Homeಮುಖಪುಟಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ...

ಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ ನಿರ್ಧಾರ

- Advertisement -
- Advertisement -

ಇಂದಿನಿಂದ (ಜುಲೈ 20) ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ.

”ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ. ಈ ನಡುವೆ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.

ಮತ್ತೊಂದೆಡೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ,  ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆಗೆ ಪ್ರತಿಪಕ್ಷದ ನಾಯಕರು ಪಟ್ಟು ಹಿಡಿಯುವ ಸಾಧ್ಯತೆ ಇದೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ, ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭಾರತ-ಚೀನಾ ಗಡಿ ಸ್ಥಿತಿ, ಮುಂದಿನ ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟ ರಚನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳು ಮುಖಾಮುಖಿಯಾಗುವುದರೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ತೀವ್ರ ಗದ್ದಲ, ಕೋಲಾಹಲ ಮಧ್ಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಒಪ್ಪಿಗೆ ನೀಡಿದರೆ, ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಲು ಹಠ ಹಿಡಿದಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಖಾಮುಖಿಯಾಗುವ ಸಾಧ್ಯತೆಯಿರುವ ಇನ್ನೊಂದು ಪ್ರಮುಖ ವಿಷಯವೆಂದರೆ ದೆಹಲಿ ಸೇವಾ ಸುಗ್ರೀವಾಜ್ಞೆ.

ಮಣಿಪುರದಲ್ಲಿನ ಹಿಂಸಾಚಾರ ಬಗ್ಗೆ ಪ್ರಧಾನಿ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಲೇ ಬಂದಿದ್ದು ಸದನದಲ್ಲಿ ತೀವ್ರ ಗದ್ದಲ ನಡೆಸುವ ಸಾಧ್ಯತೆಯಿದೆ.

ದೆಹಲಿ ಅಧಿಕಾರಶಾಹಿಗಳ ಮೇಲಿನ ಮಸೂದೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಂಗಾರು ಅಧಿವೇಶದಲ್ಲಿ ಭಾರಿ ಮುಖಾಮುಖಿಯಾಗುವ ನಿರೀಕ್ಷೆಯಿದೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರೋಧ ಪಕ್ಷಗಳ ಬೆಂಬಲದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷದಲ್ಲಿ 105 ಸದಸ್ಯರು ಮಸೂದೆಯನ್ನು ವಿರೋಧಿಸಿದ್ದಾರೆ.

ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರ ರಾಜ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಇಂದು ಸಂಸತ್ತಿನ ಅಧಿವೇಶನ ಆರಂಭ ದಿನವೇ ಕೆಲವು ಪಕ್ಷಗಳು ಮುಂದೂಡಿಕೆ ನಿರ್ಣಯವನ್ನು ಮಂಡಿಸಲು ಯೋಜಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ ನೀಡಿ, ನಮ್ಮ ಪಕ್ಷದ ಮೊದಲ ಬೇಡಿಕೆಯೆಂದರೆ ಮಣಿಪುರ ವಿಷಯದ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವುದು ಮತ್ತು ಅದನ್ನು ಚರ್ಚಿಸಲು ನಮಗೆ ಅವಕಾಶ ನೀಡುವುದು. ನಾಳೆ, ನಾವು ಇದರ ಮೇಲೆ ಮುಂದೂಡಿಕೆ ನಿರ್ಣಯವನ್ನು ತರಲು ಬಯಸುತ್ತೇವೆ. ದೇಶದ ಪ್ರಮುಖ ಭಾಗವು ಪ್ರವಾಹದಿಂದ ತತ್ತರಿಸಿದೆ. ಈ ಬಗ್ಗೆಯೂ ಚರ್ಚೆಯಾಗಬೇಕು. ಬಾಲಸೋರ್ ರೈಲ್ವೆ ಅಪಘಾತದ ಬಗ್ಗೆಯೂ ಚರ್ಚಿಸಬೇಕು. ನಿರುದ್ಯೋಗ ಮತ್ತು ಹಣದುಬ್ಬರ ದೇಶದ ಸಾಮಾನ್ಯ ಸಮಸ್ಯೆಗಳಾಗಿವೆ. ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ಹೊಡೆತದ ಬಗ್ಗೆಯೂ ಚರ್ಚಿಸಬೇಕು. ಭಾರತ-ಚೀನಾ ಗಡಿ ಪರಿಸ್ಥಿತಿ ಮತ್ತು ಉಭಯ ದೇಶಗಳ ನಡುವಿನ ವ್ಯಾಪಾರವನ್ನು ಸಹ ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ ಒಟ್ಟು 17 ದಿನ ಕಲಾಪಗಳು ನಡೆಯಲಿವೆ. ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಕಟ್ಟಡಕ್ಕೆ ಮಧ್ಯಭಾಗದಲ್ಲಿ ವರ್ಗಾವಣೆಯಾಗಲಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಇದು 1927 ರಲ್ಲಿ ನಿರ್ಮಿಸಲಾದ ಪ್ರಸ್ತುತ ಕಟ್ಟಡಕ್ಕಿಂತ ಹೆಚ್ಚಿನ ಸ್ಥಳವನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...