Homeಕರ್ನಾಟಕ'ಗೃಹಲಕ್ಷ್ಮಿ' ಯೋಜನೆಗೆ ಇಂದು ಚಾಲನೆ: ಮನೆ ಯಜಮಾನಿಗೆ 2000ರೂ. ಗ್ಯಾರಂಟಿ

‘ಗೃಹಲಕ್ಷ್ಮಿ’ ಯೋಜನೆಗೆ ಇಂದು ಚಾಲನೆ: ಮನೆ ಯಜಮಾನಿಗೆ 2000ರೂ. ಗ್ಯಾರಂಟಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ ಬಹುನೀರೀಕ್ಷಿತ ಗ್ಯಾರಂಟಿ ಎಂದರೆ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆಯಾಗಿದೆ. ಇಂದು (ಬುಧವಾರ) ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.

ಕಾಂಗ್ರೆಸ್ ಪಕ್ಷ ಚುನಾವಣೆಯ ಸಮಯದಲ್ಲಿ ಐದು ಗ್ಯಾರಂಟಿಗಳ ಆಶ್ವಾಸನೆ ನೀಡಿತ್ತು. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇದೀಗ ಬುಧವಾರ ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ. ‘ಯುವನಿಧಿ’ಯೊಂದು ಮಾತ್ರ ತಡವಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಕಾರ್ಯಕ್ರಮವನ್ನು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ರಾಜೀವ್ ಚಂದ್ರಶೇಖರ್, ಸ್ಪೀಕರ್ ಯು.ಟಿ.ಖಾದರ್, ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಬುಧವಾರ ನೋಂದಣಿ ಆರಂಭವಾಗುತ್ತದೆ. ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್​ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್​ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆ ನೀಡಿದ್ದಾರೆ.

ನಕಲಿ ಅರ್ಜಿಗಳ ಬಗ್ಗೆ ಎಚ್ಚರ:

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ನಮೂನೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ನೋಂದಾಯಿಸುವುದು ಹೇಗೆ?

ರೇಷನ್ ಕಾರ್ಡ್​ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್​ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.

ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್​ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.

ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.

ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್​ಗೆ ನೋಂದಣಿ ಮಾಡಿಸಬಹುದು.
ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.

ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.

ಡಿಸಿಗಳಿಗೆ ಸೂಚನೆ

* ಗೃಹಲಕ್ಷ್ಮಿ ನೋಂದಣಿ ಮಾಡುವ ಕೇಂದ್ರಗಳ ಮೇಲ್ವಿಚಾರಣೆಗೆ ಸರ್ಕಾರಿ ಅಧಿಕಾರಿ/ಸಿಬ್ಬಂದಿ ನಿಯೋಜನೆ.

* ಕೇಂದ್ರಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರ ನೇಮಕ.

* ವಿದ್ಯುತ್ ಕೈಕೊಟ್ಟರೆ ನೋಂದಣಿಗೆ ತೊಂದರೆಯಾಗದಂತೆ ಬ್ಯಾಟರಿ ಬ್ಯಾಕ್​ಅಪ್ ಹಾಗೂ ಸುಸ್ಥಿತಿಯಲ್ಲಿರುವ ಪ್ರಿಂಟರ್ ನೀಡುವುದು.

* ಪ್ರತಿ ತಾಲೂಕಿನಲ್ಲಿ ಹೆಲ್ಪ್​ಡೆಸ್ಕ್ ಸ್ಥಾಪನೆ.

* ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಪ್ರತಿನಿಧಿಗಳ ಪಟ್ಟಿ ಪಡೆದು ನೋಂದಣಿ ಮಾಡಿಸಿ ತರಬೇತಿ ನೀಡಬೇಕು.

* ನೋಂದಣಿ ಕೇಂದ್ರದಲ್ಲಿ ಮಳೆಯಿಂದ ರಕ್ಷಿಸಲು ಸೂಕ್ತ ರಕ್ಷಣೆ.

* ನೋಡಲ್ ಅಧಿಕಾರಿಗಳ ವಿವರಗಳನ್ನು ಇ-ಆಡಳಿತ ಇಲಾಖೆಯ ಲಿಂಕ್​ನಲ್ಲಿ ಅಪ್​ಲೋಡ್ ಮಾಡುವುದು.

ಇದನ್ನೂ ಓದಿ: 1.28 ಕೋಟಿ ಕುಟುಂಬಗಳಿಗೆ ಹಣ: ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...