Homeಮುಖಪುಟಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

ಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್‌ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದು, ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳಿಗೆ ಈ ವಿಡಿಯೋ ಮದ್ದುಗುಂಡುಗಳನ್ನು ನೀಡಿದಂತಾಗಿದೆ.

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ ಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಸೋಮಯ್ಯ ಮತ್ತು ಆಡಳಿತ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ವೀಡಿಯೊ ಅವರ ‘ಗುಣ ಮತ್ತು ನಿಜವಾದ ಮುಖ’ವನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದೆ.

ಈ ವಿಡಿಯೋ ಅವರ ನೈಜ ಪಾತ್ರವನ್ನು ಮತ್ತು ಅವರ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರು, ”ಸಮ್ಮಿಶ್ರ ಸರ್ಕಾರದ ಚಾರಿತ್ರ್ಯ ಮತ್ತು ನಿಜ ಮುಖ ಇಂದು ಬಯಲಾಗಿದೆ. ಕಿರೀಟ್ ಸೋಮಯ್ಯ ಹಲವು ಶಾಸಕರು, ಸಂಸದರನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ. ಈಗ ಒಂದಷ್ಟು ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಿರುವುದನ್ನು ನಾವು ನೋಡಬಹುದು. ಎಂಟು ಗಂಟೆಯ ಕ್ಲಿಪ್ ಹೊರಬಿದ್ದಿದೆ. ಕ್ಲಿಪ್‌ನಿಂದಾಗಿ ಎಷ್ಟು ಮಹಿಳೆಯರು ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿರಬಹುದು ಎಂದು ನಾನು ಊಹಿಸಲು ಸಹ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ನೈತಿಕತೆಯ ಬಗ್ಗೆ ಆಗಾಗ್ಗೆ ಉಪನ್ಯಾಸ ನೀಡುವ ಬಿಜೆಪಿ ನಾಯಕರು ಇದೀಗ ಕಿರಿತ್ ಸೋಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ತೋರಬೇಕು” ಎಂದು ಅವರು ಹೇಳಿದ್ದಾರೆ.

ಸೋಮಯ್ಯ ಅವರನ್ನು ಹೆಸರಿಸದೆ, ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಅವರು, ಬಾಳಾಸಾಹೇಬ್ ಠಾಕ್ರೆಯನ್ನು ಉಲ್ಲೇಖಿಸಿ ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು ಹೇಳಿದರು.

ಗೌರವಾನ್ವಿತ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮೌಲ್ಯಗಳನ್ನು ನಾವು ಹೊಂದಿದ್ದೇವೆ. ಅವರು ಹೇಳುತ್ತಿದ್ದರು, ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು… ನಿಖರವಾಗಿ ಅದೇ ಆಗುತ್ತಿದೆ. ಇನ್ನೂ ಬಹಳಷ್ಟು ಸಂಭವಿಸುತ್ತದೆ. ಏನಾಗುತ್ತದೆ ಎಂದು ನೋಡೋಣ. ಜೈ ಮಹಾರಾಷ್ಟ್ರ!” ಶ್ರೀ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್‌ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ ದೂರುಗಳು ಕೂಡ ದಾಖಲಾಗಿವೆ. ಆದರೆ, ಕಿರಿಟ್ ಸೋಮಯ್ಯ ಅವರು, ”ಈ ವಿಡಿಯೊ ನನ್ನದಲ್ಲ, ನನ್ನ ಹಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು” ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವಿಟ್ ಮೂಲಕ ದೂರು ನೀಡಿದ್ದಾರೆ.ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...