Homeಕರ್ನಾಟಕಮಸೂದೆ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಗಲಾಟೆ: ಬಿಜೆಪಿಯ 10 ಶಾಸಕರ ಅಮಾನತು

ಮಸೂದೆ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಗಲಾಟೆ: ಬಿಜೆಪಿಯ 10 ಶಾಸಕರ ಅಮಾನತು

- Advertisement -
- Advertisement -

ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪಸಭಾಧ್ಯಕ್ಷರ ಮೇಲೆಸೆದು ಕೋಲಾಹಲ ಸೃಷ್ಟಿಸಿದ ಬಿಜೆಪಿಯ 10 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.

ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವವರೆಗೂ 10 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದ್ದಾರೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್​, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.

ಸಧ್ಯ ಗುರುವಾರ ಮತ್ತು ಶುಕ್ರವಾರ 2 ದಿನಗಳ ಕಾಲ ಅಧಿವೇಶನ ಬಾಕಿ ಇದ್ದು, ಈ ಹತ್ತು ಶಾಸಕರು ಸದನಕ್ಕೆ ಹಾಜರಾಗದಂತೆ ಅಮಾನತು ಮಾಡಲಾಗಿದೆ.

ಈ ಬಗ್ಗೆ ಸದನದಲ್ಲಿ ಸ್ಪೀಕರ್ ಖಾದರ್ ಮಾತನಾಡಿದ್ದು, ”ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ 10 ಶಾಸಕರ ಅಮಾನತು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಮಾರ್ಷಲ್ಸ್‌ ಸದನದೊಳಗೆ ಬಂದು ಅಮಾನತುಗೊಂಡ ಶಾಸಕರನ್ನು ಹೊರಕಳಿಸಿದರು. ಅಷ್ಟರಲ್ಲಿ ಬಿಜೆಪಿಯ ಇತರ ಶಾಸಕರು ಅಮಾನತುಗೊಂಡ ಶಾಸಕರಿಗೆ ತಡೆಗೋಡೆಯಾಗಿ ನಿಂತರು. ಅಮಾನತುಗೊಂಡ ಶಾಸಕರನ್ನು ಮಾರ್ಷಲ್​​ಗಳು ಬಲವಂತವಾಗಿ ಹೊರಗೆ ಕಳುಹಿಸದಂತೆ ತಡೆಯಲು ಬಿಜೆಪಿಯ ಇತರ ಶಾಸಕರು ಪ್ರಯತ್ನಿಸಿದರು. ಆದರೆ ಮಾರ್ಷಲ್ಸ್‌ಗಳು ಮಾತ್ರ ಶಾಸಕರನ್ನು ಬಲವಂತವಾಗಿ ಹೊತ್ತುಕೊಂಡು ಹೋಗಿ ಹೊರಗೆ ಹಾಕಿದರು.

ಏನಿದು ಘಟನೆ?:

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ”ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಹೇಳಿದ್ದರು.

ಸಿಎಂ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಆನಂತರ ಸ್ಪೀಕರ್ ಖಾದರ್ ಅವರು ಅಮಾನತು ಮಾಡಿರುವುದಾಗಿ ತಿಳಿಸಿದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ  ಮಾತನಾಡಿ, ”ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...