Homeಮುಖಪುಟಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬಳಿಕ ನಾಲ್ವರ ಬಂಧನ

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬಳಿಕ ನಾಲ್ವರ ಬಂಧನ

- Advertisement -
- Advertisement -

ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲು ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆದ ಬಳಿಕ ಗುರುವಾರ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತ. ಆಬಳಿಕವಷ್ಟೇ ಅಲ್ಲಿಯ ಬಿಜೆಪಿ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಯಿತು. ಸಧ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಚಾನೆಲ್ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು, ಗುರುವಾರ ಸಂಜೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದರು. ಕೆಲವು ಗಂಟೆಗಳ ನಂತರ, ಇನ್ನೂ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

”ಇಲ್ಲಿ ಪ್ರತಿದಿನವೂ ಸಂಘರ್ಷ ನಡೆಯುತ್ತಿದೆ. ತುಂಬಾ ಮಂದಿ ಬಲಿಯಾಗಿದ್ದಾರೆ. ಇದೇ ರೀತಿಯ ಹಲವು ಎಫ್‌ಐಆರ್ ದಾಖಲಾದ ಬಗ್ಗೆ ಸಂದೇಶ ಬರುತ್ತಿದೆ. ಇಂತಹ ನೂರಾರು ಘಟನೆಗಳು ಮಣಿಪುರದಲ್ಲಿ ಎರಡು ತಿಂಗಳಲ್ಲಿ ನಡೆದಿದೆ. ಈ ವಿಡಿಯೋ ನಿನ್ನೆಯಷ್ಟೇ ಹೊರಗೆ ಬಂದಿದೆ. ಇಲ್ಲಿನ ‘ಗ್ರೌಂಡ್ ರಿಯಾಲಿಟಿ’ ನೋಡಿದ ಬಳಿಕ ನೀವು ಮಾತನಾಡಿ. ನಿಮ್ಮ ಆರೋಪಗಳನ್ನೆಲ್ಲ ಕೇಳಲು ನಾವು ತಯಾರಿಲ್ಲ. ಇದೇ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಅದಕ್ಕಾಗಿಯೇ ನಾವು ಇಂಟರ್ನೆಟ್‌ ಸೇವೆಯನ್ನು ಇಲ್ಲಿ ಬಂದ್ ಮಾಡಿದ್ದೇವೆ” ಎಂದು ಸಿಂಗ್ ಹೇಳಿದ್ದಾರೆ.

ಈ ಘಟನೆ ಮೇ 4ರಂದು ನಡೆದಿದೆ ಎನ್ನಲಾಗಿದ್ದು, ಬುಧವಾರದಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಗುರುವಾರ ಕೃತ್ಯದ ಬಗ್ಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಯಿತು. ಪ್ರಧಾನಿ ಮೋದಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ 77 ದಿನಗಳಲ್ಲಿ ಒಂದೇ ಒಂದು ಮಾತು ಕೂಡ ಆಡಲಾರದವರು, ಗುರುವಾರ ಈ ಬಗ್ಗೆ 16 ಸೆಕೆಂಡ್‌ಗಳ ಕಾಲ ಮಾತನಾಡಿದ್ದಾರೆ.

ಇದನ್ನೂ ಓದಿ: 77 ದಿನಗಳ ನಂತರ ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ

ಬಂಧಿತವಾದ ಮೊದಲ ವ್ಯಕ್ತಿಯನ್ನು ಹುಯಿರಮ್ ಸರದಾಶ್ ಸಿಂಗ್‌ ಎಂದು ಗುರುತಿಸಲಾಗಿದ್ದು, ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಕುಕೃತ್ಯ ಎಸಗಲು ದುಷ್ಕರ್ಮಿಗಳ ಗುಂಪಿಗೆ ನಿರ್ದೇಶನ ನೀಡಿರುವುದು ಬುಧವಾರ ಬಯಲಾದ ವಿಡಿಯೊದಲ್ಲಿ ಕಂಡಬಂದಿದೆ. ಬಂಧಿತ ಇತರ ಮೂವರು ವ್ಯಕ್ತಿಗಳ ಗುರುತು ತಕ್ಷಣಕ್ಕೆ ಪತ್ತೆಯಾಗಿಲ್ಲ.

ಹಿರಿಯ ಅಧಿಕಾರಿಗಳು ವಿಡಿಯೊವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದು, ಬಂಧಿತ ವ್ಯಕ್ತಿಗಳು ಮತ್ತು ವಿಡಿಯೊದಲ್ಲಿ ಕಾಣಿಸಿಕೊಂದಿರುವ ವ್ಯಕ್ತಿಗಳ ಸಾಮ್ಯತೆ ಪರಿಶೀಲನೆ ನಡೆಸುತ್ತಿದ್ದಾರೆ.

”ವಿಡಿಯೊ ಬಯಲಾಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗುರುವಾರ ರಾತ್ರಿ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೌಬಲ್ ಜಿಲ್ಲೆಯ ನಾ‌ಗ್‌ಪೋಕ್‌ ಸೆಕ್ಸ್, ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇತರ ಆರೋಪಿಗಳನ್ನು ಶ್ರೀಪುವಾಗಿ ಬಂಧಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಡೆದ ರಾತ್ರಿ ಕಾರ್ಯಾಚರಣೆಯಲ್ಲಿ ಕೌಬಲ್ ಜಿಲ್ಲೆಯಿಂದ 32 ವರ್ಷದ ಆರೋಪಿ ಹಯಿರಮ್ ಹರದಾಶ್ ಸಿಂಗ್‌ನನ್ನು ಬಂಧಿಸಲಾಗಿದೆ.

ದುಷ್ಕರ್ಮಿಗಳ ಗುಂಪು ಮಹಿಳೆಯರನ್ನು ಬಿಡುಗಡೆ ಮಾಡುವ ಮೊದಲು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ನಡುವೆ, ಗ್ರಾಮಸ್ತರು ಬಂಧಿತ ಆರೋಪಿ ಹರದಾಜ್ ಸಿಂಗ್ ಅವರ ಮನೆಗೆ ಬೆಂಕಿ ಹಚ್ಚಿದ್ದು, ಕುಟುಂಬವನ್ನು ಬಹಿಷ್ಕರಿಸಿದ್ದಾರೆ. ”ಇದೊಂದು ಅಮಾನವೀಯ ಕೃತ್ಯ ಎಂದಿರುವ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅಪರಾಧಿಗಳು ಗರಿಷ್ಠ ದಂಡನೆಗೆ ಅರ್ಹರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...