Homeಮುಖಪುಟಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

ಮಹಾರಾಷ್ಟ್ರ BJP ಉಪಾಧ್ಯಕ್ಷನದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗ: ನಿಜ ಮುಖ ಬಯಲಾಗಿದೆ ಎಂದ ವಿಪಕ್ಷಗಳು

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್‌ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದು, ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ದಾಳಿ ಮಾಡಲು ಪ್ರತಿಪಕ್ಷಗಳಿಗೆ ಈ ವಿಡಿಯೋ ಮದ್ದುಗುಂಡುಗಳನ್ನು ನೀಡಿದಂತಾಗಿದೆ.

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ ಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಸೋಮಯ್ಯ ಮತ್ತು ಆಡಳಿತ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ವೀಡಿಯೊ ಅವರ ‘ಗುಣ ಮತ್ತು ನಿಜವಾದ ಮುಖ’ವನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದೆ.

ಈ ವಿಡಿಯೋ ಅವರ ನೈಜ ಪಾತ್ರವನ್ನು ಮತ್ತು ಅವರ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಅವರು, ”ಸಮ್ಮಿಶ್ರ ಸರ್ಕಾರದ ಚಾರಿತ್ರ್ಯ ಮತ್ತು ನಿಜ ಮುಖ ಇಂದು ಬಯಲಾಗಿದೆ. ಕಿರೀಟ್ ಸೋಮಯ್ಯ ಹಲವು ಶಾಸಕರು, ಸಂಸದರನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ. ಈಗ ಒಂದಷ್ಟು ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಿರುವುದನ್ನು ನಾವು ನೋಡಬಹುದು. ಎಂಟು ಗಂಟೆಯ ಕ್ಲಿಪ್ ಹೊರಬಿದ್ದಿದೆ. ಕ್ಲಿಪ್‌ನಿಂದಾಗಿ ಎಷ್ಟು ಮಹಿಳೆಯರು ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿರಬಹುದು ಎಂದು ನಾನು ಊಹಿಸಲು ಸಹ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ನೈತಿಕತೆಯ ಬಗ್ಗೆ ಆಗಾಗ್ಗೆ ಉಪನ್ಯಾಸ ನೀಡುವ ಬಿಜೆಪಿ ನಾಯಕರು ಇದೀಗ ಕಿರಿತ್ ಸೋಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ತೋರಬೇಕು” ಎಂದು ಅವರು ಹೇಳಿದ್ದಾರೆ.

ಸೋಮಯ್ಯ ಅವರನ್ನು ಹೆಸರಿಸದೆ, ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಅವರು, ಬಾಳಾಸಾಹೇಬ್ ಠಾಕ್ರೆಯನ್ನು ಉಲ್ಲೇಖಿಸಿ ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು ಹೇಳಿದರು.

ಗೌರವಾನ್ವಿತ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮೌಲ್ಯಗಳನ್ನು ನಾವು ಹೊಂದಿದ್ದೇವೆ. ಅವರು ಹೇಳುತ್ತಿದ್ದರು, ”ಅವನ ಕರ್ಮದಿಂದ ಸಾಯುವವರನ್ನು ಧರ್ಮದಿಂದ ಕೊಲ್ಲಬೇಡಿ” ಎಂದು… ನಿಖರವಾಗಿ ಅದೇ ಆಗುತ್ತಿದೆ. ಇನ್ನೂ ಬಹಳಷ್ಟು ಸಂಭವಿಸುತ್ತದೆ. ಏನಾಗುತ್ತದೆ ಎಂದು ನೋಡೋಣ. ಜೈ ಮಹಾರಾಷ್ಟ್ರ!” ಶ್ರೀ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್‌ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ ದೂರುಗಳು ಕೂಡ ದಾಖಲಾಗಿವೆ. ಆದರೆ, ಕಿರಿಟ್ ಸೋಮಯ್ಯ ಅವರು, ”ಈ ವಿಡಿಯೊ ನನ್ನದಲ್ಲ, ನನ್ನ ಹಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು” ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವಿಟ್ ಮೂಲಕ ದೂರು ನೀಡಿದ್ದಾರೆ.ಮಾಜಿ ಸಂಸದರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....