Homeಮುಖಪುಟಅತ್ಯಾಚಾರದ ಕಾನೂನನ್ನು ಪುರುಷರ ವಿರುದ್ಧ ಅಸ್ತ್ರವಾಗಿ ದುರ್ಬಳಕೆ: ಉತ್ತರಾಖಂಡ ಹೈಕೋರ್ಟ್

ಅತ್ಯಾಚಾರದ ಕಾನೂನನ್ನು ಪುರುಷರ ವಿರುದ್ಧ ಅಸ್ತ್ರವಾಗಿ ದುರ್ಬಳಕೆ: ಉತ್ತರಾಖಂಡ ಹೈಕೋರ್ಟ್

- Advertisement -
- Advertisement -

ಮಹಿಳೆಯರು ತಮ್ಮ ಪುರುಷ  ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾದಾಗ ಅಥವಾ ಬೇರೆ ಕಾರಣಗಳಿಗಾಗಿ ಅವರ ವಿರುದ್ಧ ಅತ್ಯಾಚಾರದ ಕಾನೂನನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಉತ್ತರಾಖಂಡ್ ಹೈಕೋರ್ಟ್ ಜುಲೈ 5 ರಂದು ಹೇಳಿದೆ ಎಂದು ಗುರುವಾರ ವರದಿಯಾಗಿದೆ.

ಮಹಿಳೆಯೊಬ್ಬಳೊಂದಿಗೆ ವ್ಯಕ್ತಿಯೊಬ್ಬ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಆಕೆಯನ್ನು ಮದುವೆಯಾಗುಬೇಕು ಎಂದು ಆತನ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ಜಸ್ಟಿಸ್ ಶರದ್‌ ಕುಮಾರ್ ಶರ್ಮಾ ಈ ತೀರ್ಪು ನೀಡಿದ್ದಾರೆ.

”ಮನೋಜ್ ಕುಮಾರ್ ಆರ್ಯ ಎಂಬ ವ್ಯಕ್ತಿ 2005ರಿಂದ ದೂರುದಾರರೊಂದಿಗೆ ಒಮ್ಮತದ ಲೈಂಗಿಕ ಸಂಬಂಧವನ್ನು ಹೊಂದಿದ್ದರು. ಇಬ್ಬರಲ್ಲಿ ಯಾರಿಗಾದರೂ ಕೆಲಸ ಸಿಕ್ಕಿದ ತಕ್ಷಣ ಮದುವೆಯಾಗುವುದಾಗಿ ಇಬ್ಬರೂ ಪರಸ್ಪರ ಭರವಸೆ ನೀಡಿದ್ದರು” ಎಂದು ಹೈಕೋರ್ಟ್ ಗಮನಿಸಿದೆ.

ವಿವಾಹದ ಭರವಸೆಯ ಮೇರೆಗೆ ಪುರುಷ ಮತ್ತು ದೂರುದಾರರು ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಅವರು ಬೇರೆ ಮಹಿಳೆಯನ್ನು ಮದುವೆಯಾದ ನಂತರವೂ ಅವರ ಸಂಬಂಧ ಮುಂದುವರೆಯಿತು ಎಂದು ಬಾರ್ ಬೆಂಚ್ ವರದಿ ಮಾಡಿದೆ.

”ಅರ್ಜಿದಾರರು ಈಗಾಗಲೇ ವಿವಾಹಿತ ವ್ಯಕ್ತಿಯಾಗಿರುವ ವಿಚಾರ ದೂರುದಾರರಿಗೆ ತಿಳಿದ ನಂತರವೂ ಸ್ವಯಂಪ್ರೇರಣೆಯಿಂದ ಸಂಬಂಧವನ್ನು ಮುಂದುವರೆಸಿದ್ದಾರೆ. ಹಾಗಾಗಿ ಇದರಲ್ಲಿ ಒಪ್ಪಿಗೆಯ ಅಂಶವು ಒಳಗೊಂಡಿದೆ” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಮಹಿಳೆಯು ಜೂನ್ 30, 2020ರಂದು ಮನೋಜ್ ಕುಮಾರ್ ಆರ್ಯ ಅವರ ವಿರುದ್ಧ ದೂರು ದಾಖಲಿಸಿದ್ದರು. ಅವರು ಬೇರೆ ಯುವತಿಯನ್ನು ಮದುವೆಯಾಗಿದ್ದಕ್ಕೆ ಪ್ರತಿಕಾರವಾಗಿ ಮಹಿಳೆ ಆರೋಪ ಮಾಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.

ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೋ ಇಲ್ಲವೋ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಯಬೇಕು ಆನಂತರ ವರದಿಯನ್ನು ನೀಡಿದ ನಂತರವೇ ಆಕೆಯ ಆರೋಪಗಳನ್ನು ದೃಢಪಡಿಸಬಹುದಿತ್ತು ಎಂದು ನ್ಯಾಯಾಧೀಶರು ಹೇಳಿದರು.

”ಮದುವೆಯ ಒಂದು ಅಂಶ ಅಥವಾ ಭರವಸೆ, ಮತ್ತು ಆ ನೆಪದಲ್ಲಿ, ಒಮ್ಮತದ ಸಂಬಂಧಕ್ಕೆ ಪ್ರವೇಶಿಸುವಾಗ, ಮದುವೆಯ ಭರವಸೆಯ ಸುಳ್ಳುತನವನ್ನು ಅದರ ಪ್ರಾರಂಭದ ಆರಂಭಿಕ ಹಂತದಲ್ಲಿ ಪರೀಕ್ಷಿಸಬೇಕು ಮತ್ತು ನಂತರದ ಹಂತದಲ್ಲಿ ಅಲ್ಲ” ಎಂದು ತೀರ್ಪು ಹೇಳಿದೆ.

”ಆರಂಭಿಕ ಹಂತವನ್ನು 15 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗುವುದಿಲ್ಲ ಮತ್ತು ಅರ್ಜಿದಾರರ ಮದುವೆಯ ನಂತರವೂ ಮುಂದುವರೆದಿದೆ.”

ಇದನ್ನೂ ಓದಿ: ಮಣಿಪುರ ಮಹಿಳೆ ಅತ್ಯಾಚಾರ ಪ್ರಕರಣದ ಆರೋಪಿ ಮುಸ್ಲಿಂ ಎಂದು ಸುಳ್ಳು ಸುದ್ದಿ ಪ್ರಕಟಿಸಿ ನಂತರ ಡಿಲೀಟ್ ಮಾಡಿದ ANI: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...