Homeಮುಖಪುಟಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? - ಕಾಂಗ್ರೆಸ್ ಪ್ರಶ್ನೆ

ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಣಿಪುರದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ವಿಡಿಯೋ ಕುರಿತು ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಕುರಿತು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿಯವರು 8 ನಿಮಿಷ 25 ಸೆಕೆಂಡ್ ಭಾಷಣ ಮಾಡಿದ್ದು ಅದರಲ್ಲಿ ಮಣಿಪುರದ ಬಗ್ಗೆ ಕೇವಲ 36 ಸೆಕೆಂಡ್ ಮಾತನಾಡಿದ್ದಾರೆ. ಮಾತ್ರವಲ್ಲದೇ ಅದರೊಟ್ಟಿಗೆ ರಾಜಸ್ಥಾನ ಮತ್ತು ಚತ್ತೀಸ್‌ಘಡ ರಾಜ್ಯಗಳನ್ನು ಉಲ್ಲೇಖಿಸಿದ್ದು ಏಕೆ? ಮಣಿಪುರದಲ್ಲಿ ಯಾರ ಸರ್ಕಾರವಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಠೆ ಪ್ರಶ್ನಿಸಿದ್ದಾರೆ.

ಮಣಿಪುರದ ವಿಡಿಯೋ ನೋಡಿ ನನಗೆ ನೋವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ವಿಡಿಯೋ 140 ಕೋಟಿ ಭಾರತೀಯರನ್ನು ಘಾಸಿಗೊಳಿಸಿದೆ ಎಂದು ಹೇಳಿದ್ದೀರಿ. ತದನಂತರ ನೀವು ಮಣಿಪುರದ ವಿಷಯಕ್ಕೆ ಕೇವಲ 36 ಸೆಕೆಂಡುಗಳನ್ನು ಮೀಸಲಿಟ್ಟಿದ್ದೀರಾ? ಛತ್ತೀಸ್‌ಗಢ ಮತ್ತು ರಾಜಸ್ಥಾನದ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದೀರಿ. ಇದಕ್ಕೆ ನಿಮ್ಮ ಸರ್ಕಾರವೇ ಹೊಣೆ. ನೀವು ಈ ಹಿಂದೆಯೇ ಮಣಿಪುರದ ಬಗ್ಗೆ ಮಾತನಾಡಿದ್ದರೆ, 77 ದಿನಗಳ ಹಳೆಯ ವೀಡಿಯೊವನ್ನು ನೋಡಿ ರಾಷ್ಟ್ರವು ಸ್ತಬ್ಧವಾಗಬೇಕಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

ನಿಮ್ಮ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆಯೇ? ನಿಮಗೆ ಪೊಲೀಸ್ ಬಲ ಇದೆ, ನಿಮಗೆ ತನಿಖಾ ಏಜೆನ್ಸಿಗಳಿವೆ. ಆದರೂ ಹಿಂಸಾಚಾರ ನಿಗ್ರಹಿಸಲಿಲ್ಲ. ನೀವು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಏಕೆ ವಜಾ ಮಾಡುತ್ತಿಲ್ಲ? ಘಟನೆ ನಡೆದು ಎರಡೂವರೆ ತಿಂಗಳಾಗಿದೆ. ವೀಡಿಯೊ ವೈರಲ್ ಆದ ನಂತರ ಮೊದಲ ಬಂಧನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಆ ವೀಡಿಯೊವನ್ನು ನೋಡುತ್ತಿರುವಾಗ, ಪ್ರತಿಯೊಬ್ಬ ಮಹಿಳೆ ಬೆದರಿಕೆಗೆ ಒಳಗಾಗುತ್ತಿದ್ದಾಳೆ” ಎಂದು ಶ್ರೀನಾಠೆ ಹೇಳಿದ್ದಾರೆ.

1800 ಗಂಟೆಗಳಿಗೂ ಹೆಚ್ಚು ಕಾಲ ಗ್ರಹಿಸಲಾಗದ ಮತ್ತು ಕ್ಷಮಿಸಲಾಗದ ಮೌನದ ನಂತರ, ಪ್ರಧಾನಮಂತ್ರಿ ಅಂತಿಮವಾಗಿ ಒಟ್ಟು 30 ಸೆಕೆಂಡುಗಳ ಕಾಲ ಮಣಿಪುರದ ಕುರಿತು ಮಾತನಾಡಿದರು. ಅದರ ನಂತರ, ಇತರ ರಾಜ್ಯಗಳಲ್ಲಿನ ವಿಶೇಷವಾಗಿ ಪ್ರತಿಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಮಹಿಳೆಯರ ಮೇಲಿನ ಅಪರಾಧಗಳನ್ನು ಸಮೀಕರಿಸುವ ಮೂಲಕ ಮಣಿಪುರದ ಬೃಹತ್ ಆಡಳಿತ ವೈಫಲ್ಯಗಳು ಮತ್ತು ಮಾನವೀಯ ದುರಂತದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಧಾನಮಂತ್ರಿ ಪ್ರಯತ್ನಿಸಿದರು. ಯುಪಿ ಮತ್ತು ಗುಜರಾತ್‌ನಂತಹ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿರ್ಲಕ್ಷಿಸಿದರು ಎಂದು ಕಾಂಗ್ರೆಸ್ ಮಾಧ್ಯಮ ಸಂಚಾಲಕ ಜೈರಾಂ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ. ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು ಯಾವುದೇ ನಾಗರಿಕತೆಗೆ ನಾಚಿಕೆಗೇಡಿನ ಸಂಗತಿಯಾಗಿದೆ. ದೇಶ ನಾಚಿಕೆಪಡುವಂತಾಗಿದೆ. ಅಪರಾಧದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನುಗಳನ್ನು ಬಲಪಡಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಘಟನೆಯು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರದಿಂದ ಆಗಿರಬಹುದು, ಅಪರಾಧಿ ದೇಶದ ಯಾವುದೇ ಮೂಲೆಯಲ್ಲಿ ಇದ್ದರೂ ಶಿಕ್ಷೆಯಿಂದ ಮುಕ್ತವಾಗಬಾರದು” ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇದನ್ನೂ ಓದಿ: 77 ದಿನಗಳ ನಂತರ ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...