Homeಮುಖಪುಟಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯ ಪ್ರಾಣ ತ್ಯಾಗ: ಬಸ್‌ನ ಮುಂದೆ ಹಾರಿ ಆತ್ಮಹತ್ಯೆ!

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯ ಪ್ರಾಣ ತ್ಯಾಗ: ಬಸ್‌ನ ಮುಂದೆ ಹಾರಿ ಆತ್ಮಹತ್ಯೆ!

- Advertisement -
- Advertisement -

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ‘ಸಫಾಯಿ ಕರ್ಮಚಾರಿ’ (ಸ್ವಚ್ಛತಾ ಸಿಬ್ಬಂದಿ) ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ‘ಸಫಾಯಿ ಕರ್ಮಚಾರಿ’ (ಸ್ವಚ್ಛತಾ ಸಿಬ್ಬಂದಿ) ಆಗಿ ಕೆಲಸ ಮಾಡುವ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್‌ನ ಮುಂದೆ ಜಿಗಿದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಘಟನೆಯ ಹಿಂದೆ ಒಂದು ಕಥೆ ಇದೆ. ಅಪಘಾತದಲ್ಲಿ ಮೃತಪಟ್ಟರೆ ಕುಟುಂಬಕ್ಕೆ ಸರ್ಕಾರ 45,000 ರೂ.ಗಳನ್ನು ನೀಡುತ್ತದೆ ಆ ಮಹಿಳೆಗೆ ಯಾರೋ ಒಬ್ಬರು ಎಂದು ದಾರಿ ತಪ್ಪಿಸಿದ್ದಾರೆ. ಅದನ್ನೇ ನಂಬಿದ ಆ ಮುಗ್ಧ ಮಹಿಳೆ, ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದೆ ಎಂದು ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದೀಗ ಈ ಹೃದಯ ವಿದ್ರಾವಕ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಅಗಿದೆ. ಈ ವೀಡಿಯೊವನ್ನು ಟ್ವೀಟ್ ಮಾಡಿದ ಜನರು ಮತ್ತು ಟ್ವಿಟರ್ ಬಳಕೆದಾರರು ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ. ಮಗನ ಫೀಸ್ ಕಟ್ಟಿದ್ದಕ್ಕೆ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಸನ್ನಿವೇಶವನ್ನು ಹಲವರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಮಗನ ಶಿಕ್ಷಣದ ವೆಚ್ಚ ಭರಿಸಲು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ‘ಸಫಾಯಿ ಕರ್ಮಚಾರಿ’ಯಾಗಿ ಕೆಲಸ ಮಾಡುತ್ತಿರುವ ತಾಯಿ ಯಾರೋ ತಪ್ಪುದಾರಿಗೆಳೆದಿದ್ದರಿಂದ, ಮಗನ ಕಾಲೇಜು ಶುಲ್ಕ 45,000 ಪಾವತಿಸಲು ಸರ್ಕಾರದಿಂದ ಹಣಕಾಸಿನ ನೆರವು ಪಡೆಯಲು ಬಸ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ಕಾಲೇಜ್ ಫೀಸ್ ಕಟ್ಟಲು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು, ಆದರೂ ನಾವು ‘ಅಭಿವೃದ್ಧಿ’ಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದೇವೆಯೇ?!” ಎಂದು ಟ್ವೀಟ್ ಮಾಡಿದ್ದಾರೆ.

”ಭಾರತೀಯ #ಶಿಕ್ಷಣದ ಕಳಪೆ ಸ್ಥಿತಿಯನ್ನು ಎತ್ತಿ ತೋರಿಸುವ ಘಟನೆ ಸೇಲಂನಲ್ಲಿ ನಡೆದಿದೆ. ಸಫಾಯಿ ಕರ್ಮಚಾರಿ ಮಹಿಳೆ ಸರ್ಕಾರದ ನೆರವು ಪಡೆಯಲು ಬಸ್ಸಿನ ಮುಂದೆ ಜಿಗಿದಿದ್ದಾಳೆ. ಆ ಹಣವನ್ನು ಮಗನ ಕಾಲೇಜು ಶುಲ್ಕ 45,000ರೂ. ಪಾವತಿಸಲು ಅವಳು ಬಯಸಿದ್ದಳು….” ಎಂದು ಟ್ವೀಟ್ ಮಾಡಿದ್ದಾರೆ.

”ಇದೇ ರೀತಿಯ ಘಟನೆ ಕಳೆದ ತಿಂಗಳು ಒಡಿಶಾದಲ್ಲಿ ನಡೆದಿತ್ತು. ವಿಶ್ವಗುರುವಿನ ಯುಗದಲ್ಲಿ ಶಿಕ್ಷಣಕ್ಕಾಗಿ ಎಂಥ ದುರಂತಕ್ಕೆ ನಾವೆಲ್ಲ ಸಾಕ್ಷಿಯಾಗಬೇಕಿದೆ, ಬಹಳ ದುಃಖವಾಗುತ್ತಿದೆ” ಎಂದು ಒಬ್ಬರು ಟ್ವೀಟ್ ಮಾಡಿದ್ದಾರೆ.

”ನಮ್ಮ ದೇಶದಲ್ಲಿ ಇನ್ನೂ ಬಡತನವಿದೆ ಎಂದರೆ ಇದು ನಾಚಿಕೆಯಿಂದ ತಲೆತಗ್ಗಿಸುವಂಥ ವಿಷಯ. ರಾಜಕಾರಣಿಗಳು ಶ್ರೀಮಂತ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡುವಲ್ಲಿ ಮುಳುಗಿದ್ದಾರೆ. ಹಾಗಾಗಿ ಬಡವರು ಬಡವರಾಗಿಯೇ ಉಳಿದು ಅದರ ಭಾರ ತಾಳಲಾರದೆ ಇಂಥ ನಿರ್ಧಾರಕ್ಕೆ ಬರಬೇಕಾಗುತ್ತಿರುವುದು ವಿಷಾದನೀಯ” ಎಂದು ಮತ್ತೊಬ್ಬರು ಹೇಳಿದ್ದಾರೆ.

ಪ್ರಕರಣದಲ್ಲಿ ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಪೊಲೀಸರ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...