HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...