಯಾಗಳು ಭಾವಿಸಿದ್ದರು ಎಂದು ವರದಿಯಾಗಿದೆ.

ಈ ಘಟನೆ ಜು.10ರಂದು ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಕನ್ವರಿಯಾಗಳು, ಕಾರಿನಲ್ಲಿದ್ದ ಪ್ರತಾಪ್ ಸಿಂಗ್‌ನನ್ನು ಹೊರಗೆಳೆದಿದ್ದಾರೆ, ನಂತರ ಕಾರನ್ನು ಉರುಳಿಸಿ ದೊಣ್ಣೆಗಳಿಂದ ಅದರ ಮೇಲೆ ದಾಳಿ ನಡೆಸುತ್ತಿರುವುದನ್ನೂ ತೋರಿಸಿದೆ.

ಈ ಬಗ್ಗೆ ಮಾತನಾಡಿರುವ ಪ್ರತಾಪ್ ಸಿಂಗ್, ”ನನ್ನೊಂದಿಗಿದ್ದ ಮಹಿಳೆ ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮಹಿಳೆಯಾಗಿದ್ದು ಆಕೆ ತನ್ನ ಮಗನನ್ನು ಮದರಸಕ್ಕೆ ಬಿಡಲು ನಾನು ಅವರೊಂದಿಗೆ ಹೋಗಿದ್ದೆ. ಮರಳಿ ಬರುವಾಗ ಊಟಕ್ಕೆಂದು ರಸ್ತೆಯ ಬದಿಯಲ್ಲಿ ಕಾರು ನಿಲ್ಲಿಸುವಾಗ ಅಲ್ಲಿ ಏನೂ ಇರಲಿಲ್ಲ ಆದರೆ ನಾನು ಮರಳಿ ಬಂದಾಗ ಕಾರಿನ ಎದುರು ಯಾರೋ ಕಾವಡಿಯನ್ನು ಇರಿಸಿದ್ದರು. ನಾನು ಕಾರನ್ನು ಚಲಾಯಿಸಿದಾಗ ಅದು ಆಕಸ್ಮಿಕಗಾಗಿ ಕಾವಡಿಗೆ ತಾಗಿತ್ತು ನಾನು ಮುಸ್ಲಿಮ್ ಎಂದು ಜರಿದ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದರು. ನಾನು ಹಿಂದು ಮತ್ತು ಆರೆಸ್ಸೆಸ್ ಬಿಜೆಪಿ ಸದಸ್ಯ ಎಂದು ಹೇಳಿಕೊಂಡರೂ ಬಿಡಲಿಲ್ಲ. ಪುಣ್ಯಕ್ಕೆ ಮಹಿಳೆಗೆ ಏನೂ ಮಾಡದೆ ಅಲ್ಲಿಂದ ಕಳುಹಿಸಿದ್ದರು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ರಾಜ್ಯ ಮಾಧ್ಯಮ ಉಸ್ತುವಾರಿ ಮನ್ವೀರ್ ಚೌಹಾಣ್ ಮತ್ತು ಪಕ್ಷದ ಹರಿದ್ವಾರ ಜಿಲ್ಲಾಧ್ಯಕ್ಷ ಸಂದೀಪ್ ಗೋಯಲ್ ಅವರು, ”ಕನ್ವರಿಯಾಗಳು ಮತ್ತು ಬಿಜೆಪಿಯ ಯಾವುದೇ ಸದಸ್ಯರ ನಡುವೆ ವಾಗ್ವಾದ ನಡೆದ ಯಾವುದೇ ಘಟನೆಯ ಬಗ್ಗೆ ನಮಗೆ ತಿಳಿದಿಲ್ಲ” ಎಂದು ಹೇಳಿದರು.

ಕೆಲವು ಸುದ್ದಿವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಕನ್ವಾರಿಯಾಗಳು, ”ಮುಸ್ಲಿಂ ದಂಪತಿ” ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡ ನಂತರ, ಹರಿದ್ವಾರ ಪೊಲೀಸರು ಘಟನೆಯಲ್ಲಿ ಯಾವುದೇ ಕೋಮು ದೃಷ್ಟಿಕೋನವಿಲ್ಲ ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಿಂಗ್ ಅವರು ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 147 (ಗಲಭೆ), 148 (ಗಲಭೆ, ಮಾರಕ ಆಯುಧದಿಂದ ಶಸ್ತ್ರಸಜ್ಜಿತ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), ಮತ್ತು 427 (ಹಾನಿ ಉಂಟುಮಾಡುವ ಕಿಡಿಗೇಡಿತನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮತ್ತೊಂದು ಎಫ್‌ಐಆರ್‌ಅನ್ನು ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ನಕಲಿ ಮಾಹಿತಿಯನ್ನು ಹರಡಲು ಪ್ರಯತ್ನಿಸುತ್ತಿರುವವರ ವಿರುದ್ಧ ದಾಖಲಿಸಲಾಗಿದೆ.

ಘಟನೆಯಲ್ಲಿ ಅವರು ಕಾರಿನಲ್ಲಿದ್ದ ತಮ್ಮ ಫೋನ್ ಕಳೆದುಕೊಂಡಿದ್ದಾರೆ. ತಾನು ಆರೆಸ್ಸೆಸ್ ಮತ್ತು ಬಿಜೆಪಿ ಸದಸ್ಯನಾಗಿದ್ದೇನೆ, ಆದರೆ ಘಟನೆಯ ಕುರಿತು ವಿಚಾರಿಸಲು ಆರ್‌ಸ್‌ಎಸ್ ಅಥವಾ ಬಿಜೆಪಿಯ ಯಾರೂ ತನ್ನನ್ನು ಸಂಪರ್ಕಿಸಲಿಲ್ಲ ಎಂದು ಸಿಂಗ್ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ದಲಿತ ಅಪ್ರಾಪ್ತ ಬಾಲಕಿ ಮೇಲೆ ಸವರ್ಣಿಯ ಯುವಕರಿಂದ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...