Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...