Homeಮುಖಪುಟಗುಜರಾತ್ ಹೈಕೋರ್ಟ್ ಆದೇಶ ರದ್ದು; ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

ಗುಜರಾತ್ ಹೈಕೋರ್ಟ್ ಆದೇಶ ರದ್ದು; ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

- Advertisement -
- Advertisement -

2002ರ ಗೋಧ್ರಾ ಹತ್ಯಾಕಾಂಡ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಡಿಯಲ್ಲಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎ ಎಸ್ ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ತೀಸ್ತಾ ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು  ರದ್ದುಗೊಳಿಸಿದೆ.

ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅವರ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಮೇಲ್ಮನವಿದಾರರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯಾವುದೇ ಪ್ರಯತ್ನವನ್ನು ಮಾಡಬಾರದು ಮತ್ತು ಅವರಿಂದ ದೂರವಿರಬೇಕು” ಎಂದು ಪೀಠ ಹೇಳಿದೆ.

ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.

ಕಳೆದ ವರ್ಷ ಜೂನ್ 25ರಂದು ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರೊಂದಿಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ಗೋಧ್ರಾ ಗಲಭೆ ಪ್ರಕರಣಗಳ ಪ್ರಕರಣದಲ್ಲಿ ನಿರಪರಾಧಿಗಳನ್ನು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಸೆಟಲ್ವಾಡ್ ಅವರನ್ನು ಬಂಧಿಸಲಾಯಿತು.

ಅಹಮದಾಬಾದ್ ಸೆಷನ್ಸ್ ನ್ಯಾಯಾಲಯವು ಜುಲೈ 30, 2022 ರಂದು ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತು.

ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಹೈಕೋರ್ಟ್ ಆಗಸ್ಟ್ 3, 2022 ರಂದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಸೆಪ್ಟೆಂಬರ್ 19ರಂದು ವಿಚಾರಣೆಗೆ ನಿಗದಿಪಡಿಸಿತ್ತು.

ಈ ಮಧ್ಯೆ ಹೈಕೋರ್ಟ್ ತನ್ನ ಮನವಿಯನ್ನು ಪರಿಗಣಿಸಲು ನಿರಾಕರಿಸಿದ ನಂತರ ಮಧ್ಯಂತರ ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್ (SC)ಗೆ ತೆರಳಿದರು.

ಕಳೆದ ವರ್ಷ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್ ಅವರಿಹೆ ಮಧ್ಯಂತರ ಜಾಮೀನು ನೀಡಿತು ಮತ್ತು ಗುಜರಾತ್ ಹೈಕೋರ್ಟ್ ತನ್ನ ನಿಯಮಿತ ಜಾಮೀನು ಅರ್ಜಿಯನ್ನು ನಿರ್ಧರಿಸುವವರೆಗೆ ತನ್ನ ಪಾಸ್‌ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಒಪ್ಪಿಸುವಂತೆ ಹೇಳಿದೆ.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...