Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...