Homeಮುಖಪುಟಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ...

ಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ ಕುರಿತು ಮಣಿಪುರ ಸಿಎಂ ಹೇಳಿಕೆ

- Advertisement -
- Advertisement -

ದೇಶಾದ್ಯಂತ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ ಎಂದು ಮಣಿಪುರ ಸಿಎಂ ಬಿರೇನ್ ಸಿಂಗ್ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಚಾನೆಲ್ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಅವರು, “ಇಲ್ಲಿ ಪ್ರತಿದಿನವೂ ಸಂಘರ್ಷ ನಡೆಯುತ್ತಿದೆ. ತುಂಬಾ ಮಂದಿ ಬಲಿಯಾಗಿದ್ದಾರೆ. ಇದೇ ರೀತಿಯ ಹಲವು ಎಫ್‌ಐಆರ್ ದಾಖಲಾದ ಬಗ್ಗೆ ಸಂದೇಶ ಬರುತ್ತಿದೆ. ಇಂತಹ ನೂರಾರು ಘಟನೆಗಳು ಮಣಿಪುರದಲ್ಲಿ ಎರಡು ತಿಂಗಳಲ್ಲಿ ನಡೆದಿದೆ. ಈ ವಿಡಿಯೋ ನಿನ್ನೆಯಷ್ಟೇ ಹೊರಗೆ ಬಂದಿದೆ. ಇಲ್ಲಿನ ‘ಗ್ರೌಂಡ್ ರಿಯಾಲಿಟಿ’ ನೋಡಿದ ಬಳಿಕ ನೀವು ಮಾತನಾಡಿ. ನಿಮ್ಮ ಆರೋಪಗಳನ್ನೆಲ್ಲ ಕೇಳಲು ನಾವು ತಯಾರಿಲ್ಲ. ಇದೇ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಅದಕ್ಕಾಗಿಯೇ ನಾವು ಇಂಟರ್ನೆಟ್‌ ಸೇವೆಯನ್ನು ಇಲ್ಲಿ ಬಂದ್ ಮಾಡಿದ್ದೇವೆ” ಎಂದಿದ್ದಾರೆ.

ಈ ಹೀನ ಘಟನೆ ಕಳೆದ ಮೇ 4ರಂದು ನಡೆದು ಈ ಬಗ್ಗೆ ಮೇ 18ರಂದು ಎಫ್‌ಐಆರ್ ಆಗಿದೆ. ಓರ್ವ ಮುಖ್ಯಮಂತ್ರಿಯಾಗಿ ನಿಮಗೆ ಮಾಹಿತಿ ಇಲ್ಲವೇ? ಎಂಬ ನಿರೂಪಕಿಯ ಪ್ರಶ್ನೆಗೆ ಕೋಪೋದ್ರಿಕ್ತರಾದ ಸಿಎಂ ಮೇಲಿನ ಹೇಳಿಕೆ ನೀಡಿದ್ದು, ಈ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ಧೇವೆ. ಯಾರೆಲ್ಲ ಇದ್ದಾರೋ ಅವರನ್ನು ಬಂಧಿಸುತ್ತೇವೆ’ ಎಂದು ಹೇಳುತ್ತಲೇ ಮುಂದಿನ ಪ್ರಶ್ನೆ ಕೇಳಿದಾಗ ಕರೆಯನ್ನು ಕಟ್ ಮಾಡಿದ್ದಾರೆ.

ಈ ರೀತಿಯಾಗಿ ಬಿರೇನ್ ಸಿಂಗ್ ಮಾತನಾಡಿರುವ ವಿಡಿಯೋ ತುಣುಕನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಹಲವರು ಅವರೊಬ್ಬ ಅಸಮರ್ಥ ಮುಖ್ಯಮಂತ್ರಿ ಎಂದು ಕಿಡಿಕಾರಿದ್ದಾರೆ.

ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿಡಿಯೋವೊಂದು ವೈರಲ್ ಆಗಿದೆ. ಆ ಘಟನೆಯಲ್ಲಿನ ಸಂತ್ರಸ್ತ ಮಹಿಳೆಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, ”ಆ ಗುಂಪಿನೊಂದಿಗೆ ಪೊಲೀಸರೇ ನಮನ್ನು ಬಿಟ್ಟಿದ್ದರು” ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಗಂಡಸರ ಗುಂಪೊಂದು ಮೆರವಣಿಗೆ ನಡೆಸುತ್ತಿರುವುದನ್ನು ಕಾಣುತ್ತದೆ. ಒಬ್ಬರು 20ರ ಹದಿಹರೆಯದ ಮಹಿಳೆ ಮತ್ತು ಇನ್ನೊಬ್ಬರು 40 ವರ್ಷದ ಮಹಿಳೆಯಾಗಿದ್ದಾರೆ. ಕೆಲವು ಪುರುಷರು ಇಬ್ಬರು ಮಹಿಳೆಯರನ್ನು ಹೊಲದ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಮೇ 18ರಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, 20ರ ಹದಿಹರೆಯದ ಮಹಿಳೆಯನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ; ಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...