Homeಮುಖಪುಟಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ...

ಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ ನಿರ್ಧಾರ

- Advertisement -
- Advertisement -

ಇಂದಿನಿಂದ (ಜುಲೈ 20) ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ.

”ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ. ಈ ನಡುವೆ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.

ಮತ್ತೊಂದೆಡೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ,  ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆಗೆ ಪ್ರತಿಪಕ್ಷದ ನಾಯಕರು ಪಟ್ಟು ಹಿಡಿಯುವ ಸಾಧ್ಯತೆ ಇದೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ, ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭಾರತ-ಚೀನಾ ಗಡಿ ಸ್ಥಿತಿ, ಮುಂದಿನ ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟ ರಚನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳು ಮುಖಾಮುಖಿಯಾಗುವುದರೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ತೀವ್ರ ಗದ್ದಲ, ಕೋಲಾಹಲ ಮಧ್ಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಒಪ್ಪಿಗೆ ನೀಡಿದರೆ, ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಲು ಹಠ ಹಿಡಿದಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಖಾಮುಖಿಯಾಗುವ ಸಾಧ್ಯತೆಯಿರುವ ಇನ್ನೊಂದು ಪ್ರಮುಖ ವಿಷಯವೆಂದರೆ ದೆಹಲಿ ಸೇವಾ ಸುಗ್ರೀವಾಜ್ಞೆ.

ಮಣಿಪುರದಲ್ಲಿನ ಹಿಂಸಾಚಾರ ಬಗ್ಗೆ ಪ್ರಧಾನಿ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಲೇ ಬಂದಿದ್ದು ಸದನದಲ್ಲಿ ತೀವ್ರ ಗದ್ದಲ ನಡೆಸುವ ಸಾಧ್ಯತೆಯಿದೆ.

ದೆಹಲಿ ಅಧಿಕಾರಶಾಹಿಗಳ ಮೇಲಿನ ಮಸೂದೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಂಗಾರು ಅಧಿವೇಶದಲ್ಲಿ ಭಾರಿ ಮುಖಾಮುಖಿಯಾಗುವ ನಿರೀಕ್ಷೆಯಿದೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರೋಧ ಪಕ್ಷಗಳ ಬೆಂಬಲದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷದಲ್ಲಿ 105 ಸದಸ್ಯರು ಮಸೂದೆಯನ್ನು ವಿರೋಧಿಸಿದ್ದಾರೆ.

ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರ ರಾಜ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಇಂದು ಸಂಸತ್ತಿನ ಅಧಿವೇಶನ ಆರಂಭ ದಿನವೇ ಕೆಲವು ಪಕ್ಷಗಳು ಮುಂದೂಡಿಕೆ ನಿರ್ಣಯವನ್ನು ಮಂಡಿಸಲು ಯೋಜಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ ನೀಡಿ, ನಮ್ಮ ಪಕ್ಷದ ಮೊದಲ ಬೇಡಿಕೆಯೆಂದರೆ ಮಣಿಪುರ ವಿಷಯದ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವುದು ಮತ್ತು ಅದನ್ನು ಚರ್ಚಿಸಲು ನಮಗೆ ಅವಕಾಶ ನೀಡುವುದು. ನಾಳೆ, ನಾವು ಇದರ ಮೇಲೆ ಮುಂದೂಡಿಕೆ ನಿರ್ಣಯವನ್ನು ತರಲು ಬಯಸುತ್ತೇವೆ. ದೇಶದ ಪ್ರಮುಖ ಭಾಗವು ಪ್ರವಾಹದಿಂದ ತತ್ತರಿಸಿದೆ. ಈ ಬಗ್ಗೆಯೂ ಚರ್ಚೆಯಾಗಬೇಕು. ಬಾಲಸೋರ್ ರೈಲ್ವೆ ಅಪಘಾತದ ಬಗ್ಗೆಯೂ ಚರ್ಚಿಸಬೇಕು. ನಿರುದ್ಯೋಗ ಮತ್ತು ಹಣದುಬ್ಬರ ದೇಶದ ಸಾಮಾನ್ಯ ಸಮಸ್ಯೆಗಳಾಗಿವೆ. ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ಹೊಡೆತದ ಬಗ್ಗೆಯೂ ಚರ್ಚಿಸಬೇಕು. ಭಾರತ-ಚೀನಾ ಗಡಿ ಪರಿಸ್ಥಿತಿ ಮತ್ತು ಉಭಯ ದೇಶಗಳ ನಡುವಿನ ವ್ಯಾಪಾರವನ್ನು ಸಹ ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ ಒಟ್ಟು 17 ದಿನ ಕಲಾಪಗಳು ನಡೆಯಲಿವೆ. ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಕಟ್ಟಡಕ್ಕೆ ಮಧ್ಯಭಾಗದಲ್ಲಿ ವರ್ಗಾವಣೆಯಾಗಲಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಇದು 1927 ರಲ್ಲಿ ನಿರ್ಮಿಸಲಾದ ಪ್ರಸ್ತುತ ಕಟ್ಟಡಕ್ಕಿಂತ ಹೆಚ್ಚಿನ ಸ್ಥಳವನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...