Homeಮುಖಪುಟಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್‌ಭೂಷಣ್‌ಗೆ ಎರಡು ದಿನಗಳ ಮಧ್ಯಂತರ ಜಾಮೀನು

ಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್‌ಭೂಷಣ್‌ಗೆ ಎರಡು ದಿನಗಳ ಮಧ್ಯಂತರ ಜಾಮೀನು

- Advertisement -
- Advertisement -

ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ದೆಹಲಿ ಪೊಲೀಸರು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.

ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಸಿಂಗ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಸಿಂಗ್ ಜೊತೆಗೆ, ಫೆಡರೇಶನ್‌ನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೆ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಸಿಂಗ್ ಅವರನ್ನು ಬಂಧಿಸುವಂತೆ ಏಪ್ರಿಲ್‌ನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜೂನ್ 15ರಂದು, ದೆಹಲಿ ಪೊಲೀಸರು ಬ್ರಿಜ್‌ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು. ಆದಾಗ್ಯೂ, ಪೊಲೀಸರು ಅಪ್ರಾಪ್ತರನ್ನು ಒಳಗೊಂಡ ಆರೋಪಗಳನ್ನು ಕೈಬಿಡುವಂತೆ ಸೂಚಿಸಿದ್ದರು. ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ನಾವು ಶಿಫಾರಸು ಮಾಡಿದ್ದೇವೆ ಎಂದು ಪೊಲೀಸರು ಹೇಳಿದ್ದರು. ಆದರೆ ಸಾಕ್ಷಿ ಮಲಿಕ್ ಅವರು, ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ಆ ಬಾಲಕಿ ತನ್ನ ಹೇಳಿಕೆಯನ್ನು ಬದಲಾಯಿಸಿದೆ ಎಂದು ಆರೋಪ ಮಾಡಿದ್ದರು.

ಜೂನ್ 25ರಂದು ಪ್ರತಿಭಟನೆ ನಿರತ ಕುಸ್ತಿಪಟುಗಳು ನ್ಯಾಯಕ್ಕಾಗಿ ಬೀದಿಗಿಳಿಯದೆ ನ್ಯಾಯಾಲಯದಲ್ಲಿ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದರು.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ಏಪ್ರಿಲ್ 28 ರಂದು ದಾಖಲಿಸಲಾಗಿತ್ತು.

ಇದನ್ನೂ ಓದಿ: WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧ ‘ತಾಂತ್ರಿಕ ಸಾಕ್ಷ್ಯ’ವಾಗಿ ಫೋಟೋ, ಮೊಬೈಲ್ ಲೊಕೇಶನ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...