Homeಕರ್ನಾಟಕಸೌಜನ್ಯ ಕೇಸ್: 'ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ': ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

ಸೌಜನ್ಯ ಕೇಸ್: ‘ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ’: ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

- Advertisement -
- Advertisement -

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ ಮೊದಲಿನಿಂದಲೂ ಶಂಕೆ ವ್ಯಕ್ತಪಡಿಸಿದ್ದು, ಈದೀಗ ಅವರನ್ನು ವಿಚಾರಣೆಗೆ ಒಳಪಡಿಸಲೇಬೇಕು ಎಂದು ಅನೇಕ ಪ್ರಗತಿಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಮತ್ತೊಂದೆಡೆ ವೀರೇಂದ್ರ ಹೆಗ್ಗಡೆ ಬೆದರಿಕೆಯ ದಾಟಿಯಲ್ಲಿ ಮಾತನಾಡಿದ್ದಾರೆ.

ಈ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದ ಬಳಿಕ ಸೌಜನ್ಯ ಕುಟುಂಬ ಶಂಕೆ ವ್ಯಕ್ತಪಡಿಸಿದವರನ್ನು ವಿಚಾರಣೆ ಮಾಡಬೇಕು ಎಂದು ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇದೀಗ ಮೈಸೂರಿನ ಒಡನಾಡಿ ಸಂಸ್ಥೆ ಹೋರಾಟದ ನೇತೃತ್ವ ವಹಿಸಿಕೊಂಡಿದೆ.

ಈ ವರೆಗೂ ಮೌನವಾಗಿದ್ದ ವೀರೇಂದ್ರ ಹೆಗ್ಗಡೆ, ಇದೀಗ ಮೌನ ಮುರಿದಿದ್ದಾರೆ. ”ನಮ್ಮ ಅಭಿಮಾನಿಗಳು ಏನನ್ನಾದರೂ ಮಾಡಲು ಸಿದ್ದರಿದ್ದಾರೆ. ಅದನ್ನು ಬೇಡವೆಂದು ಹೇಳಿದ್ದೇವೆ” ಎಂದು ಬೆದರಿಕೆಯೊಡ್ಡುವ ಮಾತುಗಳನ್ನಾಡಿದ್ದಾರೆ.

”ಧರ್ಮಸ್ಥಳ ಕ್ಷೇತ್ರದ ಸಾಧನೆ ಕಂಡು ದ್ವೇಷ ಮಾಡುತ್ತಿರುವ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ನಮಗೆ ಯಾವುದೇ ಭಯವಿಲ್ಲ. ಸಿಬಿಐ ಸಹಿತ ಯಾವುದೇ ತನಿಖೆ ಮಾಡಿದರೂ ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

”ಕೆಲವರು ನಮ್ಮ ಮೌನವನ್ನೇ ದೌರ್ಬಲ್ಯವೆಂದು ಭಾವಿಸಿದ್ದಾರೆ. ಏನೇನೋ ಮಾತನಾಡುತ್ತಿದ್ಧಾರೆ. ನಾವು ಸುಮ್ಮನಿದ್ದೇವೆ ಎಂದರೆ ತಪ್ಪು ಮಾಡಿದ್ದೇವೆ ಎಂದರ್ಥವಲ್ಲ. ಚರ್ಚೆಗೆ ಅವಕಾಶ ಮಾಡಿಕೊಟ್ಟು ಅನಾಹುತಕ್ಕೆ ದಾರಿ ಮಾಡಿಕೊಡಬಾರದು ಎಂಬುದು ನಮ್ಮ ಉದ್ದೇಶ” ಎಂದಿದ್ದಾರೆ.

”ಈಗ ಕೆಲವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಈ ವಿಚಾರದಲ್ಲಿ ತನಿಖೆ ಮಾಡಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಅವರು ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

11ವರ್ಷಗಳ ಹಿಂದೆ ಅಂದರೆ 2012ರ ಅಕ್ಟೋಬರ್ 9ರಂದು ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಳನನ್ನು ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಲಾಗಿತ್ತು. ಇದು ರಾಜ್ಯಾದ್ಯಾಂತ ಭಾರೀ ಸದ್ದು ಮಾಡಿತ್ತು.

ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದಾಗ ಅಮಾಯಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಆಬಳಿಕ ಅವನಿಗೆ ತಾನೇ ಕೃತ್ಯ ಎಸಗಿದ್ದೇನೆಂದು ಒಪ್ಪಿಕೊಳ್ಳುವಂತೆ ದೌರ್ಜನ್ಯ ಮಾಡಲಾಗಿತ್ತು. 2013ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಂತೋಷ್‌ ರಾವ್ ಸುತ್ತಲೇ ತನಿಖೆ ನಡೆಸಿದ ಸಿಬಿಐ, ಆತ ಕೃತ್ಯ ಎಸಗಿದ್ದಾನೆ ಎಂಬುದನ್ನು ಸಾಬೀತು ಮಾಡುವಲ್ಲಿ ವಿಫಲವಾಯಿತು.

ಇತ್ತೀಚೆಗೆ ಸಿಬಿಐ ಕೋರ್ಟ್‌ ಆಮಾಯಕ ಸಂತೋಷ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿತು. ಇದೀಗ, ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ರಾಜ್ಯದ ಕೆಲವಡೆ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...