Homeಮುಖಪುಟಜೋಧ್‌ಪುರದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಎಬಿವಿಪಿ ಸದಸ್ಯರ ಕೈವಾಡವಿದೆ ಎಂದ ಪೊಲೀಸರು

ಜೋಧ್‌ಪುರದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಎಬಿವಿಪಿ ಸದಸ್ಯರ ಕೈವಾಡವಿದೆ ಎಂದ ಪೊಲೀಸರು

- Advertisement -
- Advertisement -

ಜೋಧ್‌ಪುರದ ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ 17 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವು ರಾಜಸ್ಥಾನದಲ್ಲಿ ರಾಜಕೀಯ ಗದ್ದಲವನ್ನು ಹುಟ್ಟುಹಾಕಿದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪ ಮಾಡುತ್ತಿವೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಸಂಘಟನೆಯಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ಯುವಕರು ಈ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಅತ್ಯಾಚಾರಿಗಳು ಕೇಸರಿ ಪಕ್ಷಕ್ಕೆ ಸಂಬಂಧಿಸಿದವರಾಗಿರುವುದರಿಂದ ಬಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಪಕ್ಷೇತರ ಶಾಸಕ ಸಂಯಮ್ ಲೋಧಾ ಆರೋಪಿಸಿದಾಗ ಬಿಜೆಪಿ ಶಾಸಕರು ರಾಜ್ಯ ವಿಧಾನಸಭೆಯಲ್ಲಿ ಗದ್ದಲ ಹಗಲಾಟೆ ಮಾಡಿದರು.

ಸೋಮವಾರ ಜೈ ನಾರಾಯಣ ವ್ಯಾಸ್ ವಿಶ್ವವಿದ್ಯಾಲಯದಲ್ಲಿ ಈ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಮತ್ತು ಬಿಜೆಪಿಯ ಎಬಿವಿಪಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಅವರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದರು.

ಬೆಳಿಗ್ಗೆ ಜೈ ನಾರಾಯಣ ವ್ಯಾಸ್ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಎನ್‌ಎಸ್‌ಯುಐನೊಂದಿಗೆ ವಿದ್ಯಾರ್ಥಿಗಳು ಸಭೆ ನಡೆಸಿದರು. ಈ ವೇಳೆ, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಕ್ಯಾಂಪಸ್‌ಗಳ ಗಡಿ ಗೋಡೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ನಂತರ, ಎಬಿವಿಪಿ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್‌ಗೆ ಆಗಮಿಸಿ ಘೋಷಣೆಗಳನ್ನು ಮಾಡುತ್ತಲೇ ಒಳ ಪ್ರವೇಶಿಸಲು ಯತ್ನಿಸಿದಾಗ ವಾಗ್ವಾದ ನಡೆಯಿತು.

ಈ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು ಮತ್ತು ಕಲ್ಲು ತೂರಾಟವೂ ನಡೆಯಿತು. ನಂತರ ಪೊಲೀಸ್ ಸಿಬ್ಬಂದಿ ಲಾಠಿ ಚಾರ್ಜ್ ನಡೆಸಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರಕ್ಕಾಗಿ ಒತ್ತಾಯಿಸಿ ಹಲವಾರು ದಲಿತ ಸಂಘಟನೆಗಳು ಬೀದಿಗಿಳಿದಿವೆ.

ಇದನ್ನು ಓದಿ: ದಲಿತ ಅಪ್ರಾಪ್ತ ಬಾಲಕಿ ಮೇಲೆ ಸವರ್ಣಿಯ ಯುವಕರಿಂದ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಏನಿದು ಘಟನೆ?

