Homeಮುಖಪುಟಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ 'ಸಾಮೂಹಿಕ ಸಂಕಲ್ಪ' ಹೀಗಿದೆ...

ಬೆಂಗಳೂರಿನಲ್ಲಿ ಹುಟ್ಟಿದ INDIA ಒಕ್ಕೂಟದ ‘ಸಾಮೂಹಿಕ ಸಂಕಲ್ಪ’ ಹೀಗಿದೆ…

- Advertisement -
- Advertisement -

ಇಂದು ಬೆಂಗಳೂರಿನಲ್ಲಿ ಹೊಸದಾಗಿ ರೂಪುಗೊಂಡ INDIA ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗೌರ್ವರ್‌ಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ. ಅದರ ಕನ್ನಡ ಅನುವಾದ ಇಲ್ಲಿದೆ.

ನಾವು, ಭಾರತದ 26 ಪ್ರಗತಿಪರ ಪಕ್ಷಗಳ ನಾಯಕರು, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಭಾರತದ ಪರಿಕಲ್ಪನೆಯನ್ನು ರಕ್ಷಿಸಲು ನಮ್ಮ ದೃಢ ಸಂಕಲ್ಪ ಮಾಡುತ್ತೇವೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ನಿರ್ಣಾಯಕ ಘಟ್ಟದಲ್ಲಿದ್ದೇವೆ. ಏಕೆಂದರೆ ನಮ್ಮ ಗಣರಾಜ್ಯದ ಸ್ವರೂಪದ ಮೇಲೆ ಬಿಜೆಪಿಯು ವ್ಯವಸ್ಥಿತ ರೀತಿಯಲ್ಲಿ ತೀವ್ರವಾಗಿ ಆಕ್ರಮಣ ಮಾಡುತ್ತಿದೆ. ಭಾರತೀಯ ಸಂವಿಧಾನದ ಮೂಲ ಸ್ತಂಭಗಳಾದ ಜಾತ್ಯತೀತ ಪ್ರಜಾಪ್ರಭುತ್ವ, ಆರ್ಥಿಕ ಸಾರ್ವಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಫೆಡರಲಿಸಂ ತತ್ವಗಳನ್ನು ಒಂದೊಂದ ಮೇಲೆ ಒಂದರಂತೆ ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮಣಿಪುರವನ್ನು ನಾಶಪಡಿಸಿದ ಮಾನವೀಯ ದುರಂತದ ಬಗ್ಗೆ ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಪ್ರಧಾನಿಯವರ ಮೌನ ಆಘಾತಕಾರಿಯಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ.

ಸಂವಿಧಾನದ ಮೇಲೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ನಾವು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜಕೀಯದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಾತ್ರವು ಎಲ್ಲಾ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯೇತರ ರಾಜ್ಯಗಳ ಕಾನೂನುಬದ್ಧ ಅಗತ್ಯಗಳು, ಅವಶ್ಯಕತೆಗಳು ಮತ್ತು ಅರ್ಹತೆಗಳನ್ನು ಕೇಂದ್ರವು ಸಕ್ರಿಯವಾಗಿ ನಿರಾಕರಿಸುತ್ತಿದೆ.

ನಿರಂತರವಾಗಿ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ಮತ್ತು ದಾಖಲೆಯ ನಿರುದ್ಯೋಗದ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸುತ್ತೇವೆ. ಏಕೆಂದರೆ ನೋಟು ಅಮಾನ್ಯೀಕರಣವು MSME ಮತ್ತು ಅಸಂಘಟಿತ ವಲಯಗಳಿಗೆ ಹೇಳಲಾಗದ ನಷ್ಟ ಉಂಟುಮಾಡಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಉಂಟಾಗಿದೆ. ರಾಷ್ಟ್ರದ ಸಂಪತ್ತನ್ನು ಕೇವಲ ಪ್ರಧಾನಿಯರವರ  ಸ್ನೇಹಿತರಿಗೆ ಅಜಾಗರೂಕತೆಯಿಂದ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಸೂಕ್ತ ಕಾರ್ಯತಂತ್ರದ ಮೂಲಕ ಸಾರ್ವಜನಿಕ ವಲಯವನ್ನು ಅಭಿವೃದ್ದಿಪಡಿಸಿ ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸುತ್ತೇವೆ. ಇದರಲ್ಲಿ ಉದ್ಯಮದ ಮನೋಭಾವವನ್ನು ಬೆಳೆಸಲಾಗುತ್ತದೆ ಮತ್ತು ವಿಸ್ತರಿಸಲು ಪ್ರತಿ ಅವಕಾಶವನ್ನು ನೀಡಲಾಗುತ್ತದೆ. ಕೃಷಿಕ ರೈತರ ಪರವಾಗಿ ಹೋರಾಡುತ್ತೇವೆ.

ಅಲ್ಪಸಂಖ್ಯಾತರ ವಿರುದ್ಧ ನಿರ್ಮಾಣವಾಗುತ್ತಿರುವ ದ್ವೇಷ ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಿ; ಎಲ್ಲಾ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ನ್ಯಾಯಯುತ ಪಾಲು ನೀಡಲು ಮೊದಲ ಹಂತವಾಗಿ, ಜಾತಿ ಗಣತಿಯನ್ನು ಜಾರಿಗೊಳಿಸಿ.

ನಮ್ಮ ಸಹ ಭಾರತೀಯರನ್ನು ಗುರಿಯಾಗಿಸುವ, ಕಿರುಕುಳ ನೀಡುವ ಮತ್ತು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸುತ್ತೇವೆ. ಏಕೆಂದರೆ ಅವರ ದ್ವೇಷ ವಿಷಪೂರಿತ ಪ್ರಚಾರವು ಆಡಳಿತ ಪಕ್ಷ ಮತ್ತು ಅದರ ವಿಭಜಕ ಸಿದ್ಧಾಂತವನ್ನು ವಿರೋಧಿಸುವ ಎಲ್ಲರ ವಿರುದ್ಧ ಕೆಟ್ಟ ಹಿಂಸೆಗೆ ಕಾರಣವಾಗಿದೆ. ಈ ದಾಳಿಗಳು ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ಭಾರತ ಗಣರಾಜ್ಯವನ್ನು ಸ್ಥಾಪಿಸಿದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಮತ್ತು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ನಾಶಪಡಿಸುತ್ತಿವೆ. ಭಾರತೀಯ ಇತಿಹಾಸವನ್ನು ಮರುಶೋಧಿಸುವ ಮತ್ತು ತಿರುಚುವ ಮೂಲಕ ಸಾರ್ವಜನಿಕ ಸಂವಾದವನ್ನು ಹಾಳುಮಾಡಲು ಬಿಜೆಪಿಯ ಪುನರಾವರ್ತಿತ ಪ್ರಯತ್ನಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿವೆ.

ಪರ್ಯಾಯ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಸೂಚಿಯನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಹೆಚ್ಚು ಸಮಾಲೋಚನೆ, ಪ್ರಜಾಪ್ರಭುತ್ವ ಮತ್ತು ಭಾಗವಹಿಸುವಿಕೆ ಇರುವ ಆಡಳಿತದ ಸಾರ ಮತ್ತು ಶೈಲಿ ಎರಡನ್ನೂ ಪರಿವರ್ತಿಸಲು ನಾವು ಭರವಸೆ ನೀಡುತ್ತೇವೆ.

ಇದನ್ನೂ ಓದಿ; INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...