Homeಮುಖಪುಟಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಮಣಿಪುರದ ಕಾಂಗಪೂರ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಪುರುಷರ ಗುಂಪೊಂದು ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿದೆ. ಆನಂತರ ಸಮೀಪದ ಮೈದಾನದಲ್ಲಿ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಮಹಿಳೆಯರನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಹೇಯ ಕೃತ್ಯದ ವಿಡಿಯೋ ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹಂದಾಡಿದೆ. ಹೀಗಾಗಿ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ.

ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯ ಮುನ್ನಾ ದಿನವೆ ವಿಡಿಯೊ ಬಿಡುಗಡೆ ಮಾಡಲಾಗಿದೆ. ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ಸಂಭವಿಸಿದೆ. ಕಾಂಗ್‌ಪೋಪಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ್ದರೂ ಮತ್ತೊಂದು ಜಿಲ್ಲೆಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಭತ್ತದ ಗಟ್ಟಿಗೆ ಕರೆದೊಯ್ಯುವ ದುಷ್ಕರ್ಮಿಗಳ ಗುಂಪು ಅವರನ್ನು ಹಿಂಸಿಸುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ ಮಹಿಳೆಯರು ಸಹಾಯಕ್ಕಾಗಿ ಅಂಗಲಾಚುವುದು ವಿಡಿಯೋದಲ್ಲಿ ಕಂಡುಬರುತ್ತದೆ.

ಈ ಘಟನೆಯನ್ನು ದೃಢೀಕರಿಸಿರುವ ಪೊಲೀಸರು ಬುಧವಾರ ಸಂಜೆ ಹೇಳಿಕೆ ಬಿಡುಗಡೆ ಮಾಡಿದ್ದು, ”ದುಷ್ಕರ್ಮಿಗಳ ಬಂಧನಕ್ಕಾಗಿ ಎಲ್ಲ ರೀತಿಯ ಪತ್ರಗಳನ್ನು ನಡೆಸುತ್ತಿರುವುದಾಗಿ ಹೇಳಿದ್ದಾರೆ. ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಥೇಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಸ್, ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

”ಸಂತ್ರಸ್ತ ಮಹಿಳೆಯರು ಕುಕಿ ಜೋ ಬುಡಕಟ್ಟಿಗೆ ಸೇರಿದವರು ಇಬ್ಬರೂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಗುರುತು ಬಹಿರಂಗವಾಗುವಂಥ ವಿಡಿಯೊವನ್ನು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದು, ಮಹಿಳೆಯರು ಮತ್ತಷ್ಟು ಅಪಮಾನಕ, ಗುರಿಯಾಗಿದ್ದಾರೆ” ಎಂದು ಐಟಿಎಲ್ಎಫ್ ತಿಳಿಸಿದೆ.

ಘಟನೆ ಬಗ್ಗೆ ನಿಗಮ ವ್ಯಕ್ತಪಡಿಸಿರುವ ಹಲವಾರು ಸಂಘಟನೆಗಳು, ಪಕ್ಷಗಳು ಇದೊಂದು ಪ್ರಶಾಚಿಕ ಕೃತ್ಯ ಎಂದು ಟೀಕಿಸಿವೆ.

ಶಿರಾದ ಪ್ರಾದೇಶಿಕ ಪಕ್ಷ ತಿಪ್ಪಾ ಮೋಯಾದ ಮುಖ್ಯಸ್ಥ ಪ್ರದೇತ್ ದೇಬ್ ಬರ್ಮಾ ಕೂಡ ವಿಡಿಯೊ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ನಾನು ರಾಜಕೀಯ ತಜ್ಞನಲ್ಲ ಆದರೆ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವುದು ಮತ್ತು ಲೈಂಗಿಕ ಕಿರುಕುಳ ನೀಡುವುದು ಸಂಕಟವನ್ನೂ ಮೀರಿದೆ. #ಮಣಿಪುರದಲ್ಲಿ ದೀರ್ಘಕಾಲದವರೆಗೆ ಹಿಂಸಾಚಾರಗಳು ನಡೆಯಲು ಬಿಡಲಾಗಿದೆ. ಹಾಗಾಗಿ ಇದೀಗ ಇಂತಹ ಅವಮಾನದ ಘಟನೆ ನಡೆದಿದೆ ಎಂದು ಸಿನಿಮಾ ನಿರ್ಮಾಪಕ ಜಗತ್ ಜೂನ್  ಟ್ವೀಟ್ ಮಾಡಿದ್ದಾರೆ.

ಈ ಭಯಾನಕ ವೀಡಿಯೊವು ಆಕ್ರೋಶವನ್ನು ಹುಟ್ಟುಹಾಕಿದೆ. ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಗುರುವಾರ ಘೋಷಿಸಿದ ಯೋಜಿತ ಪ್ರತಿಭಟನಾ ಮೆರವಣಿಗೆಯ ಮುನ್ನಾದಿನದಂದು ಅವರ ದುರವಸ್ಥೆಯನ್ನು ಎತ್ತಿ ತೋರಿಸುತ್ತದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

”ಮೇ 4 ರಂದು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡಿದ ವೈರಲ್ ವೀಡಿಯೊಗಳಿಗೆ ಸಂಬಂಧಿಸಿದಂತೆ, ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ (ತೌಬಲ್ ಜಿಲ್ಲೆ) ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ… ತನಿಖೆ ಪ್ರಾರಂಭವಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲು ರಾಜ್ಯ ಪೊಲೀಸರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ” ಎಂದು ಮಣಿಪುರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಐಟಿಎಲ್‌ಎಫ್‌ನ ವಕ್ತಾರರ ಪ್ರಕಾರ, ”ಮೇ 4 ರಂದು ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಂಭವಿಸಿದ ಹೇಯ ದೃಶ್ಯವು, ಪುರುಷರು ಅಸಹಾಯಕ ಮಹಿಳೆಯರನ್ನು ನಿರಂತರವಾಗಿ ಕಿರುಕುಳ ನೀಡುವುದನ್ನು ತೋರಿಸುತ್ತದೆ. ಅವರು ತಮ್ಮ ಸೆರೆಯಾಳುಗಳೊಂದಿಗೆ ಅಳುತ್ತಾರೆ ಮತ್ತು ಮನವಿ ಮಾಡುತ್ತಾರೆ.”

“ಹೇಯ ಕೃತ್ಯ”ವನ್ನು ಖಂಡಿಸಿರುವ ವಕ್ತಾರರು, ”ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗವು ಈ ಅಪರಾಧದ ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಹೋರಾಟ ಮಾಡಬೇಕು” ಎಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಬಿಜೆಪಿಯು ‘ಕ್ರಿಶ್ಚಿಯನ್ ವಿರೋಧಿ’ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...