ರಾಜಸ್ಥಾನದ ಜೋಧ್‌ಪುರ ಜಿಲ್ಲೆಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಸವರ್ಣಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ಆಕೆಯ 17 ವರ್ಷದ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಆಗಿತ್ತು. ಆರೋಪಿಗಳನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ಪೊಲೀಸರ ಪ್ರಕಾರ, ”ಅಜ್ಮೀರ್‌ನ 17 ವರ್ಷದ ಬಾಲಕಿ ಶನಿವಾರ ಅಪ್ರಾಪ್ತ ಹುಡುಗನೊಂದಿಗೆ ಮನೆ ಬಿಟ್ಟು ಬಂದಿದ್ದಳು. ಶನಿವಾರ ರಾತ್ರಿ ಬಸ್ ನಲ್ಲಿ ಜೋಧಪುರ ತಲುಪಿದ ಇಬ್ಬರೂ ಬಸ್ ನಿಲ್ದಾಣದ ಬಳಿ ತಂಗಲು ಸ್ಥಳ ಹುಡುಕುತ್ತಿದ್ದರು ಆದರೆ ಅಪ್ರಾಪ್ತರಿಗೆ ತಂಗಲು ಸ್ಥಳ ಸಿಗಲಿಲ್ಲ… ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾವಾಟಾ ಸರ್ಕಲ್ ಬಳಿ ಮೂವರು ವ್ಯಕ್ತಿಗಳು ಅವರ ಬಳಿಗೆ ಬಂದು ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ” ಎಂದು ಪೊಲೀಸ್ ಉಪ ಆಯುಕ್ತ (ಪೂರ್ವ) ಅಮೃತಾ ದುಹಾನ್ ಹೇಳಿದ್ದಾರೆ.

ಆರೋಪಿಗಳಾದ ಸಮಂದರ್ ಸಿಂಗ್ (21), ಭಟ್ಟಮ್ ಸಿಂಗ್ (22) ಮತ್ತು ಧರ್ಮಪಾಲ್ ಸಿಂಗ್ (21) ಅವರುಗಳು ಜೆಎನ್‌ವಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಅಪ್ರಾಪ್ತ ಬಾಲಕನನ್ನು ಹಿಡಿದು, ಹಲ್ಲೆ ನಡೆಸಿ ಬಾಯಿಗೆ ಬಟ್ಟೆ ಕಟ್ಟಿದ್ದಾರೆ. ಆ ನಂತರ ಅವರು ಬಾಲಕಿಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ದೂರಿನ ಆಧಾರದ ಮೇಲೆ, ಐಪಿಸಿ ಸೆಕ್ಷನ್ 376 (ಜಿ) (ಗ್ಯಾಂಗ್ ರೇಪ್) ಮತ್ತು ಲೈಂಗಿಕ ಅಪರಾಧಗಳ ಕಾಯ್ದೆ (ಪೋಕ್ಸೊ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟರ ಅಡಿಯಲ್ಲಿ ಮಕ್ಕಳ ರಕ್ಷಣೆ, ಬುಡಕಟ್ಟು (ದೌರ್ಜನ್ಯ ತಡೆ), 1989ರ ಕಾಯಿದೆಯಡಿ ಹಾಗೂ ಇತರ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳಲ್ಲಿ ಒಬ್ಬನನ್ನು ಗುರುತಿಸಲಾಯಿತು. ಆನಂತರ ಪೊಲೀಸರು ಅವನನ್ನು ಬಂಧಿಸಲು ಹೋದಾಗ, ಇತರ ಇಬ್ಬರು ಆರೋಪಿಗಳನ್ನು ಸಹ ಬಂಧಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

”ಪೊಲೀಸರು ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ… ನಾವು ಒಂದು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಸಲು ಪ್ರಯತ್ನಿಸುತ್ತೇವೆ. ಅದು ಮುಗಿದ ನಂತರ, ಪೊಲೀಸರು ಪ್ರಕರಣದ ತ್ವರಿತ ವಿಚಾರಣೆಯನ್ನು ನಡೆಸುತ್ತಾರೆ” ಪೊಲೀಸ್ ಅಧಿಕಾರಿ ಅಮೃತಾ ದುಹಾನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...