Homeಕರ್ನಾಟಕ'ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ' ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

- Advertisement -
- Advertisement -

ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ ಎಂದು ಜೀವ ಬೆದರಿಕೆ ಹಾಕಿರುವ ಮಣಿಕಂಠ ರಾಠೋಡರದ್ದು ಎನ್ನಲಾದ ಆಡಿಯೋ ಕುರಿತ ವಿಚಾರಣೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಜುಲೈ 15ರಂದು ಬಂಧಿಸಿ, ವಿಚಾರಣೆ ನಡೆಸಲಾಯಿತು. ಬಳಿಕ ಅವನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಮತ್ತೆ ಬಂಧಿಸುವ ಭೀತಿ ರಾಠೋಡಗೆ ಎದುರಾಗಿದೆ.

ಮಣಿಕಂಠ ರಾಠೋಡ ವಿರುದ್ಧ ವಿವಿಧ ಪ್ರಕರಣಗಳು ಸೇರಿದಂತೆ ಖರ್ಗೆ ಕುಟುಂಬಕ್ಕೆ ಬೆದರಿಕೆ ಹಾಕಿರುವ ಪ್ರಕರಣವು ದಾಖಲಾಗಿದೆ. 2014ರಿಂದ ಇಲ್ಲಿಯವರೆಗೆ ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬೆಂಗಳೂರು ಹಾಗೂ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ದಾಖಲಾದ ಒಟ್ಟು 46 ಪ್ರಕರಣಗಳನ್ನು ಉಲ್ಲೇಖಿಸಿ ಪಿಎಸ್‌ಐ ಚೇತನ್‌ ಅವರು ದಂಡಾಧಿಕಾರಿಗೆ ಸಲ್ಲಿಸಿದ್ದಾರೆ.

”46 ಪ್ರಕರಣಗಳು ದಾಖಲಾಗಿದ್ದರೂ ಮಣಿಕಂಠ ತನ್ನ ಪ್ರವೃತ್ತಿಯಲ್ಲಿ ಬದಲಾವಣೆ ತೋರದೆ ಪದೇ ಪದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಶಾಂತಿ ಕದಡಲು ಯತ್ನಿಸುವ ಪ್ರವೃತ್ತಿಯವರಾಗಿದ್ದಾರೆ. ಮುಂದೆ ಚಿತ್ತಾಪುರದಲ್ಲಿ ಜಾತಿ- ಜಾತಿಗಳ ಮಧ್ಯ ವೈರತ್ವ ಬೆಳೆಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿ, ಸಮಾಜದ ಶಾಂತಿ ಕದಡುವ ಸಾಧ್ಯತೆ ಹೆಚ್ಚಾಗಿದೆ. ಅವರನ್ನು ಹಾಜರು ಪಡಿಸಿಕೊಂಡು ಸನ್ನಡತೆಗಾಗಿ ಅವರಿಂದ ಹೆಚ್ಚಿನ ಬಾಂಡ್ ಬರೆಸಿಕೊಳ್ಳಬೇಕು” ಎಂದು ಪಿಎಸ್‌ಐ ತಾಲ್ಲೂಕು ದಂಡಾಧಿಕಾರಿಗೆ ಮನವಿ ಮಾಡಿದ್ದಾರೆ.

ಜುಲೈ 15ರಂದು ಸಂಜೆ ರಾಠೋಡ ಅವರನ್ನು ಬಂಧಿಸಿದ್ದ ಚಿತ್ತಾಪುರ ಪೊಲೀಸರು ವಿಚಾರಣೆ ನಡೆಸಿ, ಧ್ವನಿ ಮಾದರಿ ಸಂಗ್ರಹಿಸಿಕೊಂಡು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು. 16ರಂದು ಮತ್ತೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಕಳುಹಿಸಿದ್ದರು. ಆದರೆ, ಮಣಿಕಂಠ ವಿಚಾರಣೆಗೆ ಠಾಣೆಗೆ ಹಾಜರಾಗದೆ ಜಾಮೀನು ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿ, ವಶಕ್ಕೆ ಪಡೆದು ತಾಲ್ಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಖರ್ಗೆ ಕುಟುಂಬದ ವಿರುದ್ಧ ಜೀವಬೆದರಿಕೆ ಪ್ರಕರಣ

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಅದರಲ್ಲಿ ”ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಮಾತನಾಡಿ, ”ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಅವರ ನೀಲಿ ಕಣ್ಣಿನ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯ ರೆಕಾರ್ಡಿಂಗ್‌ನಿಂದ ಇದು ಈಗ ಸ್ಪಷ್ಟವಾಗಿದೆ” ಎಂದದು ಹೇಳಿದ್ದರು.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, ”ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

”ಯಾರ ಹೆಂಡ್ರ ಮಕ್ಕಳನ್ನು ಸಾಫ್ ಮಾಡ್ತೀರಿ?” ಎಂದು ರವಿ ಪ್ರಶ್ನಿಸಿದಾಗ, ಈಗ ನೀನು ಯಾರ ಹೆಸ್ರು ತಗೊಂಡೆ ಎಂದು ಕೇಳಿ ಆನಂತರ ”ಖರ್ಗೆಯವರ ನಂಬರ್ ಇದ್ರೆ ಅವರಿಗೆ ಬಾಯಿಗೆ ಬಂದಾಂಗೆ ಬೈಯ್ಯುತ್ತಿದ್ದೆ” ಎಂದು ಸಮಜಾಯಿಸಿ ಕೊಡುವುದು ಸಹ ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿಯೊಬ್ಬ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾರೆ. ಆತ ಬಿಜೆಪಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದಾನೆ. ಈ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸುವರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...